Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆ ಅಪಘಾತಗಳಲ್ಲಿ ಸಾವುಗಳು:ಸಾರಿಗೆ...

ರಸ್ತೆ ಅಪಘಾತಗಳಲ್ಲಿ ಸಾವುಗಳು:ಸಾರಿಗೆ ಸಚಿವಾಲಯ ಮತ್ತು ಎನ್‌ಸಿಆರ್‌ಬಿ ಅಂಕಿಅಂಶಗಳಲ್ಲಿ ವ್ಯತ್ಯಾಸ

ವಾರ್ತಾಭಾರತಿವಾರ್ತಾಭಾರತಿ18 Dec 2023 8:08 PM IST
share
ರಸ್ತೆ ಅಪಘಾತಗಳಲ್ಲಿ ಸಾವುಗಳು:ಸಾರಿಗೆ ಸಚಿವಾಲಯ ಮತ್ತು ಎನ್‌ಸಿಆರ್‌ಬಿ ಅಂಕಿಅಂಶಗಳಲ್ಲಿ ವ್ಯತ್ಯಾಸ

ಹೊಸದಿಲ್ಲಿ: 2022ರಲ್ಲಿ ದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತಗಳಲ್ಲಿ ಸಾವುಗಳ ಕುರಿತು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ (ಎನ್‌ಸಿಆರ್‌ಬಿ) ಮತ್ತು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ವಿರೋಧಾಭಾಸದ ಅಂಕಿಅಂಶಗಳನ್ನು ಬಿಡುಗಡೆಗೊಳಿಸಿವೆ. ಕೆಲವು ವರ್ಗಗಳಲ್ಲಿ ವ್ಯತ್ಯಾಸವು ಶೇ.42ರಷ್ಟು ಅಧಿಕವಾಗಿದೆ ಎಂದು thewire.in ವರದಿ ಮಾಡಿದೆ.

ಸಚಿವಾಲಯದ ವರದಿಯು 32,825 ಪಾದಚಾರಿಗಳ ಸಾವುಗಳನ್ನು ಸೂಚಿಸಿದ್ದು,ಎನ್‌ಬಿಆರ್‌ಬಿ ದತ್ತಾಂಶಗಳಿಗೆ ಹೋಲಿಸಿದರೆ ಶೇ.32ರಷ್ಟು ಹೆಚ್ಚಿದೆ. ಆದರೆ ಅಪಘಾತಕ್ಕೀಡಾದ ಟ್ರಕ್‌ಗಳಲ್ಲಿದ್ದ ಜನರಿಗೆ ಸಂಬಂಧಿಸಿದಂತೆ ಎನ್‌ಸಿಆರ್‌ಬಿಯು 15,087 ಸಾವುಗಳನ್ನು ವರದಿ ಮಾಡಿದ್ದು,ಇದು ಸಚಿವಾಲಯದ ದತ್ತಾಂಶಕ್ಕಿಂತ ಶೇ.42.5ರಷ್ಟು ಅಧಿಕವಾಗಿದೆ.

ಡೇಟಾ ಸಂಗ್ರಹಣೆಯಲ್ಲಿ ತೊಡಗಿದ್ದ ಸಿಬ್ಬಂದಿಗಳ ಸೀಮಿತ ತಿಳುವಳಿಕೆಯು ಈ ವ್ಯತ್ಯಾಸಗಳಿಗೆ ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾರು, ಜೀಪ್ ಮತ್ತು ಇತರ ಲಘು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತಗಳಲ್ಲಿ ಸತ್ತವರ ಸಂಖ್ಯೆಯಲ್ಲಿಯೂ ಎನ್‌ಸಿಆರ್‌ಬಿ ಮತ್ತು ಸಚಿವಾಲಯದ ದತ್ತಾಂಶಗಳಲ್ಲಿ ವ್ಯತ್ಯಾಸವಿದ್ದು, ಇದು ಪ್ರಮಾಣಿತ ಡೇಟಾ ಸಂಗ್ರಹ ವ್ಯವಸ್ಥೆಯ ಅಗತ್ಯವನ್ನು ಎತ್ತಿ ತೋರಿಸಿದೆ.

ರಸ್ತೆ ಸಾರಿಗೆ ಸಚಿವಾಲಯವು ವಾರ್ಷಿಕ ಡೇಟಾ ಸಂಗ್ರಹಕ್ಕಾಗಿ 21 ಅಂತರ್-ಸಂಬಂಧಿತ ವಿಧಾನಗಳನ್ನು ಬಳಸುತ್ತದೆ, ಆದರೆ ಕ್ಷೇತ್ರ ಸಿಬ್ಬಂದಿಗಳ ಸೀಮಿತ ತಿಳುವಳಿಕೆಯಿಂದ ವ್ಯತ್ಯಾಸಗಳುಂಟಾಗುತ್ತವೆ. ಮೃತಪಟ್ಟವರು ಮತ್ತು ವಾಹನಗಳ ಎಣಿಕೆಯಲ್ಲಿ, ವಿಶೇಷವಾಗಿ ಪಾದಚಾರಿ ಘಟನೆಗಳಲ್ಲಿ ಅಸಮಂಜಸತೆಯಿದ್ದು, ಇದು ತಪ್ಪು ದತ್ತಾಂಶಗಳಿಗೆ ಕಾರಣವಾಗುತ್ತದೆ. ಎನ್‌ಸಿಆರ್‌ಬಿಯು ಸಿಸಿಟಿಎನ್‌ಎಸ್ (ಕ್ರೈಂ ಆ್ಯಂಡ್ ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್‌ವರ್ಕ್ ಆ್ಯಂಡ್ ಸಿಸ್ಟಮ್ಸ್)ನ ಕಚ್ಚಾ ಮಾಹಿತಿಗಳೊಂದಿಗೆ ವಿಭಿನ್ನ ಡೇಟಾ ಸಂಗ್ರಹ ಪದ್ಧತಿಗಳನ್ನು ಬಳಸುತ್ತದೆ ಎಂದು ಪಂಜಾಬ ಸರಕಾರದ ಸಂಚಾರ ಸಲಹೆಗಾರ ನವದೀಪ್ ಅಸಿಜಾ ಸುದ್ದಿಸಂಸ್ಥೆಗೆ ತಿಳಿಸಿದರು.

ಡೇಟಾ ಸಂಗ್ರಹವನ್ನು ಪ್ರಮಾಣೀಕರಿಸಲು ಸಾರಿಗೆ ಮತ್ತು ಗೃಹಸಚಿವಾಲಯಗಳ ನಡುವೆ ಸಹಯೋಗದ ಅಗತ್ಯವಿದೆ ಎಂದರು.

ವಿಶ್ವಸಂಸ್ಥೆಯ ಏಜೆನ್ಸಿಗಳು ಇನ್‌ಸ್ಟಿಟ್ಯೂಟ್ ಆಫ್ ಟ್ರಾಫಿಕ್ ಎಜ್ಯುಕೇಷನ್‌ನಲ್ಲಿ ಇತ್ತೀಚಿಗೆ ಆಯೋಜಿಸಿದ್ದ ‘ಜಾಗತಿಕ ರಸ್ತೆ ಸುರಕ್ಷತಾ ಉಪಕ್ರಮ’ದಲ್ಲಿ ಅಪಘಾತ ಘಟನೆಗಳನ್ನು ದಾಖಲಿಸುಕೊಳ್ಳುವಲ್ಲಿ ಮತ್ತು ತನಿಖೆ ನಡೆಸುವಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡುವುದರ ಮಹತ್ವವನ್ನೂ ಪ್ರಮುಖವಾಗಿ ಪ್ರಸ್ತಾವಿಸಲಾಗಿತ್ತು.

ಸಮಸ್ಯೆಯನ್ನು ಒಪ್ಪಿಕೊಂಡಿರುವ ರಸ್ತೆ ಸಾರಿಗೆ ಕಾರ್ಯದರ್ಶಿ ಅನುರಾಗ ಜೈನ್ ಅವರು,ಹೊಸದಾಗಿ ಪರಿಚಯಿಸಲಾಗಿರುವ ಇ-ಡಿಟೇಲ್ಡ್ ಆ್ಯಕ್ಸಿಡೆಂಟ್ ರಿಪೋರ್ಟ್ (ಇ-ಡಿಎಆರ್) ವ್ಯವಸ್ಥೆಯು ಚೆನ್ನಾಗಿ ಕಾರ್ಯ ನಿರ್ವಹಿಸುತ್ತಿದೆ ಮತ್ತು ಪೊಲಿಸ್ ಹಾಗೂ ಸಚಿವಾಲಯದ ಡೇಟಾಗಳ ನಡುವಿನ ಅನುರೂಪತೆಯು ಸುಧಾರಿಸಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X