Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೂ. 6,600 ಕೋಟಿ ಬಿಟ್‌ಕಾಯಿನ್‌ ಪೊಂಝಿ...

ರೂ. 6,600 ಕೋಟಿ ಬಿಟ್‌ಕಾಯಿನ್‌ ಪೊಂಝಿ ಹಗರಣ: ಮಹಿಳೆಯ ಬಂಧನ

ಚಿನ್ನಾಭರಣ, 3 ವಿಲಾಸಿ ಕಾರು ಸಹಿತ ರೂ. 69 ಕೋಟಿ ಮೌಲ್ಯದ ಸ್ವತ್ತು ವಶ

ವಾರ್ತಾಭಾರತಿವಾರ್ತಾಭಾರತಿ19 Dec 2023 5:50 PM IST
share
ರೂ. 6,600 ಕೋಟಿ ಬಿಟ್‌ಕಾಯಿನ್‌ ಪೊಂಝಿ ಹಗರಣ: ಮಹಿಳೆಯ ಬಂಧನ

ಹೊಸದಿಲ್ಲಿ: ಬಿಟ್‌ಕಾಯಿನ್‌ ಪೊಂಝಿ ಯೋಜನೆಯ ಪ್ರವರ್ತಕರ ವಿರುದ್ಧದ ಇತ್ತೀಚಿನ ದಾಳಿಗಳ ನಂತರ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಹಾಗೂ ಮೂರು ಐಷಾರಾಮಿ ಕಾರುಗಳು, ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಈ ಬಿಟ್‌ಕಾಯಿನ್‌ ಹಗರಣದಲ್ಲಿ ರೂ. 6,600 ಕೋಟಿಯಷ್ಟು ಠೇವಣಿಯನ್ನು ಸಾರ್ವಜನಿಕರಿಂದ ಸಂಗ್ರಹಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈಯಲ್ಲಿ ಸಿಂಪಿ ಭಾರಧ್ವಾಜ್‌ ಅಲಿಯಾಸ್‌ ಸಿಂಪಿ ಗೌರ್‌ ಎಂಬಾಕೆಯನ್ನು ಡಿಸೆಂಬರ್‌ 17ರಂದು ಬಂಧಿಸಲಾಗಿದ್ದು ಆಕೆಯನ್ನು ಮರುದಿನ ಮುಂಬೈಯ ವಿಶೇಷ ಅಕ್ರಮ ಹಣ ವರ್ಗಾವಣೆ ಕಾಯಿದೆ ಪ್ರಕರಣದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆಕೆಯನ್ನು ಡಿಸೆಂಬರ್‌ 26ರ ತನಕ ಈಡಿ ಕಸ್ಟಡಿಗೆ ವಹಿಸಿದೆ ಎಂದು ನಿರ್ದೇಶನಾಲಯದ ಹೇಳಿಕೆ ತಿಳಿಸಿದೆ.

ತನಿಖೆಯನ್ನು ವೇರಿಯೇಬಲ್‌ ಪಿಟಿಇ ಲಿಮಿಟೆಡ್‌ ಎಂಬ ಕಂಪೆನಿಯ ವಿರುದ್ಧ ನಡೆಸಲಾಗಿತ್ತು ಹಾಗೂ ಅದು ಗೈನ್‌ ಬಿಟ್‌ಕಾಯಿನ್‌ ಪೊಂಝಿ ಸ್ಕೀಮ್‌ ನಡೆಸುತ್ತಿತ್ತೆಂದು ಈಡಿ ಹೇಳಿದೆ.

ಕಂಪನಿ ಮತ್ತದರ ಪ್ರವರ್ತಕರಾದ ಸಿಂಪಿ ಭಾರದ್ವಾಜ್‌, ಅಮಿತ್‌ ಭಾರದ್ವಾಜ್‌, ಅಜಯ್‌ ಭಾರದ್ವಾಜ, ಮಹೇಂದರ್ ಭಾರದ್ವಾಜ್‌ ಮತ್ತು ಹಲವಾರು ಎಂಎಲ್‌ಎಂ ಏಜಂಟರ ವಿರುದ್ಧ ಮಹಾರಾಷ್ಟ್ರ ಮತ್ತು ದಿಲ್ಲಿ ಪೊಲೀಸರು ಹಲವಾರು ಎಫ್‌ಐಆರ್‌ ದಾಖಲಿಸಿದ್ದರು.

ಹೂಡಿಕೆಯ ಹೆಸರಿನಲ್ಲಿ ಆರೋಪಿಗಳು ಬಿಟ್‌ಕಾಯಿನ್‌ ರೂಪದಲ್ಲಿ ಸಾರ್ವಜನಿಕರಿಂದ ರೂ 6,600 ಕೋಟಿ ಸಂಗ್ರಹಿಸಿದ್ದರೆಂದು ಆರೋಪಿಸಲಾಗಿದೆ.

ಅಮಾಯಕ ಹೂಡಿಕೆದಾರರಿಗೆ ಆಮಿಷವೊಡ್ಡುವಲ್ಲಿ ಸಿಂಪಿ, ಆಕೆಯ ಪತಿ ಅಜಯ್‌ ಮತ್ತು ಇತರ ಏಜಂಟರು ಸಕ್ರಿಯ ಪಾತ್ರ ನಿರ್ವಹಿಸಿದ್ದರು, ದೊಡ್ಡ ಮೊತ್ತದ ಹಣ ದೊರೆಯಲಿದೆ ಎಂದು ಹೇಳಿ ಜನರನ್ನು ನಂಬಿಸಿ ವಂಚನೆಗೈಯ್ಯಲಾಗಿದೆ ಎಂದು ಆರೋಪಿಸಲಾಗಿದೆ.

ದಾಳಿಗಳ ವೇಳೆ ಮರ್ಸಿಡಿಸ್‌, ಆಡಿ ಕಾರು ಸಹಿತ ಮೂರು ಕಾರುಗಳು, ರೂ 18.91 ಲಕ್ಷ ಮೌಲ್ಯದ ಚಿನ್ನಾಭರಣಗಳು ಸೇರಿದಂತೆ ಇಲ್ಲಿಯ ತನಕ ರೂ. 69 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಮುಖ ಆರೋಪಿಗಳಾದ ಅಜಯ್‌ ಭಾರದ್ವಾಜ್‌ ಮತ್ತು ಮಹೇಂದರ್‌ ಭಾರದ್ವಾಜ್‌ ತಲೆಮರೆಸಿಕೊಂಡಿದ್ದಾರೆ ಎಂದು ಈಡಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X