Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಟೊ ಸೆಟ್ಲ್ಮೆಂಟ್ ಮೂಲಕ ಪಿಎಫ್ ಹಣ...

ಆಟೊ ಸೆಟ್ಲ್ಮೆಂಟ್ ಮೂಲಕ ಪಿಎಫ್ ಹಣ ಹಿಂಪಡೆಯುವಿಕೆ ಮಿತಿ 5 ಲಕ್ಷ ರೂ.ಗೆ ಏರಿಕೆ

ವಾರ್ತಾಭಾರತಿವಾರ್ತಾಭಾರತಿ24 Jun 2025 9:39 PM IST
share
ಆಟೊ ಸೆಟ್ಲ್ಮೆಂಟ್ ಮೂಲಕ ಪಿಎಫ್ ಹಣ ಹಿಂಪಡೆಯುವಿಕೆ ಮಿತಿ 5 ಲಕ್ಷ ರೂ.ಗೆ ಏರಿಕೆ

ಹೊಸದಿಲ್ಲಿ: ಉದ್ಯೋಗಿಗಳು ತಮ್ಮ ಭವಿಷ್ಯನಿಧಿ ಖಾತೆಗಳಿಂದ ಆಟೊ ಸೆಟ್ಲ್ಮೆಂಟ್ ಅಥವಾ ಸ್ವಯಂ ಇತ್ಯರ್ಥ ರೀತಿಯಲ್ಲಿ ಮುಂಗಡವಾಗಿ ಹಣವನ್ನು ಹಿಂಪಡೆಯುವ ಗರಿಷ್ಠ ಮಿತಿಯನ್ನು ಒಂದು ಲ.ರೂ.ಗಳಿಂದ ಐದು ಲ.ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರು ಮಂಗಳವಾರ ಪ್ರಕಟಿಸಿದರು.

ಸರಕಾರದ ನಿರ್ಧಾರವು ಪಿಎಫ್ ಸದಸ್ಯರು ಮೂರು ದಿನಗಳಲ್ಲಿ ತಮ್ಮ ಖಾತೆಗಳಿಂದ ಐದು ಲ.ರೂ.ವರೆಗಿನ ಮೊತ್ತವನ್ನು ಹಿಂಪಡೆಯಲು ಅವಕಾಶ ಒದಗಿಸುತ್ತದೆ.

ಪ್ರಸ್ತುತ ಮೂರು ದಿನಗಳ ಗಡುವು ಹೊಂದಿರುವ ಆಟೋ ಸೆಟ್ಲ್ಮೆಂಟ್ ವಿಧಾನದ ಮೂಲಕ ಹಿಂಪಡೆಯವಬಹುದಾದ ಗರಿಷ್ಠ ಹಣವು ಒಂದು ಲ.ರೂ.ಗೆ ಸೀಮಿತವಾಗಿದೆ.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ) ಆಟೊ ಸೆಟ್ಲ್ಮೆಂಟ್ ಮಿತಿಯನ್ನು ಒಂದು ಲ.ರೂ.ಗಳಿಂದ ಐದು ಲ.ರೂ.ಗಳಿಗೆ ಹೆಚ್ಚಿಸಿದ್ದು,ಇದು ಸದಸ್ಯರಿಗೆ ತುರ್ತು ಅಗತ್ಯಗಳ ಸಮಯದಲ್ಲಿ ತ್ವರಿತವಾಗಿ ಹಣವನ್ನು ಹಿಂಪಡೆಯಲು ನೆರವಾಗುತ್ತದೆ. ಇದರಿಂದ ಲಕ್ಷಾಂತರ ಸದಸ್ಯರಿಗೆ ಪ್ರಯೋಜನವಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಮಾಂಡವೀಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಏಳು ಕೋಟಿಗೂ ಅಧಿಕ ಸದಸ್ಯರನ್ನು ಹೊಂದಿರುವ ಇಪಿಎಫ್ಒ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವವರಿಗೆ ತ್ವರಿತ ನೆರವನ್ನು ಒದಗಿಸಲು ಮೊದಲ ಬಾರಿಗೆ ಆನ್ಲೈನ್ ಸ್ವಯಂ ಇತ್ಯರ್ಥ ಸೌಲಭ್ಯವನ್ನು ಪರಿಚಯಿಸಿತ್ತು. ಆಗಿನಿಂದ ಈ ಸೌಲಭ್ಯವನ್ನು ಅನಾರೋಗ್ಯ,ಶಿಕ್ಷಣ,ಮದುವೆ ಮತ್ತು ವಸತಿ ಉದ್ದೇಶಗಳಿಗಾಗಿ ವಿಸ್ತರಿಸಲಾಗಿದೆ.

ಯಾವುದೇ ಕಚೇರಿ ಅಲೆದಾಟವಿಲ್ಲದೆ ಸದಸ್ಯರು ಮುಂಗಡವಾಗಿ ಹಣ ಹಿಂಪಡೆಯಲು ಸಲ್ಲಿಸುವ ಅರ್ಜಿಗಳನ್ನು ಸಿಸ್ಟಮ್ ಸ್ವಯಂಚಾಲಿತವಾಗಿ ಸಂಸ್ಕರಿಸುತ್ತದೆ,ತನ್ಮೂಲಕ ತ್ವರಿತ ಹಣಪಾವತಿ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ.

ವಿತ್ತವರ್ಷ 2025ರಲ್ಲಿ ಇಪಿಎಫ್ಒ ಆಟೋ ಸೆಟ್ಲ್ಮೆಂಟ್ ಮೂಲಕ ದಾಖಲೆಯ 2.34 ಕೋ.ಕ್ಲೈಮ್ಗಳನ್ನು ಇತ್ಯರ್ಥಗೊಳಿಸಿದ್ದು,ಇದು ವಿತ್ತವರ್ಷ 2024ರಲ್ಲಿ ಈ ವಿಧಾನದ ಮೂಲಕ ಇತ್ಯರ್ಥಗೊಳಿಸಿದ್ದ 89.52 ಕ್ಲೈಮ್ಗಳಿಗೆ ಹೋಲಿಸಿದರೆ ಶೇ.161ರಷ್ಟು ಅಧಿಕವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X