Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹರ್ಯಾಣ: ಹದಿಹರೆಯದ ಮನೆಗೆಲಸದ ಬಾಲಕಿಗೆ...

ಹರ್ಯಾಣ: ಹದಿಹರೆಯದ ಮನೆಗೆಲಸದ ಬಾಲಕಿಗೆ ಥಳಿಸಿ, ನಾಯಿಗಳಿಂದ ಕಚ್ಚಿಸಿದ ಮಾಲಕಿ

ವಾರ್ತಾಭಾರತಿವಾರ್ತಾಭಾರತಿ10 Dec 2023 11:14 AM IST
share
ಹರ್ಯಾಣ: ಹದಿಹರೆಯದ ಮನೆಗೆಲಸದ ಬಾಲಕಿಗೆ ಥಳಿಸಿ,  ನಾಯಿಗಳಿಂದ ಕಚ್ಚಿಸಿದ ಮಾಲಕಿ

ಗುರುಗ್ರಾಮ: ಮನೆಕೆಲಸಕ್ಕಿದ್ದ 13 ವರ್ಷದ ಬಾಲಕಿಯನ್ನು ವಿವಸ್ತ್ರಗೊಳಿಸಿ, ಥಳಿಸಿದ್ದಲ್ಲದೇ ಆಕೆಗೆ ನಾಯಿಯಿಂದ ಕಚ್ಚಿಸಿದ ಅಮಾನವೀಯ ಘಟನೆ ಗುರುಗ್ರಾಮದ ಸೆಕ್ಟರ್ 57ರಲ್ಲಿ ನಡೆದಿರುವ ಬಗ್ಗೆ PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ತನ್ನ ಪುತ್ರಿಯನ್ನು ಮನೆ ಮಾಲಕಿಯು ಪದೇ ಪದೇ ಕಬ್ಬಿಣದ ಸಲಾಕೆ ಹಾಗೂ ಸುತ್ತಿಗೆಯಿಂದ ಹೊಡೆಯುತ್ತಿದ್ದಳು. ಆಕೆಯ ಇಬ್ಬರು ಪುತ್ರರು ಆಕೆಯನ್ನು ನಗ್ನಗೊಳಿಸಿ, ಆಕೆಯ ವಿಡಿಯೊ ಚಿತ್ರೀಕರಣ ನಡೆಸಿದ್ದರು ಹಾಗೂ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ್ದರು. ಬಾಯಿಗೆ ಪಟ್ಟಿ ಬಿಗಿದು ಕೋಣೆಯೊಂದರಲ್ಲಿ ಕೂಡಿ ಹಾಕಿದ್ದ ಬಾಲಕಿಯನ್ನು ಆಕೆಯ ತಾಯಿ ಹಾಗೂ ಆಕೆಯ ಮಾಲಕ ಶನಿವಾರ ಬಿಡುಗಡೆಗೊಳಿಸಿದ್ದಾರೆ. ನನ್ನ ಪುತ್ರಿಗೆ ಕೇವಲ 48 ಗಂಟೆಗೊಮ್ಮೆ ಊಟ ನೀಡಲಾಗುತ್ತಿತ್ತು ಹಾಗೂ ಆಕೆ ಕೂಗಿಕೊಳ್ಳದಿರಲಿ ಎಂದು ಆಕೆಯ ಬಾಯಿಗೆ ಪಟ್ಟಿ ಬಿಗಿಯಲಾಗಿತ್ತು ಎಂದು ಬಾಲಕಿಯ ತಾಯಿಯು ದೂರಿನಲ್ಲಿ ಆರೋಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಮಾಲಕಿಯು ಆಕೆಯ ಕೈಗೆ ಆ್ಯಸಿಡ್ ಸುರಿದು, ಈ ಕುರಿತು ಯಾರಿಗಾದರೂ ಹೇಳಿದರೆ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಸುತ್ತಿದ್ದಳು ಎಂದು ಎಫ್ಐಆರ್ನಲ್ಲಿ ಆರೋಪಿಸಿಲಾಗಿದೆ. ಈ ಪ್ರಕರಣವು ಸೆಕ್ಟರ್ 51 ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಬಿಹಾರ ಮೂಲದವರಾದ ದೂರುದಾರಳು ತನ್ನ ಪುತ್ರಿಯನ್ನು ಸೆಕ್ಟರ್ 57ರ ನಿವಾಸಿಯಾದ ಶಶಿ ಶರ್ಮ ಎಂಬುವವರ ಮನೆಗೆಲಸಕ್ಕೆ ಸೇರಿಸಿದ್ದೆ. ಅದಕ್ಕಾಗಿ ಜೂನ್ 27ರಂದು ಅವರ ಮನೆ ಬಳಿಯೇ ವಾಹನಗಳನ್ನು ಸ್ವಚ್ಛಗೊಳಿಸುವ ವ್ಯಕ್ತಿಯ ನೆರವನ್ನು ಪಡೆದಿದ್ದೆ ಎಂದು ತಿಳಿಸಿದ್ದಾಳೆ.

ಮನೆಯಲ್ಲಿಯೇ ಉಳಿದು ಕೆಲಸ ಮಾಡಲು ತಿಂಗಳಿಗೆ ರೂ. 9000 ವೇತನವನ್ನು ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಬಾಲಕಿಯ ತಾಯಿಯು ಆ ಮೊತ್ತವನ್ನು ಕೇವಲ ಎರಡು ತಿಂಗಳು ಮಾತ್ರ ಸ್ವೀಕರಿಸಿದ್ದಳು ಎಂದು ಹೇಳಲಾಗಿದೆ.

ಬಾಲಕಿಯ ತಾಯಿಯ ದೂರನ್ನು ಆಧರಿಸಿ ಶಶಿ ಶರ್ಮ ಹಾಗೂ ಆಕೆಯ ಇಬ್ಬರು ಪುತ್ರರ ವಿರುದ್ಧ ಪ್ರಾಣಿಗಳ ಹಿಂಸೆ, ಹಲ್ಲೆ, ಮಹಿಳೆಯ ಘನತೆಗೆ ಧಕ್ಕೆ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪಗಳಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

ಇದಲ್ಲದೆ ಮೂವರ ವಿರುದ್ಧ ಪೋಕ್ಸೊ ಕಾಯ್ದೆಯ ಸೆಕ್ಷನ್ 10 ಹಾಗೂ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X