Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಡಿ...

ಬಿಜೆಪಿಯ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಡಿ ಎಂದು ಆಮಿರ್ ಖಾನ್ ಕರೆ ನೀಡಿದ್ದಾರೆಯೆ? ಇಲ್ಲಿದೆ ವಾಸ್ತವ ಸಂಗತಿ..

ವಾರ್ತಾಭಾರತಿವಾರ್ತಾಭಾರತಿ23 Sept 2023 1:20 PM IST
share
ಬಿಜೆಪಿಯ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಡಿ ಎಂದು ಆಮಿರ್ ಖಾನ್ ಕರೆ ನೀಡಿದ್ದಾರೆಯೆ? ಇಲ್ಲಿದೆ ವಾಸ್ತವ ಸಂಗತಿ..

ಹೊಸದಿಲ್ಲಿ: ಚುನಾವಣಾ ವರ್ಷವನ್ನು ಹಾದು ಹೋಗುತ್ತಿರುವ ಈ ಘಟ್ಟದಲ್ಲಿ ರಾಜಕೀಯ ವಿವಾದಗಳೂ ಒಂದರ ನಂತರ ಒಂದು ಭುಗಲೇಳುತ್ತಿವೆ. ಇಂತಹುದೇ ಮತ್ತೊಂದು ವಿವಾದ, ಖ್ಯಾತ ಬಾಲಿವುಡ್ ತಾರೆ ಆಮಿರ್ ಖಾನ್ ಬಿಜೆಪಿ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಡಿ ಎಂದು ಜನರಿಗೆ ಕರೆ ನೀಡಿದ್ದಾರೆ ಎಂಬ ವೈರಲ್ ವೀಡಿಯೊ. ಈ ಕುರಿತು ಫ್ಯಾಕ್ಟ್ ಚೆಕ್ ಮಾಡಿದಾಗ, ಈ ವೀಡಿಯೊ ಸಂಪೂರ್ಣ ದಾರಿ ತಪ್ಪಿಸುವಂತಿದೆ ಎಂದು indiatvnews.com ವರದಿ ಮಾಡಿದೆ.

Meraj_lifeline7 ಎಂಬ ಬಳಕೆದಾರರೊಬ್ಬರು ಆಮಿರ್ ಖಾನ್ ಅವರದ್ದೆಂದು ಹೇಳಲಾದ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವೀಡಿಯೊವನ್ನು ಸೆಪ್ಟೆಂಬರ್ 11ರಂದು ಪೋಸ್ಟ್ ಮಾಡಲಾಗಿದ್ದು, ಈ ವೀಡಿಯೊವನ್ನು ಈವರೆಗೆ 57,000ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ವೀಡಿಯೊದ ಶೀರ್ಷಿಕೆಯಲ್ಲಿ: “ಹೇ.. ಇಲ್ಲಿ ನೋಡಿ, ಇದೀಗ ಬಿಜೆಪಿ ವಿರುದ್ಧ ಆಮಿರ್ ಖಾನ್ ವೀಡಿಯೊ ಕೂಡಾ ಹೊರ ಬಂದಿದೆ. ಸೂಕ್ತ ವ್ಯಕ್ತಿಗಳ ಪರವಾಗಿ ಮತ ಚಲಾಯಿಸಿ. ನಿಮ್ಮ ಮತವು ನಿಮ್ಮ ಮಕ್ಕಳ ಭವಿಷ್ಯವನ್ನು ನಿರ್ಣಯಿಸುತ್ತದೆ” ಎಂದು ಬರೆಯಲಾಗಿದೆ. ಈ ಪಠ್ಯದ ಹಿಂದುಗಡೆ ಆಮಿರ್ ಖಾನ್ ರನ್ನು ನೋಡಬಹುದಾಗಿದೆ ಮತ್ತು ಅವರ ಧ್ವನಿಯನ್ನು ಕೇಳಬಹುದಾಗಿದೆ.

ಈ ಕುರಿತು ಸತ್ಯ ಶೋಧನೆ ನಡೆಸಿರುವ India TV ಸುದ್ದಿ ಸಂಸ್ಥೆ, ಮೊದಲ ಆ ವೀಡಿಯೊವನ್ನು ಎಚ್ಚರಿಕೆಯಿಂದ ಗಮನಿಸಿದೆ. ಆ ವೀಡಿಯೊದಲ್ಲಿ ಆಮಿರ್ ಖಾನ್ ಮಾತನಾಡಿರುವುದು ದೃಢಪಟ್ಟಿದೆ. ನಂತರ ‘Aamir Khan+vote appeal’ ಎಂಬ ಕೀ ಸರ್ಚ್ ಮೂಲಕ ಗೂಗಲ್ ನಲ್ಲಿ ಹಲವಾರು ವೀಡಿಯೊಗಳನ್ನು ಪತ್ತೆ ಹಚ್ಚಲಾಗಿದೆ. ಈ ಪತ್ತೆಯ ಸಂದರ್ಭದಲ್ಲಿ ಪರಿಶೀಲಿಸಿದ ಯೂಟ್ಯೂಬ್ ವಾಹಿನಿಯಾದ ಎಡಿಆರ್ ಇಂಡಿಯಾಗೆ ಸಂಬಂಧಿಸಿದ ವೀಡಿಯೊ ಪತ್ತೆಯಾಗಿದೆ. ಈ ವೀಡಿಯೊದಲ್ಲೂ ಕೂಡಾ ಆಮಿರ್ ಖಾನ್ ವೈರಲ್ ವೀಡಿಯೊದಲ್ಲಿ ಏನು ಹೇಳಿದ್ದಾರೊ ಅದನ್ನೇ ಹೇಳಿರುವುದು ಕಂಡು ಬಂದಿದೆ. ಈ ವೀಡಿಯೊವನ್ನು ಎಪ್ರಿಲ್ 18, 2019ರಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೊಗೆ ‘ಮತದಾರರಿಗೆ ಆಮಿರ್ ಖಾನ್ ಮನವಿ’ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. India TV ಸುದ್ದಿ ಸಂಸ್ಥೆಯ ಸತ್ಯಶೋಧನಾ ವೇದಿಕೆಯು ಈ ಒಂದು ನಿಮಿಷದ ವೀಡಿಯೊವನ್ನು ಎಚ್ಚರಿಕೆಯಿಂದ ಆಲಿಸಿದೆ. ಈ ವೀಡಿಯೊದುದ್ದಕ್ಕೂ ಆಮಿರ್ ಖಾನ್ ಬಿಜೆಪಿ ಅಥವಾ ಇನ್ಯಾವುದೇ ರಾಜಕೀಯ ಪಕ್ಷದ ವಿರುದ್ಧ ಮತ ಚಲಾಯಿಸುವಂತೆ ಕರೆ ನೀಡಿರುವುದು ಕಂಡು ಬಂದಿಲ್ಲ.

ಆಮಿರ್ ಖಾನ್ ರ ಈ ವೀಡಿಯೊವು 2019ರ ಲೋಕಸಭಾ ಚುನಾವಣಾ ಸಂದರ್ಭದ್ದು. ಮತದಾರರು ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಮಾಹಿತಿಯನ್ನು ಹೇಗೆಲ್ಲ ಪಡೆದುಕೊಳ್ಳಬಹುದು ಎಂಬ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆಮಿರ್ ಖಾನ್ ಮಾಡಿದ್ದಾರೆ. ಒಂದು ವೇಳೆ ಮತದಾರರು ತಮ್ಮ ಅಭ್ಯರ್ಥಿಗಳು ಅಥವಾ ಅವರ ಚುನಾವಣಾ ಪ್ರಚಾರದ ಕುರಿತು ಹೆಚ್ಚು ಮಾಹಿತಿ ಪಡೆಯಬೇಕಿದ್ದರೆ, ನಿರ್ದಿಷ್ಟ ಸಂಖ್ಯೆಯೊಂದಕ್ಕೆ ಕರೆ ಅಥವಾ ಸಂದೇಶ ರವಾನಿಸಬಹುದು ಎಂದೂ ತಿಳಿಸಿದ್ದಾರೆ. ಇಡೀ ವೀಡಿಯೊ ಉದ್ದಕ್ಕೂ ಆಮಿರ್ ಖಾನ್ ಯಾವುದೇ ರಾಜಕೀಯ ಪಕ್ಷ ಅಥವಾ ಅದರ ಅಭ್ಯರ್ಥಿಗಳ ಕುರಿತು ಪ್ರಸ್ತಾಪಿಸಿಲ್ಲ. ಈ ವೀಡಿಯೊ 2019ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಹೊಂದಿದ್ದು, ಆಮಿರ್ ಖಾನ್ ಯಾವುದೇ ರಾಜಕೀಯ ಪಕ್ಷದ ಹೆಸರನ್ನು ಅದರಲ್ಲಿ ಉಲ್ಲೇಖಿಸಿಲ್ಲ ಎಂಬ ಸಂಗತಿ India TV ಸುದ್ದಿ ಸಂಸ್ಥೆಯ ಫ್ಯಾಕ್ಟ್ ಚೆಕ್ ನಲ್ಲಿ ಬಯಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X