Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ರಾಮಸ್ಥರು ಎಸೆದ ಬೆಂಕಿ ಚೆಂಡು,...

ಗ್ರಾಮಸ್ಥರು ಎಸೆದ ಬೆಂಕಿ ಚೆಂಡು, ಮೊಳೆಯುಕ್ತ ರಾಡ್ ತಗುಲಿ ಆನೆ ಸಾವು

ವಾರ್ತಾಭಾರತಿವಾರ್ತಾಭಾರತಿ18 Aug 2024 8:10 AM IST
share
ಗ್ರಾಮಸ್ಥರು ಎಸೆದ ಬೆಂಕಿ ಚೆಂಡು, ಮೊಳೆಯುಕ್ತ ರಾಡ್ ತಗುಲಿ ಆನೆ ಸಾವು

ಕೊಲ್ಕತ್ತಾ: ಕಾಡುಪ್ರಾಣಿಗಳನ್ನು ಓಡಿಸಲು ಗ್ರಾಮಸ್ಥರು ಸಾಮಾನ್ಯವಾಗಿ ಬಳಸುವ ನಿಷೇಧಿತ ಬೆಂಕಿ ಚೆಂಡು, ಮೊಳೆಯುಕ್ತ ರಾಡ್ ತಗುಲಿ ಆನೆ ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಝಾರ್ ಗ್ರಾಮ್ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಶನಿವಾರ ಸಂಜೆ ಈ ಘಟನೆಯನ್ನು ಪರಿಸರ ಸಂರಕ್ಷಣಾ ಕಾರ್ಯಕರ್ತೆ ಪ್ರೇರಣಾ ಸಿಂಗ್ ಬಿಂದ್ರಾ ಆನ್ ಲೈನ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ.

ಎರಡು ಮರಿಗಳು ಸೇರಿದಂತೆ ಆರು ಆನೆಗಳು ಗುರುವಾರ ಮುಂಜಾನೆ ಗೋಡೆಗಳನ್ನು ಧ್ವಂಸಗೊಳಿಸಿ ರಾಜ್ ಕಾಲೇಜು ಕಾಲೋನಿಗೆ ದಾಳಿ ಇಟ್ಟವು. ಕೆಲ ಗಂಟೆಗಳ ಬಳಿಕ ಈ ಹಿಂಡಿನಲ್ಲಿದ್ದ ಒಂದು ಆನೆ ಕಾಲೋನಿಯ ವೃದ್ಧರೊಬ್ಬರನ್ನು ಕೊಂದು ಹಾಕಿದೆ. ಆನೆಯ ರಂಪಾಟ ಹೆಚ್ಚಿದಾಗ ಕಬ್ಬಿಣದ ರಾಡ್ ಹಾಗೂ ಉರಿಯುವ ದೊಂದಿಯೊಂದಿಗೆ 'ಹುಲ್ಲಾ' ತಂಡ ಆಗಮಿಸಿತು. ಹುಲ್ಲಾ ತಂಡದ ಕಾರ್ಯಾಚರಣೆ ಬಗ್ಗೆ ಅರಣ್ಯ ಇಲಾಖೆಗೆ ಸಂಪೂರ್ಣ ಮಾಹಿತಿ ತಿಳಿದಿತ್ತು ಎನ್ನುವುದು ಅವರ ವಾದ.

ಹುಲ್ಲಾ ತಂಡವೆಂದರೆ, ಆನೆಗಳನ್ನು ಗದ್ದೆಯಿಂದ ಓಡಿಸುವ ತಂಡ. ಒಂದು ತುದಿಯಲ್ಲಿ ಮೊಳೆಗಳನ್ನು ಜೋಡಿಸಲಾದ ಕಬ್ಬಿಣದ ರಾಡ್ ಗೆ ಬೆಂಕಿ ಚೆಂಡು ಕಟ್ಟಿ ಎಸೆಯುವ ತಂಡ. ಈ ಕ್ರಮ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಬಳಕೆಯಲ್ಲಿದ್ದು, ಬಿಂದ್ರಾ ಮತ್ತು ಇತರ ಪರಿಸರ ಹೋರಾಟಗಾರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ 2018ರಲ್ಲೇ ಈ ವಿಧಾನವನ್ನು ನಿಷೇಧಿಸಿತ್ತು.

ಧರ್ಮಪುರ ಫುಟ್ಬಾಲ್ ಮೈದಾನದಲ್ಲಿ ಹಲವು ಬಾರಿ ಈ ಆನೆಗೆ ಈ ಆಯುಧ ತಗುಲಿತ್ತು. ಅರಣ್ಯ ಇಲಾಖೆ ಇದಕ್ಕೆ ಮಂಪರು ಚುಚ್ಚುಮದ್ದನ್ನು ಕೂಡಾ ನೀಡಿತ್ತು. ಬಳಿಕ ಅಧಿಕಾರಿಗಳು ಇದನ್ನು ಬಿಟ್ಟಾಗ ಆ ಹೆಣ್ಣಾನೆಗೆ ನಡೆಯಲೂ ಸಾಧ್ಯವಾಗುತ್ತಿರಲಿಲ್ಲ. ಅಂದು ಮುಂಜಾನೆ ವೃದ್ಧೆಯನ್ನು ಅದೇ ಆನೆ ಕೊಂದಿತ್ತೇ ಎನ್ನುವುದು ದೃಢಪಟ್ಟಿಲ್ಲ. ಹುಲ್ಲಾ ತಂಡ ಎಸೆದ ಒಂದು ಬೆಂಕಿ ಚೆಂಡುಯುಕ್ತ ಮೊಳೆ ಹೊಂದಿದ ರಾಡ್ ಆನೆಗೆ ತಗುಲಿ ಅದರ ಬೆನ್ನೆಲುಬಿಗೆ ಹಾನಿಯಾಗಿದೆ ಎಂದು ಪರಿಸರವಾದಿಯೊಬ್ಬರು ಹೇಳಿದ್ದಾರೆ.

ಎಂಟು ಗಂಟೆ ವಿಳಂಬವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಆನೆಯನ್ನು ಚಿಕಿತ್ಸೆಗೆ ಒಯ್ದಿದ್ದಾರೆ. ಗಾಯಗಳಿಂದಾಗಿ ಶನಿವಾರ ಮುಂಜಾನೆ ಆನೆ ಮೃತಪಟ್ಟಿದೆ ಎನ್ನುವುದು ಅವರ ವಾದ. ಅಧಿಕಾರಿಗಳು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

On August 12, #India celeberated #WorldElephantDay2024 & heard a lot from @moefcc on all the great things v have done for #elephants. I would like to hear from @moefcc and @ForestDeptWBnow on the horrific harassment, torture and killing of an #elephant in #Jhargam #WestBengal… pic.twitter.com/KTTzAdStrG

— prerna singh bindra (@prernabindra) August 17, 2024

This is*Against the law- #Wildlife (#Protection) Act, 1972. *Contempt of the Court: The @SupremeCourtINDhas completely banned the use & throwing of fireballs for driving elephants. This is WP-489/2018, and for what it is worth, i am the petitioner (feel an utter failure)Will… pic.twitter.com/7adDrid2un

— prerna singh bindra (@prernabindra) August 17, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X