Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣ | ಅಕ್ರಮ ಬಾಡಿಗೆ ತಾಯ್ತನ ಹಾಗೂ...

ತೆಲಂಗಾಣ | ಅಕ್ರಮ ಬಾಡಿಗೆ ತಾಯ್ತನ ಹಾಗೂ ಮಾನವ ಅಂಡಾಣುಗಳ ವ್ಯಾಪಾರ ಜಾಲ ಬಯಲಿಗೆ

ವಾರ್ತಾಭಾರತಿವಾರ್ತಾಭಾರತಿ15 Aug 2025 8:54 PM IST
share
ತೆಲಂಗಾಣ | ಅಕ್ರಮ ಬಾಡಿಗೆ ತಾಯ್ತನ ಹಾಗೂ ಮಾನವ ಅಂಡಾಣುಗಳ ವ್ಯಾಪಾರ ಜಾಲ ಬಯಲಿಗೆ

ಹೈದರಾಬಾದ್: ಸೃಷ್ಟಿ ಐವಿಎಫ್ ಕ್ಲಿನಿಕ್ ಪ್ರಕರಣದಲ್ಲಿ ಐವಿಎಫ್ ಚಿಕಿತ್ಸೆಯ ಸೋಗಿನಲ್ಲಿ ಮಗುವೊಂದನ್ನು ಮಾರಾಟ ಮಾಡುತ್ತಿದ್ದುದನ್ನು ಬಯಲುಗೊಳಿಸಿದಂತೆಯೇ, ಶುಕ್ರವಾರ ಸೈಬರಾಬಾದ್ ಠಾಣೆ ಪೊಲೀಸರು ಹೈದರಾಬಾದ್ ನಲ್ಲಿ ನಡೆಯುತ್ತಿದ್ದ ಬಾಡಿಗೆ ತಾಯ್ತನ ಹಾಗೂ ಅಕ್ರಮ ಮಾನವ ಅಂಡಾಣುಗಳ ವ್ಯಾಪಾರವನ್ನು ಭೇದಿಸಿದ್ದಾರೆ.

ಹಲವಾರು ಐವಿಎಫ್ ಕೇಂದ್ರಗಳೊಂದಿಗೆ ಕೈಜೋಡಿಸಿ ಏಳು ಮಂದಿ ಮಹಿಳೆಯರು ಹಾಗೂ ಓರ್ವ ಪುರುಷ ಈ ಜಾಲದ ಕಾರ್ಯಾಚರಣೆ ನಡೆಸುತ್ತಿದ್ದರು ಎನ್ನಲಾಗಿದೆ.

ಮಕ್ಕಳಿಲ್ಲದ ದಂಪತಿಗಳ ಹತಾಶೆಯನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಈ ಆರೋಪಿಗಳು, ಅದನ್ನು ತಮ್ಮ ಹಣಕಾಸು ಲಾಭಕ್ಕೆ ಬಳಸಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪ್ರಮುಖ ಆರೋಪಿ ನರ್ರೇದುಲ್ಲಾ ಲಕ್ಷ್ಮಿ ರೆಡ್ಡಿ ಈ ಮುನ್ನ ಅಂಡಾಣು ದಾನಿ ಹಾಗೂ ಬಾಡಿಗೆ ತಾಯಿಯಾಗಿ ಕೆಲಸ ನಿರ್ವಹಿಸಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.

ಇತರ ಏಜೆಂಟ್ ಗಳು, ಫಲವಂತಿಕೆ ಕ್ಲಿನಿಕ್ ಗಳು ಹಾಗೂ ಕೇಂದ್ರಗಳೊಂದಿಗಿನ ತನ್ನ ಸಂಪರ್ಕ ಜಾಲ ಹಾಗೂ ತನ್ನ ಅನುಭವವನ್ನು ಬಳಸಿಕೊಂಡು ಆಕೆ ಇತರ ಮಹಿಳೆಯರನ್ನು ಅಂಡಾಣು ದಾನಿಗಳು ಅಥವಾ ಬಾಡಿಗೆ ತಾಯಿಯರಾಗಿ ಕಾರ್ಯನಿರ್ವಹಿಸಲು ನೇಮಿಸಿಕೊಳ್ಳುತ್ತಿದ್ದಳು ಹಾಗೂ ಅವರನ್ನು ಐವಿಎಫ್ ಕೇಂದ್ರಗಳಿಗೆ ಶಿಫಾರಸು ಮಾಡುತ್ತಿದ್ದರು ಎನ್ನಲಾಗಿದೆ. ಪ್ರತಿಯೊಂದು ಯಶಸ್ವಿ ವಿಧಾನಕ್ಕೆ ಆಕೆ ಗಮನಾರ್ಹ ಪ್ರಮಾಣದ ಹಣವನ್ನು ಸ್ವೀಕರಿಸುತ್ತಿದ್ದರು ಎಂದು ಹೇಳಲಾಗಿದೆ.

ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರನ್ನು ಗುರಿಯಾಗಿಸಿಕೊಳ್ಳುತ್ತಿದ್ದ ನರ್ರೇದುಲ್ಲಾ ಲಕ್ಷ್ಮಿ ರೆಡ್ಡಿ, ಅವರಿಗೆ ತಮ್ಮ ಅಂಡಾಣು ದಾನ ಮಾಡುವಂತೆ, ಇಲ್ಲವೆ ಬಾಡಿಗೆ ತಾಯಿಯಾಗುವಂತೆ ಒತ್ತಡ ಹೇರುತ್ತಿದ್ದಳು ಹಾಗೂ ಆಸ್ಪತ್ರೆಗಳಿಂದ ಹೆಚ್ಚುವರಿ ನಿರ್ವಹಣಾ ವೆಚ್ಚವನ್ನು ವಸೂಲಿ ಮಾಡಿಕೊಂಡು, ಅವರನ್ನು ತನ್ನ ನಿವಾಸದಲ್ಲಿ ಇರಿಸಿಕೊಳ್ಳುತ್ತಿದ್ದಳು ಎಂದು ಆರೋಪಿಸಲಾಗಿದೆ.

ಈ ಕುರಿತು ವಿಶ್ವಾಸಾರ್ಹ ಮಾಹಿತಿ ಸ್ವೀಕರಿಸಿದ ನಂತರ, ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಉಪಸ್ಥಿತಿಯಲ್ಲಿ ವಿಶೇಷ ಪೊಲೀಸ್ ತಂಡವೊಂದು ಲಕ್ಷ್ಮಿಯ ನಿವಾಸದ ಮೇಲೆ ದಾಳಿ ನಡೆಸಿದೆ. ಈ ಕಾರ್ಯಾಚರಣೆಯ ವೇಳೆ, ಅಕ್ರಮ ಬಾಡಿಗೆ ತಾಯ್ತನ ಹಾಗೂ ಮಾನವ ಅಂಡಾಣುಗಳ ವ್ಯಾಪಾರದಲ್ಲಿ ತೊಡಗಿದ್ದವರನ್ನು ಬಂಧಿಸಲಾಗಿದೆ.

ಈ ಸಂಬಂಧ, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳು, ಬಾಡಿಗೆ ತಾಯ್ತನ ನಿರ್ಬಂಧ ಕಾಯ್ದೆಯ ವಿವಿಧ ಸೆಕ್ಷನ್ ಗಳು ಹಾಗೂ ಸಂತಾನೋತ್ಪತ್ತಿ ತಂತ್ರಜ್ಞಾನ ನೆರವು ಕಾಯ್ದೆಯ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವಿಸ್ತೃತ ತನಿಖೆಗೆ ಚಾಲನೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X