Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ...

ಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ಸಾರ್ವಜನಿಕವಾಗಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ!

ವಾರ್ತಾಭಾರತಿವಾರ್ತಾಭಾರತಿ28 Aug 2024 4:52 PM IST
share
ಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ಸಾರ್ವಜನಿಕವಾಗಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ!

ಆಗ್ರಾ : ತನ್ನ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದರಿಂದ ಬೇಸತ್ತ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಸಾರ್ವಜನಿಕವಾಗಿ ವಿವಸ್ತ್ರಳಾದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ವರದಿಯಾಗಿದೆ.

ಇಲ್ಲಿನ ಕೇಂದ್ರೀಯ ವಿವಿಯೊಂದಿಗೆ ಸಂಯೋಜಿತ ಇಂಜಿನಿಯರಿಂಗ್ ಕಾಲೇಜಿನ 20ರ ಹರೆಯದ ವಿದ್ಯಾರ್ಥಿನಿ, ತನ್ನ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯನ್ನು ಕೊನೆಗೂ ಮಂಗಳವಾರ ಪೋಲಿಸರು ಬಂಧಿಸುವ ಮುನ್ನ ಅದಕ್ಕಾಗಿ 17 ದಿನಗಳವರಗೆ ಕಾಯಬೇಕಾಯಿತು. ಒಂದು ಹಂತದಲ್ಲಿ ವಿದ್ಯಾರ್ಥಿನಿ ತನ್ನ ಹತಾಶೆಯನ್ನು ವ್ಯಕ್ತಪಡಿಸಲು ಸಾರ್ವಜನಿಕವಾಗಿ ವಿವಸ್ತ್ರಗೊಂಡಿದ್ದಳು. ಆಕೆಯನ್ನು ಮಾನಸಿಕ ಆಸ್ಪತ್ರೆಗೆ ದಾಖಲಿಸಿ ಮೂರು ದಿನಗಳ ಕಾಲ ನಿರೀಕ್ಷಣೆಯಲ್ಲಿರಿಸಲಾಗಿತ್ತು.

ಜಮ್ಮು ಐಐಟಿಯಲ್ಲಿ ಎಂಟೆಕ್ ವ್ಯಾಸಂಗ ಮಾಡುತ್ತಿರುವ 22ರ ಹರೆಯದ ವಿದ್ಯಾರ್ಥಿ ಆರೋಪಿಯಾಗಿದ್ದಾನೆ ಎಂದು ಪೋಲಿಸರು ತಿಳಿಸಿದ್ದಾರೆ.

ಆರೋಪಿಯು ಆ.10ರಂದು ಸಂಜೆ ಚಲಿಸುತ್ತಿರುವ ಕಾರಿನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದ ಎಂದು ಲಕ್ನೋ ಮೂಲದ ವಿದ್ಯಾರ್ಥಿನಿ ಸ್ಥಳೀಯ ಪೋಲಿಸರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾಳೆ. ಆಕೆಯ ದೂರಿನ ಮೇರೆಗೆ ಆ.11ರಂದು ಎಫ್‌ಐಆರ್ ದಾಖಲಾಗಿದ್ದರೂ ಆರೋಪಿಯನ್ನು ಬಂಧಿಸಲು ಪೋಲಿಸರು ಯಾವುದೇ ಪ್ರಯತ್ನವನ್ನು ಮಾಡಿರಲಿಲ್ಲ. ಅತ್ಯಾಚಾರ ನಡೆದಿತ್ತು ಎನ್ನಲಾದ ಸಮಯದಲ್ಲಿ ಆರೋಪಿಯ ಮೊಬೈಲ್ ಲೊಕೇಷನ್ ಜಮ್ಮುವಿನಲ್ಲಿತ್ತು ಎಂದು ಅವರು ಸಮಜಾಯಿಷಿಯನ್ನು ನೀಡಿದ್ದರು.

ಮುಂದಿನ ಕೆಲವು ದಿನಗಳ ಕಾಲ ಪೋಲಿಸ್ ಠಾಣೆಗಳ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಹಲವಾರು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ತನಗಾದ ಅನ್ಯಾಯ,ನೋವನ್ನು ತೋಡಿಕೊಂಡಿದ್ದಳು. ಆದರೆ ಇದ್ಯಾವುದೂ ಫಲ ನೀಡದಿದ್ದಾಗ ಪ್ರಕರಣದಲ್ಲಿ ಪೋಲಿಸ್ ಕ್ರಮಕ್ಕೆ ಒತ್ತಡ ಹೇರಲು ರವಿವಾರ ಸಾರ್ವಜನಿಕವಾಗಿ ವಿವಸ್ತ್ರಗೊಳ್ಳಲು ಆಕೆ ನಿರ್ಧರಿಸಿದ್ದಳು.

‘ನಾವು ಆರೋಪಿಯನ್ನು ಆಗ್ರಾಕ್ಕೆ ಕರೆಸಿ ವಿಚಾರಣೆ ನಡೆಸಿದ್ದೆವು. ಆತ ಕಳೆದ ಕೆಲವು ತಿಂಗಳುಗಳಿಂದ ವಿದ್ಯಾರ್ಥಿನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದ ಎಂದು ತಿಳಿದ ಬಳಿಕ ಆತನನ್ನು ಬಂಧಿಸಿದ್ದೇವೆ ’ ಎಂದು ಪೋಲಿಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಘಾಜಿಪುರ ಮೂಲದ ಆರೋಪಿಯು ಐಐಟಿಗೆ ಸೇರುವ ಮುನ್ನ ಆಗ್ರಾದ ವಿವಿಯಲ್ಲಿ ಬಿಟೆಕ್ ಮುಗಿಸಿದ್ದ.

‘ವಿದ್ಯಾರ್ಥಿನಿ ರವಿವಾರ ಮಧ್ಯಾಹ್ನ ರಸ್ತೆಯಲ್ಲಿ ವಿವಸ್ತ್ರಗೊಂಡಿದ್ದಳು ಮತ್ತು ಪೋಲಿಸರ ವಿರುದ್ಧ ಘೋಷಣೆಗಳನ್ನು ಕೂಗಿದ್ದಳು. ತಕ್ಷಣ ಅವಳತ್ತ ಧಾವಿಸಿದ ಇಬ್ಬರು ಮಹಿಳೆಯರು ಆಕೆಯ ಶರೀರವನ್ನು ಬಟ್ಟೆಗಳಿಂದ ಮುಚ್ಚಿ ಸಮೀಪದ ಕ್ಲಿನಿಕ್‌ವೊಂದಕ್ಕೆ ಕರೆದೊಯ್ದಿದ್ದರು. ಆಕೆ ಮಾನಸಿಕವಾಗಿ ನೊಂದಿದ್ದಾಳೆ ಎಂದು ನಾವು ಭಾವಿಸಿದ್ದೆವು ಮತ್ತು ಪೋಲಿಸರಿಗೆ ಮಾಹಿತಿ ನೀಡಿದ್ದವು. ಬಳಿಕ ಪೋಲಿಸರು ಆಕೆಯನ್ನು ಮಾನಸಿಕ ಆಸ್ಪತ್ರೆಗೆ ಸಾಗಿಸಿದ್ದರು ’ ಎಂದು ಘಟನೆಯ ಪ್ರತ್ಯಕ್ಷದರ್ಶಿಯಾಗಿದ್ದ ಸಾಮಾಜಿಕ ಕಾರ್ಯಕರ್ತರೋರ್ವರು ಸುದ್ದಿಸಂಸ್ಥೆಗೆ ತಿಳಿಸಿದರು.

ರವಿವಾರ ಸಂಜೆ ವಿದ್ಯಾರ್ಥಿನಿಯನ್ನು ಇಲ್ಲಿಗೆ ದಾಖಲಿಸಲಾಗಿತ್ತು ಮತ್ತು ಮೂರು ದಿನಗಳ ಕಾಲ ನಿರೀಕ್ಷಣೆಯಲ್ಲಿ ಇರಿಸಲಾಗಿತ್ತು. ಈ ಅವಧಿಯಲ್ಲಿ ಆಕೆಯ ಚಟುವಟಿಕೆಗಳು ಸಹಜವಾಗಿದ್ದವು. ಯಾವುದೇ ಅಸಮಂಜಸತೆ ಕಂಡು ಬಂದಿರಲಿಲ್ಲ. ಮಂಗಳವಾರ ಲಕ್ನೋದಿಂದ ಬಂದಿದ್ದ ತಾಯಿಗೆ ಆಕೆಯನ್ನು ಹಸ್ತಾಂತರಿಸಿದ್ದೇವೆ ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದರು.

ಅತ್ಯಾಚಾರ ದೂರನ್ನು ದಾಖಲಿಸುವ ಮುನ್ನ ಜು.29ರಂದು ವಿದ್ಯಾರ್ಥಿನಿ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಕಿರುಕುಳ ದೂರನ್ನು ದಾಖಲಿಸಿದ್ದಳು ಎಂದು ಪೋಲಿಸರು ತಿಳಿಸಿದರು.

‘ನಾವು ವಿಷಯವನ್ನು ಪರಿಶೀಲಿಸಿದ್ದು, ಆಕೆಯ ಆರೋಪವನ್ನು ಬೆಂಬಲಿಸುವ ಯಾವುದೇ ಪುರಾವೆ ಕಂಡುಬಂದಿರಲಿಲ್ಲ” ಠಾಣಾಧಿಕಾರಿ ಹೇಳಿದ್ದಾರೆ.

ಸೌಜನ್ಯ : indianexpress.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X