Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕುರಿತಾದ ಆರೋಪಗಳ ಕುರಿತು ಚರ್ಚಿಸಲು ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ24 Jun 2025 8:04 PM IST
share
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕುರಿತಾದ ಆರೋಪಗಳ ಕುರಿತು ಚರ್ಚಿಸಲು ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಆಹ್ವಾನ

ಹೊಸದಿಲ್ಲಿ: 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಲ್ಲಿ ಅಕ್ರಮಗಳು ನಡೆದಿದ್ದವು ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳ ಕುರಿತು ಚುನಾವಣಾ ಆಯೋಗವು ಅವರಿಗೆ ವಿಧ್ಯುಕ್ತ ಪತ್ರವನ್ನು ಬರೆದಿದ್ದು, ಎಲ್ಲ ಚುನಾವಣೆಗಳನ್ನು ಸಂಸತ್ತು ಅಂಗೀಕರಿಸಿದ ಕಾನೂನುಗಳು ಮತ್ತು ನಿಯಮಗಳ ಪ್ರಕಾರವೇ ಕಟ್ಟುನಿಟ್ಟಾಗಿ ನಡೆಸಲಾಗಿದೆ ಎಂದು ತಿಳಿಸಿದೆ.

ಇಡೀ ಚುನಾವಣಾ ಪ್ರಕ್ರಿಯೆಯು ರಾಜಕೀಯ ಪಕ್ಷಗಳು ನೇಮಕಗೊಳಿಸುವ ಬೂತ್ ಮಟ್ಟದ ಏಜೆಂಟ್ಗಳು ಸೇರಿದಂತೆ ಸಾವಿರಾರು ಸಿಬ್ಬಂದಿಗಳನ್ನು ಒಳಗೊಂಡಿರುತ್ತದೆ ಎಂದು ಅದು ಒತ್ತಿ ಹೇಳಿದೆ.

ಪ್ರಮುಖ ದೈನಿಕವೊಂದರಲ್ಲಿ ರಾಹುಲ್ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಜೂ.12ರಂದು ಅವರಿಗೆ ಇಮೇಲ್ ಮೂಲಕ ರವಾನಿಸಿರುವ ಪತ್ರದಲ್ಲಿ ಆಯೋಗವು,ಇಡೀ ಚುನಾವಣಾ ಪ್ರಕ್ರಿಯೆಯನ್ನು ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ವಿಕೇಂದ್ರೀಕೃತ ರೀತಿಯಲ್ಲಿ ನಡೆಸಲಾಗುತ್ತದೆ. ಇದು ಆಯೋಗದಿಂದ ನೇಮಕಗೊಂಡ 1,00,186ಕ್ಕೂ ಅಧಿಕ ಬೂತ್ ಮಟ್ಟದ ಅಧಿಕಾರಿಗಳು,288 ಚುನಾವಣಾ ನೋಂದಣಾಧಿಕಾರಿಗಳು,139 ಸಾಮಾನ್ಯ ವೀಕ್ಷಕರು,41 ಪೋಲಿಸ್ ವೀಕ್ಷಕರು,71 ವೆಚ್ಚ ವೀಕ್ಷಕರು ಮತ್ತು 288 ಚುನಾವಣಾಧಿಕಾರಿಗಳನ್ನು ಒಳಗೊಂಡಿರುತ್ತದೆ ಎಂದು ವಿವರಿಸಿದೆ.

ಇದಲ್ಲದೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ರಾಜಕೀಯ ಪಕ್ಷಗಳು 1,08,026 ಬೂತ್ ಮಟ್ಟದ ಏಜೆಂಟ್ಗಳನ್ನು ನೇಮಿಸಿದ್ದು,ಈ ಪೈಕಿ 28,421 ಏಜೆಂಟ್ಗಳು ಕಾಂಗ್ರೆಸ್ ಪಕ್ಷದವರಾಗಿದ್ದರು ಎಂದೂ ಆಯೋಗವು ರಾಹುಲ್ಗೆ ತಿಳಿಸಿದೆ.

‘ಕಾಂಗ್ರೆಸ್ ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿಗಳ ಮೂಲಕ ಚುನಾವಣೆಗಳನ್ನು ನಡೆಸುವುದರ ಕುರಿತು ಯಾವುದೇ ಸಮಸ್ಯೆಯನ್ನು ಪ್ರಸ್ತಾವಿಸಿದ್ದಾರೆ ಎಂದು ನಾವು ಭಾವಿಸಿದ್ದೇವೆ. ಆದಾಗ್ಯೂ ನಿಮಗೆ ಈಗಲೂ ಯಾವುದೇ ಸಮಸ್ಯೆಗಳಿದ್ದರೆ ನೀವು ನಮಗೆ ಪತ್ರ ಬರೆಯಬಹುದು. ಎಲ್ಲ ವಿಷಯಗಳನ್ನು ಚರ್ಚಿಸಲು ಪರಸ್ಪರ ಅನುಕೂಲಕರ ದಿನಾಂಕ ಮತ್ತು ಸಮಯದಲ್ಲಿ ನಿಮ್ಮನ್ನು ವೈಯಕ್ತಿಕವಾಗಿ ಭೇಟಿ ಮಾಡಲೂ ಆಯೋಗವು ಸಿದ್ಧವಾಗಿದೆ ’ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಡಿಜಿಟಲ್ ಮತದಾರರ ಪಟ್ಟಿಗೆ ರಾಹುಲ್ ಆಗ್ರಹ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ತನ್ನ ಆರೋಪವನ್ನು ಮಂಗಳವಾರ ಪುನರುಚ್ಚರಿಸಿರುವ ರಾಹುಲ್ ಗಾಂಧಿಯವರು,ಚುನಾವಣೆಗಳಲ್ಲಿ ‘ಮತಗಳ್ಳತನ ’ ನಡೆದಿತ್ತು ಎಂದಿದ್ದಾರೆ. ಡಿಜಿಟಲ್ ಮತದಾರರ ಪಟ್ಟಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳ ತಕ್ಷಣ ಬಿಡುಗಡೆಗೆ ಅವರು ಆಗ್ರಹಿಸಿದ್ದಾರೆ.

2024ರ ಲೋಕಸಭಾ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳ ನಡುವಿನ ಕೇವಲ ಆರು ತಿಂಗಳುಗಳಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ಷೇತ್ರವಾದ ನಾಗಪುರ ದಕ್ಷಿಣದಲ್ಲಿ 29,219 ಮತದಾರರನ್ನು ಹೊಸದಾಗಿ ಸೇರಿಸಲಾಗಿತ್ತು ಎಂದು ಪ್ರತಿಪಾದಿಸಿರುವ ಮಾಧ್ಯಮ ವರದಿಯನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ರಾಹುಲ್,ಕೇವಲ ಆರು ತಿಂಗಳುಗಳಲ್ಲಿ ಫಡ್ನವೀಸ್ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಶೇ.8ರಷ್ಟು ಬೆಳೆದಿತ್ತು. ಅಪರಿಚಿತ ವ್ಯಕ್ತಿಗಳಿಂದ ಮತದಾನವನ್ನು ಬೂತ್ ಮಟ್ಟದ ಅಧಿಕಾರಿಗಳು ವರದಿ ಮಾಡಿದ್ದರು ಎಂದು ಹೇಳಿದ್ದಾರೆ.

ರಾಹುಲ್ ಆರೋಪವನ್ನು ತಿರಸ್ಕರಿಸಿರುವ ಫಡ್ನವೀಸ್,‘ಕುರುಡಾಗಿ ಬಾಣಗಳನ್ನು ಬಿಡುವ ’ ಮುನ್ನ ತನ್ನ ಪಕ್ಷದ ಚುನಾಯಿತ ಶಾಸಕರೊಂದಿಗೆ ಮಾತನಾಡುವಂತೆ ಅವರಿಗೆ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X