ಮುಂಗಾರು ಅಧಿವೇಶನ: ಎಸ್ಐಆರ್ ವಿರುದ್ಧ ಸಂಸತ್ತಿನ ಆವರಣದಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರಿಂದ ಪ್ರತಿಭಟನೆ

Screengrab:X/@PTI_News
ಹೊಸದಿಲ್ಲಿ : ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಸಂಸತ್ತಿನ ಆವರಣದಲ್ಲಿ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಸಂಸದರು ʼಎಸ್ಐಆರ್ ನಿಲ್ಲಿಸಿʼ ಎಂದು ಪೋಸ್ಟರ್ಗಳನ್ನು ಹಿಡಿದು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ(SIR) ಬಗ್ಗೆ ಚರ್ಚೆಯಾಗಬೇಕೆಂದು ವಿಪಕ್ಷಗಳು ಪಟ್ಟು ಹಿಡಿದ ಕಾರಣ ಲೋಕಸಭೆಯ ಕಲಾಪವನ್ನು ಅಲ್ಪ ಕಾಲ ಮುಂದೂಡಲಾಗಿತ್ತು. ಇದೀಗ ಲೋಕಸಭೆಯ ಕಲಾಪ ಮತ್ತೆ ಪ್ರಾರಂಭವಾಗಿದೆ. ರಾಜ್ಯಸಭೆಯ ಕಲಾಪ ಮಧ್ಯಾಹ್ನ 2ರವರೆಗೆ ಮುಂದೂಡಲಾಗಿದೆ.
VIDEO | Monsoon Session: INDIA bloc protests over SIR exercise in Bihar at Parliament premises.#Bihar #SIR pic.twitter.com/pCG4On6SxF
— Press Trust of India (@PTI_News) July 28, 2025
Next Story







