Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಾದೇಶಿಕ ಸೇನೆಯನ್ನು ಕರೆಸಲು ಸೇನಾ...

ಪ್ರಾದೇಶಿಕ ಸೇನೆಯನ್ನು ಕರೆಸಲು ಸೇನಾ ಮುಖ್ಯಸ್ಥರಿಗೆ ಕೇಂದ್ರ ಅಧಿಕಾರ

ವಾರ್ತಾಭಾರತಿವಾರ್ತಾಭಾರತಿ9 May 2025 10:10 PM IST
share

ಹೊಸದಿಲ್ಲಿ: ಪಾಕಿಸ್ತಾನದ ಜೊತೆಗಿನ ಉದ್ವಿಗ್ನತೆ ಬಿಗಡಾಯಿಸುತ್ತಿರುವಂತೆಯೇ, ಪ್ರಾದೇಶಿಕ ಸೇನೆ (ಟೆರಿಟೋರಿಯಲ್ ಆರ್ಮಿ)ಯ ಸದಸ್ಯರನ್ನು ಕರೆಸಿಕೊಳ್ಳಲು ಕೇಂದ್ರ ಸರಕಾರವು ಸೇನಾ ಮುಖ್ಯಸ್ಥರಿಗೆ ಅಧಿಕಾರ ನೀಡಿದೆ. 1948ರ ಪ್ರಾದೇಶಿಕ ಸೇನಾ ಕಾಯ್ದೆಯ ನಿಯಮ 33ರಡಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಈಗ ಅಸ್ತಿತ್ವದಲ್ಲಿರುವ 32 ಪ್ರಾದೇಶಿಕ ಸೇನಾ ಕಾಲಾಳು ಬೆಟಾಲಿಯನ್‌ಗಳಿಂದ ಸದಸ್ಯರನ್ನು ಪಡೆದುಕೊಳ್ಳಲಾಗುವುದು ಮತ್ತು ಆಯ್ದ ಘಟಕಗಳನ್ನು ದಕ್ಷಿಣ, ಪೂರ್ವ, ಪಶ್ಚಿಮ, ಮಧ್ಯ, ಉತ್ತರ ಮತ್ತು ನೈರುತ್ಯ ಕಮಾಂಡ್‌ಗಳು ಹಾಗೂ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್ ಹಾಗೂ ಸೇನಾ ತರಬೇತಿ ಕಮಾಂಡ್ ಸೇರಿದಂತೆ ವಿವಿಧ ಪ್ರಮುಖ ಸೇನಾ ವಲಯಗಳಿಗೆ ನಿಯೋಜಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ಘೋಷಿಸಿದೆ.

ಎಪ್ರಿಲ್ 22ರಂದು ಭಯೋತ್ಪಾದಕರು ಪಹಲ್ಗಾಮ್‌ನಲ್ಲಿ 26 ಪ್ರವಾಸಿಗಳನ್ನು ಅಮಾನುಷವಾಗಿ ಕೊಂದಿರುವುದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ‘ಆಪರೇಶನ್ ಸಿಂಧೂರ’ ಹೆಸರಿನಲ್ಲಿ ಪಾಕಿಸ್ತಾನದಲ್ಲಿರುವ ವಿವಿಧ ಭಯೋತ್ಪಾದಕ ತರಬೇತಿ ಶಿಬಿರಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಆ ಬಳಿಕ, ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ತಾರಕಕ್ಕೇರಿದೆ.

►ಏನಿದು ಪ್ರಾದೇಶಿಕ ಸೇನೆ?

ಪ್ರಾದೇಶಿಕ ಸೇನೆ ಎಂದರೆ ಅರೆಕಾಲಿಕ ಸ್ವಯಂಸೇವಕರನ್ನು ಒಳಗೊಂಡ ಸೇನಾ ಮೀಸಲು ಪಡೆಯಾಗಿದೆ. ಇದರ ಸದಸ್ಯರು ಭಾರತೀಯ ಸೇನೆಗೆ ಅದರ ಕಾರ್ಯಾಚರಣೆಗಳಲ್ಲಿ ನೆರವು ನೀಡುತ್ತಾರೆ. ಈ ಸೇನೆಯಲ್ಲಿ ಮೂಲ ಸೇನೆಯಲ್ಲಿರುವಂತೆ ಆಫಿಸರ್‌ಗಳು, ಜೂನಿಯರ್ ಕಮಿಶನ್ಡ್ ಆಫಿಸರ್‌ಗಳು, ನಾನ್-ಕಮಿಶನ್ಡ್ ಆಫಿಸರ್‌ಗಳು ಮತ್ತು ಇತರ ಸಿಬ್ಬಂದಿ ಇರುತ್ತಾರೆ. ಆದರೆ ಅವರೆಲ್ಲರೂ ನಾಗರಿಕ ಕ್ಷೇತ್ರದಲ್ಲಿ ಜೀವನಾಧಾರದ ಕೆಲಸಗಳನ್ನು ಹೊಂದಿದವರಾಗಿದ್ದಾರೆ.

ಪ್ರಾದೇಶಿಕ ಸೇನೆಯ ಮುಖ್ಯ ಪಾತ್ರ ತುರ್ತು ಸಂದರ್ಭಗಳಲ್ಲಿ ಭಾರತೀಯ ಸೇನೆಯನ್ನು ಅದರ ದೈನಂದಿನ ಕರ್ತವ್ಯಗಳಿಂದ ಮುಕ್ತಗೊಳಿಸುವುದು ಮತ್ತು ಅದರ ಪ್ರಧಾನ ಕರ್ತವ್ಯದಲ್ಲಿ ನೆರವು ನೀಡುವುದು.

ಪ್ರಾದೇಶಿಕ ಸೇನೆಯ ಸದಸ್ಯರಿಗೆ ಸೇನಾ ತರಬೇತಿಯನ್ನು ನೀಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X