Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದುಲೀಪ್ ಟ್ರೋಫಿ | ಭಾರತ ಎ ತಂಡಕ್ಕೆ 186...

ದುಲೀಪ್ ಟ್ರೋಫಿ | ಭಾರತ ಎ ತಂಡಕ್ಕೆ 186 ರನ್ ಜಯ

ಸತತ 2 ಸೋಲುಗಳೊಂದಿಗೆ ಭಾರತ ಡಿ ಪ್ರಶಸ್ತಿ ಸ್ಪರ್ಧೆಯಿಂದ ಹೊರಗೆ

ವಾರ್ತಾಭಾರತಿವಾರ್ತಾಭಾರತಿ15 Sept 2024 9:35 PM IST
share

ಅನಂತಪುರ (ಆಂಧ್ರಪ್ರದೇಶ) : ದುಲೀಪ್ ಟ್ರೋಫಿ ಪಂದ್ಯದಲ್ಲಿ ರವಿವಾರ ಭಾರತ ಎ ತಂಡವು ಭಾರತ ಡಿ ತಂಡವನ್ನು 186 ರನ್‌ಗಳಿಂದ ಸೋಲಿಸಿದೆ.

ಅನಂತಪುರದ ರೂರಲ್ ಡೆವೆಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಮ್‌ನಲ್ಲಿ ನಡೆದ ಪಂದ್ಯದ ನಾಲ್ಕನೇ ಹಾಗೂ ಕೊನೆಯ ದಿನವಾದ ರವಿವಾರ ಭಾರತ ಡಿ ತಂಡದ ರಿಕಿ ಭುಯಿ ವೀರೋಚಿತ ಪ್ರದರ್ಶನ ನೀಡಿ ಶತಕ ಬಾರಿಸಿದರು. ಆ ಮೂಲಕ ಸೋಲನ್ನು ಸ್ವಲ್ಪ ಕಾಲ ಮುಂದೂಡಿದರಾದರೂ, ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಅವರು 195 ಎಸೆತಗಳಿಮದ 113 ರನ್‌ಗಳನ್ನು ಗಳಿಸಿದರು. ಅವರ ಇನಿಂಗ್ಸ್‌ನಲ್ಲಿ 14 ಬೌಂಡರಿಗಳು ಮತ್ತು 3 ಸಿಕ್ಸರ್‌ಗಳಿದ್ದವು.

ಆದರೆ, ಭಾರತ ಎ ತಂಡದ ಸ್ಪಿನ್ನರ್‌ಗಳಾದ ಶಮ್ಸ್ ಮುಲಾನಿ ಮತ್ತು ತನುಷ್ ಕೋಟ್ಯಾನ್ ಎದುರಾಳಿ ಬ್ಯಾಟರ್‌ಗಳನ್ನು ಮಣಿಸಿದರು.

ಮುನ್ನಾ ದಿನ 44 ರನ್ ಗಳಿಸಿ ಕ್ರೀಸ್‌ನಲ್ಲಿ ಉಳಿದಿದ್ದ ಭುಯಿ, ರವಿವಾರ ಭವ್ಯ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿ ತನ್ನ ಇನಿಂಗ್ಸನ್ನು ಶತಕದವರೆಗೆ ವಿಸ್ತರಿಸಿದರು.

ಗೆಲ್ಲಲು ದ್ವಿತೀಯ ಇನಿಂಗ್ಸ್‌ನಲ್ಲಿ 488 ರನ್‌ಗಳ ಬೃಹತ್ ಗುರಿಯನ್ನು ಪಡೆದ ಇಂಡಿಯಾ ಡಿ ರವಿವಾರ ತನ್ನ ಇನಿಂಗ್ಸನ್ನು ಮುನ್ನಾ ದಿನದ ಮೊತ್ತವಾದ ಒಂದು ವಿಕೆಟ್ ನಷ್ಟಕ್ಕೆ 62 ರನ್ ಇದ್ದಲ್ಲಿಂದ ಮುಂದುವರಿಸಿತು. ಅಂತಿಮವಾಗಿ ಅದು 301 ರನ್‌ಗಳಿಗೆ ತನ್ನ ಇನಿಂಗ್ಸ್ ಮುಕ್ತಾಯಗೊಳಿಸಿತು.

ಭುಯಿ ಅವರನ್ನು ಹೊರತುಪಡಿಸಿ ಇತರ ಆಟಗಾರರು ಯಾವುದೇ ಪ್ರತಿರೋಧ ಒಡ್ಡಲಿಲ್ಲ. ಭುಯಿ ಮತ್ತು ಯಶ್ ದುಬೆ (37) ಎರಡನೇ ವಿಕೆಟ್‌ಗೆ 100 ರನ್‌ಗಳನ್ನು ಸೇರಿಸಿದರು.

ಬಳಿಕ ಭುಯಿ ನಾಯಕ ಶ್ರೇಯಸ್ ಅಯ್ಯರ್ (41)ಜೊತೆಗೆ 53 ರನ್‌ಗಳು ಮತ್ತು ಸಂಜು ಸ್ಯಾಮ್ಸನ್ (40) ಜೊತೆಗೆ 62 ರನ್‌ಗಳ ಜೊತೆಯಾಟವನ್ನು ನಿಭಾಯಿಸಿದರು.

ಶಮ್ಸ್ ಮುಲಾನಿ 117 ರನ್‌ಗಳನ್ನು ನೀಡಿ 3 ವಿಕೆಟ್‌ಗಳನ್ನು ಉರುಳಿಸಿದರೆ, ತನುಷ್ ಕೋಟ್ಯಾನ್ 73 ರನ್‌ಗಳನ್ನು ಕೊಟ್ಟು 4 ವಿಕೆಟ್‌ಗಳನ್ನು ಪಡೆದರು.

ಶಮ್ಸ್ ಮುಲಾನಿಯನ್ನು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕರಿಸಲಾಯಿತು.

ಈ ವಿಜಯದೊಂದಿಗೆ ಇಂಡಿಯಾ ಎ ತಂಡಕ್ಕೆ 6 ಅಂಕಗಳು ಲಭಿಸಿವೆ ಮತ್ತು ಅದು ಪ್ರಶಸ್ತಿ ಸ್ಪರ್ಧೆಯಲ್ಲಿದೆ. ಆದರೆ, ಅದು 9 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಇಂಡಿಯಾ ಸಿ ತಂಡವನ್ನು ಮುಂದಿನ ಪಂದ್ಯದಲ್ಲಿ ಸೋಲಿಸಬೇಕಾಗಿದೆ. ಮುಂದಿನ ಪಂದ್ಯವು ಸೆಪ್ಟಂಬರ್ 19ರಂದು ಆರಂಭಗೊಳ್ಳಲಿದೆ.

ಸತತ ಎರಡು ಸೋಲುಗಳೊಂದಿಗೆ ಪ್ರಶಸ್ತಿ ಸ್ಪರ್ಧೆಯಿಂದ ಹೊರಬಿದ್ದಿರುವ ಇಂಡಿಯಾ ಡಿ ತಂಡವು, 7 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಇಂಡಿಯಾ ಬಿ ತಂಡವನ್ನು ಸೆಪ್ಟಂಬರ್ 19ರಂದು ಆರಂಭಗೊಳ್ಳಲಿರುವ ತನ್ನ ಮುಂದಿನ ಪಂದ್ಯದಲ್ಲಿ ಎದುರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X