Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2023ರಲ್ಲಿ ಎಸ್ಟಿಗಳ ವಿರುದ್ಧ ಅಪರಾಧಗಳು,...

2023ರಲ್ಲಿ ಎಸ್ಟಿಗಳ ವಿರುದ್ಧ ಅಪರಾಧಗಳು, ಸೈಬರ್ ವಂಚನೆಗಳು ಹೆಚ್ಚಿದ್ದವು: NCRB ವರದಿ

ವಾರ್ತಾಭಾರತಿವಾರ್ತಾಭಾರತಿ30 Sept 2025 5:12 PM IST
share
2023ರಲ್ಲಿ ಎಸ್ಟಿಗಳ ವಿರುದ್ಧ ಅಪರಾಧಗಳು, ಸೈಬರ್ ವಂಚನೆಗಳು ಹೆಚ್ಚಿದ್ದವು: NCRB ವರದಿ

ಹೊಸದಿಲ್ಲಿ: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) ಇತ್ತೀಚಿನ ವಾರ್ಷಿಕ ವರದಿಯ ಪ್ರಕಾರ ದೇಶದಲ್ಲಿ 2023ರಲ್ಲಿ ಪರಿಶಿಷ್ಟ ಪಂಗಡಗಳ(ಎಸ್ಟಿ)ಗಳ ವಿರುದ್ಧ ಅಪರಾಧಗಳಲ್ಲಿ ಶೇ.28.8ರಷ್ಟು ಮತ್ತು ಸೈಬರ್ ಅಪರಾಧಗಳಲ್ಲಿ ಶೇ.31.2ರಷ್ಟು ಹೆಚ್ಚಳವಾಗಿತ್ತು.

ದತ್ತಾಂಶಗಳು ವಿಶೇಷವಾಗಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಪರಿಣಾಮದ ಕರಾಳ ಚಿತ್ರಣವನ್ನು ನೀಡಿವೆ. ಮಣಿಪುರವೊಂದರಲ್ಲೇ ಎಸ್ಟಿಗಳ ವಿರುದ್ಧ ಅಪರಾಧದ 3,399 ಪ್ರಕರಣಗಳು ದಾಖಲಾಗಿದ್ದು,2022ರಲ್ಲಿ ದಾಖಲಾಗಿದ್ದ ಕೇವಲ ಒಂದು ಪ್ರಕರಣಕ್ಕೆ ಹೋಲಿಸಿದರೆ ಇದು ದಿಗ್ಭ್ರಮೆಗೊಳಿಸುವ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಮಣಿಪುರದಲ್ಲಿ ನಡೆದಿರುವ ಈ ಘಟನೆಗಳಲ್ಲಿ ಬುಡಕಟ್ಟು ಸಮುದಾಯಗಳನ್ನು ಗುರಿಯಾಗಿಸಿಕೊಂಡು 1051 ಬೆಂಕಿ ಹಚ್ಚಿದ ಪ್ರಕರಣಗಳು, 260 ಡಕಾಯಿತಿ ಪ್ರಕರಣಗಳು ಹಾಗೂ 193 ಬೆದರಿಕೆ ಅಥವಾ ಅಕ್ರಮ ಭೂವಿಲೇವಾರಿ ಪ್ರಕರಣಗಳು ಸೇರಿವೆ ಎಂದು ಎನ್ಸಿಆರ್ಬಿ ವರದಿ ವಿವರಿಸಿದೆ.

ರಾಷ್ಟ್ರಮಟ್ಟದಲ್ಲಿ ದಾಖಲಾದ ಎಸ್ಟಿಗಳ ವಿರುದ್ಧದ ಅಪರಾಧ ಪ್ರಕರಣಗಳ ಒಟ್ಟು ಸಂಖ್ಯೆ ಹಿಂದಿನ ವರ್ಷದ 10,064ರಿಂದ 12,960ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಪರಿಶಿಷ್ಟ ಜಾತಿಗಳ(ಎಸ್ಸಿ) ವಿರುದ್ಧ ಅಪರಾಧ ಪ್ರಕರಣಗಳ ಸಂಖ್ಯೆ 2022ರಲ್ಲಿದ್ದ 57,582ರಿಂದ 2023ರಲ್ಲಿ 57,789ಕ್ಕೆ ಏರಿಕೆಯಾಗಿದ್ದು,ಶೇ.0.4ರಷ್ಟು ಹೆಚ್ಚಳವನ್ನು ತೋರಿಸಿದೆ.

ಈ ನಡುವೆ ಡಿಜಿಟಲ್ ಡೊಮೇನ್ ನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ವರದಿಯು 2023ರಲ್ಲಿ 86,420 ಸೈಬರ್ ಅಪರಾಧ ಪ್ರಕರಣಗಳನ್ನು ಉಲ್ಲೇಖಿಸಿದ್ದು 2022ರಲ್ಲಿಯ 65,893ಕ್ಕೆ ಹೋಲಿಸಿದರೆ ಗಮನಾರ್ಹ ಏರಿಕೆಯಾಗಿದೆ ಮತ್ತು ಐದು ವರ್ಷಗಳ ಹಿಂದೆ 2018ರಲ್ಲಿಯ 27,248 ಸೈಬರ್ ಅಪರಾಧಗಳಿಗೆ ಹೋಲಿಸಿದರೆ ಮೂರು ಪಟ್ಟಿಗಿಂತ ಹೆಚ್ಚು ಏರಿಕೆಯಾಗಿದೆ.

ಸೈಬರ್ ಅಪರಾಧಗಳಲ್ಲಿ ಆನ್ಲೈನ್ ಹಣಕಾಸು ವಂಚನೆಯು ಮುಖ್ಯಪಾಲು ಹೊಂದಿದೆ. 2023ರಲ್ಲಿ ಒಟ್ಟು ಸೈಬರ್ ಅಪರಾಧಗಳಲ್ಲಿ 59,526 ಘಟನೆಗಳು(ಶೇ.69) ಆನ್ಲೈನ್ ಹಣಕಾಸು ವಂಚನೆಗೆ ಸಂಬಂಧಿಸಿದ್ದವು. ಸುಲಿಗೆ (4,526) ಮತ್ತು ಲೈಂಗಿಕ ಶೋಷಣೆ (4,199 ಪ್ರಕರಣಗಳು)ಗಳೂ ಸೈಬರ್ ಅಪರಾಧಗಳಲ್ಲಿ ಪ್ರಮುಖ ಪಾಲು ಹೊಂದಿದ್ದವು. ಅತ್ಯಂತ ಹೆಚ್ಚಿನ ಸೈಬರ್ ಅಪರಾಧಗಳು ತೆಲಂಗಾಣ(10,303), ಕರ್ನಾಟಕ(8,829) ಮತ್ತು ಉತ್ತರ ಪ್ರದೇಶದಲ್ಲಿ(8,236) ವರದಿಯಾಗಿದ್ದವು.

NCRB ವರದಿಯು ವಿದೇಶಿಯರ ವಿರುದ್ಧದ ಅಪರಾಧಗಳಲ್ಲಿ ಶೇ.24ರಷ್ಟು ಏರಿಕೆಯನ್ನೂ ತೋರಿಸಿದೆ. ದೇಶಾದ್ಯಂತ ಇಂತಹ 238 ಪ್ರಕರಣಗಳು ದಾಖಲಾಗಿದ್ದು,63 ಪ್ರಕರಣಗಳೊಂದಿಗೆ ದಿಲ್ಲಿ ವಿದೇಶಿ ಪ್ರಜೆಗಳಿಗೆ ಅತ್ಯಂತ ಅಸುರಕ್ಷಿತ ಮಹಾನಗರ ಪ್ರದೇಶವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X