Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದ್ರಾಸ್ ಐಐಟಿ ಶಾಲಾ ವಿದ್ಯಾರ್ಥಿಗಳ ಮೇಲೆ...

ಮದ್ರಾಸ್ ಐಐಟಿ ಶಾಲಾ ವಿದ್ಯಾರ್ಥಿಗಳ ಮೇಲೆ ಪರೀಕ್ಷಾರ್ಥ ಪ್ರಯೋಗ: ಭುಗಿಲೆದ್ದ ವಿವಾದ

ವಾರ್ತಾಭಾರತಿವಾರ್ತಾಭಾರತಿ5 Dec 2024 8:34 AM IST
share
ಮದ್ರಾಸ್ ಐಐಟಿ ಶಾಲಾ ವಿದ್ಯಾರ್ಥಿಗಳ ಮೇಲೆ ಪರೀಕ್ಷಾರ್ಥ ಪ್ರಯೋಗ: ಭುಗಿಲೆದ್ದ ವಿವಾದ

ಚೆನ್ನೈ: ಮದ್ರಾಸ್ ಐಐಟಿ ತನ್ನ ಕ್ಯಾಂಪಸ್‍ನಲ್ಲಿ ನಡೆಸುವ ವನ ವಾಣಿ ಮೆಟ್ರಿಕ್ಯುಲೇಶನ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಉತ್ಪನ್ನವೊಂದರ ಪರೀಕ್ಷಾರ್ಥ ಪ್ರಯೋಗ ನಡೆಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪ್ರಯೋಗಕ್ಕೆ ಮುನ್ನ ಪೋಷಕರ ಒಪ್ಪಿಗೆ ಪಡೆದಿಲ️್ಲ ಎಂದು ಪೋಷಕರು ಆಕ್ಷೇಪಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ಶಾಲೆಯ ಪ್ರಾಚಾರ್ಯ ಎಂ.ಸತೀಶ್‍ಕುಮಾರ್ ಅವರನ್ನು ಮದ್ರಾಸ್ ಐಐಟಿ ವಜಾಗೊಳಿಸಿದೆ.

ಕೆಲ️ ಪೋಷಕರು ದೂರು ನೀಡಿದಂತೆ ಆಗಸ್ಟ್ 19ರಂದು ವಿದ್ಯಾರ್ಥಿಗಳು ತಮ್ಮ ಶೂಗಳಲ್ಲಿ 'ಸ್ಮಾರ್ಟ್ ಇನ್‍ಸೋಲ್' ಮತ್ತು ಸ್ಮಾರ್ಟ್‍ವಾಚ್ ಧರಿಸುವಂತೆ ಸೂಚಿಸಲಾಗಿತ್ತು ಮತ್ತು ಹಾರುತ್ತ ನಿರ್ದಿಷ್ಟ ಅಂತರವನ್ನು ಕ್ರಮಿಸುವಂತೆ ಹೇಳಲಾಗಿತ್ತು. ಐಐಟಿ-ಎಂ ಬೋಧಕರು ಮತ್ತು ವಿದ್ಯಾರ್ಥಿಗಳು ಈ ಪ್ರಯೋಗ ನಡೆಸಿದ್ದರು.

"ಕ್ರೀಡಾಸಂಬಂಧಿ ಉತ್ಪನ್ನವನ್ನು ಅಬಿ️üವೃದ್ಧಿಪಡಿಸಲ️ು ಅವರು ಪರೀಕ್ಷೆ ನಡೆಸಿದ್ದಾರೆ ಎನ್ನುವುದು ನಮ್ಮ ಶಂಕೆ. ಭಾರತೀಯ ವೈದ್ಯಕೀಯ ಸಂಶೋಧನಾ ಕೇಂದ್ರ (ಐಸಿಎಂಆರ್) ನೈತಿಕ ಮಾರ್ಗಸೂಚಿ ಅನ್ವಯ ಅವರು ಮಾನವನ ಮೇಲೆ ನಡೆಸುವ ಯಾವುದೇ ಪರೀಕ್ಷೆಗೆ ಮುನ್ನ ಪೋಷಕರು ಮತ್ತು ವಿದ್ಯಾರ್ಥಿಗಳಿಂದ ಒಪ್ಪಿಗೆ ಪಡೆಯಬೇಕಿತ್ತು" ಎಂದು ಹೆಸರು ಬಹಿರಂಗಪಡಿಸಲ️ು ಇಚ್ಛಿಸದ ಪೋಷಕರೊಬ್ಬರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಐಐಟಿ-ಎಂ ತನಿಖೆ ನಡೆಸುವ ಸಲ️ುವಾಗಿ ಸತ್ಯಶೋಧನಾ ತಂಡ ರಚಿಸಿತ್ತು. "ಆಗಸ್ಟ್ 19ರಂದು ವನ ವಾಣಿ ಶಾಲೆಯಲ್ಲಿ, ವಾಣಿಜ್ಯವಾಗಿ ಕಾರ್ಯಸಾಧು ಎನಿಸಿದ ವಸ್ತುಗಳನ್ನು ಬಳಸಿಕೊಂಡು ಸಿದ್ಧಪಡಿಸಿದ ಸ್ಮಾರ್ಟ್ ಇನ್‍ಸೋಲ್‍ನ ವೆಚ್ಚದ ಕಾರ್ಯಸಾಧ್ಯತೆ ಬಗ್ಗೆ ಪರೀಕ್ಷೆ ನಡೆಸಲಾಗಿತ್ತು. ಇದು ಯಾವುದೇ ಕ್ಲಿನಿಕಲ್ ಟ್ರಯಲ್ ಅಥವಾ ವೈದ್ಯಕೀಯ ಸಂಬಂಧಿ ಸಾಧನವಲ️್ಲ" ಎಂದು ಐಐಟಿ-ಎಂ ಸಮರ್ಥಿಸಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X