Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎಸ್‌ಡಿಎಸ್‌ - ಲೋಕನೀತಿ ಚುನಾವಣಾಪೂರ್ವ...

ಸಿಎಸ್‌ಡಿಎಸ್‌ - ಲೋಕನೀತಿ ಚುನಾವಣಾಪೂರ್ವ ಸಮೀಕ್ಷೆ | ಶ್ರೀಮಂತರಿಗಷ್ಟೇ ಅಭಿವೃದ್ಧಿಯ ಪ್ರಯೋಜನ ಲಭಿಸಿದೆ

ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ.32 ಮಂದಿಯ ಅನಿಸಿಕೆ

ವಾರ್ತಾಭಾರತಿವಾರ್ತಾಭಾರತಿ11 April 2024 9:55 PM IST
share
ಸಿಎಸ್‌ಡಿಎಸ್‌ - ಲೋಕನೀತಿ ಚುನಾವಣಾಪೂರ್ವ ಸಮೀಕ್ಷೆ | ಶ್ರೀಮಂತರಿಗಷ್ಟೇ ಅಭಿವೃದ್ಧಿಯ ಪ್ರಯೋಜನ ಲಭಿಸಿದೆ

ಹೊಸದಿಲ್ಲಿ : ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲವೆಂದು ಪ್ರತಿ 10 ಮತದಾರರ ಪೈಕಿ ಇಬ್ಪರು ಭಾವಿಸಿದ್ದಾರೆಂದು ‘ಸಿಎಸ್ಡಿಎಸ್-ಲೋಕನೀತಿ 2024’ ಚುನಾವಣಾಪೂರ್ವ ಸಮೀಕ್ಷಾ ವರದಿ ಬಹಿರಂಗಪಡಿಸಿದೆ. ಶೇ.32 ಮಂದಿ ಮತದಾರರು, ಕಳೆದ ಐದು ವರ್ಷಗಳಲ್ಲಿ ಕೇವಲ ಶ್ರೀಮಂತರಷ್ಟೇ ಅಭಿವೃದ್ಧಿಯನ್ನು ಕಂಡಿದ್ದಾರೆ ಎಂದು ಭಾವಿಸಿರುವುದಾಗಿ ವರದಿ ತಿಳಿಸಿದೆ.

ದೇಶವನ್ನು ಅಭಿವೃದ್ಧಿಪಡಿಸಲು ನರೇಂದ್ರ ಮೋದಿಯವರು ಉತ್ತಮ ಎಂದು ಶೇ.30ರಷ್ಟು ಮತದಾರರು ಭಾವಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಂತೆ, ಈ ಸಲದ ಚುನಾವಣೆಯಲ್ಲೂ ಶೇ.14 ಮಂದಿ ಮತದಾರರು ಅಭಿವೃದ್ಧಿಯನ್ನು ಪ್ರಮುಖ ಚುನಾವಣಾ ವಿಷಯವಾಗಿ ಪರಿಗಣಿಸಿದ್ದಾರೆಂದು ವರದಿ ಗಮನಸೆಳೆದಿದೆ.

ಕಳೆದ ಐದು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲವೆಂದು ಪ್ರತಿ 10 ಮತದಾರರ ಪೈಕಿ ಇಬ್ಬರು ಅಭಿಪ್ರಾಯಿಸಿದ್ದಾರೆ. ಇನ್ನು ಶೇ.32 ಮಂದಿ ಮತದಾರರು, ಕಳೆದ ಐದು ವರ್ಷಗಳಲ್ಲಿ ಕೇವಲ ಶ್ರೀಮಂತರಷ್ಟೇ ಅಭಿವೃದ್ಧಿಯನ್ನು ಕಂಡಿದ್ದಾರೆ ಎಂದು ಭಾವಿಸಿರುವುದಾಗಿ ಸಿಎಸ್ಡಿಎಸ್-ಲೋಕನೀತಿ ಚುನಾವಣಾ ಪೂರ್ವ ಸಮೀಕ್ಷೆ ತಿಳಿಸಿದೆ. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರಕಾರದ ಆಡಳಿತವಿದ್ದಾಗಲೂ, ದೊಡ್ಡ ಸಂಖ್ಯೆಯ ಮತದಾರರು ಅಂದರೆ ಶೇ.43ರಷ್ಟು ಮಂದಿ, ಕೇಂದ್ರ ಸರಕಾರದ ಅಭಿವೃದ್ಧಿ ಉಪಕ್ರಮಗಳು ಪ್ರಾಥಮಿಕವಾಗಿ ಶ್ರೀಮಂತರಿಗಷ್ಟೇ ಪ್ರಯೋಜನಗಳನ್ನು ತಂದುಕೊಟ್ಟಿದೆಯೆಂದು ಅಭಿಪ್ರಾಯಿಸಿದ್ದರು. ಆದರೆ ಈ ಸಲದ ಸಮೀಕ್ಷೆಯಲ್ಲಿ ಎಲ್ಲರಿಗೂ ಸಮಾನವಾದ ರೀತಿಯಲ್ಲಿ ಅಭಿವೃದ್ಧಿಗಳು ಆಗಿದೆಯೆಂದು ಭಾವಿಸುವ ಮತದಾರರ ಪ್ರಮಾಣ ಶೇಕಡ 48 ಆಗಿದೆ. 2004ರಿಂದೀಚೆಗೆ ಆದಂತಹ ಅತ್ಯಂತ ಗಣನೀಯ ಏರಿಕೆ ಇದಾಗಿದೆ. ಆದರೆ ಪ್ರತಿ ಹತ್ತು ಮಂದಿಯಲ್ಲಿ ಕೇವಲ ಮೂವರು ಮಾತ್ರ (27 ಶೇ.) ಎಲ್ಲರಿಗೂ ಅಭಿವೃದ್ಧಿಯ ಪ್ರಯೋಜನ ದೊರೆತಿದೆ ಎಂದು ಭಾವಿಸಿದ್ದಾರೆ.

ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಳವಾಗಿದೆ ; ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ.55 ಮಂದಿಯ ಆಭಿಮತ

ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರ ಹೆಚ್ಚಿದೆಯೆಂದು ಸಿಎಸ್ಡಿಎಸ್-ಲೋಕನೀತಿ 2024 ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಪಾಲ್ಗೊಂಡವರಲ್ಲಿ ಅರ್ಧಾಂಶಕ್ಕಿಂತಲೂ ಅಧಿಕ (ಶೇ.55)ಮಂದಿ ಹೇಳಿದ್ದಾರೆ. 2019ರ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆಗೆ ಹೋಲಿಸಿದರೆ ಈ ಸಂಖ್ಯೆಯಲ್ಲಿ ಈಗ ಶೇ. 15ರಷ್ಟು ಹೆಚ್ಚಳವಾಗಿದೆ. ಖಂಡಿತವಾಗಿಯೂ ಇದು ಗಮನಾರ್ಹವಾದ ಏರಿಕೆಯೆಂದು ಸಮೀಕ್ಷಾ ವರದಿ ಅಭಿಪ್ರಾಯಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ ಭ್ರಷ್ಟಾಚಾರದ ಪ್ರಮಾಣದಲ್ಲಿ ಇಳಿಕೆಯಾಗಿದೆಯೆಂದು ಹೇಳುವವರ ಸಂಖ್ಯೆಯಲ್ಲಿ ಸುಮಾರು ಅರ್ಧಾಂಶದಷ್ಟು ಇಳಿಕೆಯಾಗಿದೆ (2019ರಲ್ಲಿ ಶೇ.19ರಷ್ಟಿದ್ದುದು, 2024ರಲ್ಲಿ ಶೇ.37ರಷ್ಟಾಗಿದೆ).

ಗ್ರಾಮಾಂತರ, ಪಟ್ಟಣ,ನಗರಗಳ ಭೇದವಿಲ್ಲದೆ ಭ್ರಷ್ಟಾಚಾರ ವ್ಯಾಪಕ

ಗ್ರಾಮ, ಪಟ್ಟಣ ಹಾಗೂ ನಗರ ಎಂಬ ಭೇದವಿಲ್ಲದೆ ಎಲ್ಲೆಡೆಯೂ ಭ್ರಷ್ಟಾಚಾರ ಸರಿಸಮಾನವಾಗಿ ಹರಡಿದೆ. ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ತೀವ್ರ ಹೆಚ್ಚಳವಾಗಿದೆ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡ ಹೆಚ್ಚಿನವರು ಹೇಳಿದ್ದಾರೆ. ಆಂದರೆ ಐದನೇ ಒಂದರಷ್ಟು ಮಂದಿ ಮಾತ್ರವೇ ಭ್ರಷ್ಟಾಚಾರದ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಭಾವಿಸಿದ್ದಾರೆ.

ಬಡವರು, ಶ್ರೀಮಂತರೆಂಬ ಭೇದವಿಲ್ಲದೆ ಭ್ರಷ್ಟಾಚಾರದಲ್ಲಿ ಹೆಚ್ಚಳವಾಗಿದೆಯೆಂದು ಭಾವಿಸಿದವರ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ಸಮೀಕ್ಷೆಯಲ್ಲಿ ಪಾಲ್ಗೊಂಡವರ ಪೈಕಿ ಪ್ರತಿ 10 ಮಂದಿ ಶ್ರೀಮಂತರು ಹಾಗೂ ಬಡವರ ಪೈಕಿ ಆರು ಮಂದಿ ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರ ಹೆಚ್ಚಳವಾಗಿದೆಯೆಂದು ಹೇಳಿದ್ದಾರೆ.

ಆದರೆ ಭ್ರಷ್ಟಾಚಾರ ಕಡಿಮೆಯಾಗಿದೆಯೆಂದು ಹೇಳಿದವರ ಪ್ರಮಾಣವು ಬಡವರಿಗಿಂತಲೂ ಶ್ರೀಮಂತರ (ಶೇ.7) ಪ್ರಮಾಣ ಅಧಿಕವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X