Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಬಂದರುಗಳ ಮಸೂದೆ- 2025...

ಭಾರತೀಯ ಬಂದರುಗಳ ಮಸೂದೆ- 2025 ಲೋಕಸಭೆಯಲ್ಲಿ ಮಂಡನೆ

ವಾರ್ತಾಭಾರತಿವಾರ್ತಾಭಾರತಿ28 March 2025 9:22 PM IST
share
ಭಾರತೀಯ ಬಂದರುಗಳ ಮಸೂದೆ- 2025 ಲೋಕಸಭೆಯಲ್ಲಿ ಮಂಡನೆ

ಹೊಸದಿಲ್ಲಿ: ಬೃಹತ್ ಬಂದರುಗಳಾಗಿ ಕೆಲವು ಬಂದರುಗಳ ವರ್ಗೀಕರಣ, ಸಮುದ್ರ ಕ್ಷೇತ್ರ ಅಭಿವೃದ್ಧಿ ಮಂಡಳಿ ಸ್ಥಾಪನೆ ಮತ್ತು ಅಂತರರಾಷ್ಟ್ರೀಯ ಬಾಧ್ಯತೆಗಳ ಅಳವಡಿಕೆಯನ್ನು ಪ್ರಸ್ತಾವಿಸಿರುವ ಮಸೂದೆಯನ್ನು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ.

ನೌಕಾ ಸಚಿವ ಸರ್ಬಾನಂದ ಸೋನೊವಾಲ್ ಅವರು ಮಂಡಿಸಿದ ಭಾರತೀಯ ಬಂದರುಗಳ ಮಸೂದೆ 2025,117 ವರ್ಷಗಳಷ್ಟು ಹಳೆಯದಾದ ಭಾರತೀಯ ಬಂದರುಗಳ ಕಾಯ್ದೆ 1908ನ್ನು ರದ್ದುಗೊಳಿಸುತ್ತದೆ.

ಪ್ರಸ್ತಾವಿತ ಶಾಸನವು ದೇಶೀಯ ಆದ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಅಂತರರಾಷ್ಟ್ರೀಯ ಬಾಧ್ಯತೆಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವ ಮತ್ತು ಅಧೀನ ಶಾಸನವನ್ನು ರಚಿಸಲು ಸಾಕಷ್ಟು ಅಧಿಕಾರವನ್ನು ನೀಡಲು ಬಯಸಿದೆ. ಜೊತೆಗೆ ಭಾರತೀಯ ಕರಾವಳಿಯನ್ನು ಸುಸಂಬದ್ಧ ಮತ್ತು ಸುಸ್ಥಿರ ರೀತಿಯಲ್ಲಿ ಬಳಸಿಕೊಳ್ಳಲು ಬಂದರುಗಳ ಅಭಿವೃದ್ಧಿಯನ್ನು ಸಮಗ್ರಗೊಳಿಸಲು ಉದ್ದೇಶಿಸಿದೆ ಎಂದು ಮಸೂದೆಯ ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸರಕಾರವು ನಿಗದಿಗೊಳಿಸಿದ ಮಾನದಂಡಗಳನ್ನು ಪೂರೈಸಿದಾಗ ಪ್ರಮುಖ ಅಥವಾ ಪ್ರಮುಖವಲ್ಲದ ಬಂದರನ್ನು ಅಧಿಸೂಚನೆಯ ಮೂಲಕ ‘ಬೃಹತ್ ಬಂದರು’ ಎಂದು ವರ್ಗೀಕರಿಸಲು ಮಸೂದೆಯು ಅವಕಾಶ ನೀಡುತ್ತದೆ.

ಕೇಂದ್ರ ಸರಕಾರದಿಂದ ಸಮುದ್ರ ಕ್ಷೇತ್ರ ಅಭಿವೃದ್ಧಿ ಮಂಡಳಿಯ ಸ್ಥಾಪನೆಯನ್ನೂ ಮಸೂದೆಯು ಪ್ರಸ್ತಾವಿಸಿದೆ. ಮಂಡಳಿಯು ಭಾರತದಲ್ಲಿನ ಬಂದರುಗಳಿಗೆ ಪರಿಣಾಮಕಾರಿ ಮತ್ತು ಪೂರಕ ಚೌಕಟ್ಟು ಸೇರಿದಂತೆ ವಿವಿಧ ಶಿಫಾರಸುಗಳನ್ನು ಮಾಡುತ್ತದೆ. ಬಂದರಿನ ಮಾಲೀಕತ್ವ ಅಥವಾ ನಿಯಂತ್ರಣದಲ್ಲಿ ಬದಲಾವಣೆಗೆ ಕೇಂದ್ರ ಸರಕಾರದ ಪೂರ್ವಾನುಮತಿಯನ್ನು ಮಸೂದೆಯು ಕಡ್ಡಾಯಗೊಳಿಸಲಿದೆ.

ಮಸೂದೆ ಮಂಡನೆಯನ್ನು ವಿರೋಧಿಸಿದ ಸಿಪಿಎಂ ಸಂಸದ ಕೆ.ರಾಧಾಕೃಷ್ಣನ್ ಅವರು,ಅದು ಬಂದರುಗಳ ಮೇಲೆ ನಿಯಂತ್ರಣದ ಕೇಂದ್ರೀಕರಣವನ್ನು ಉದ್ದೇಶಿಸಿರುವುದರಿಂದ ರಾಜ್ಯ ಸರಕಾರಗಳ ಅಧಿಕಾರವನ್ನು ಅತಿಕ್ರಮಿಸುತ್ತದೆ ಎಂದು ಹೇಳಿದರು.

1908ರಲ್ಲಿ ಭಾರತೀಯ ಬಂದರು ಕಾಯ್ದೆಯು ಜಾರಿಯಾದಾಗ ಎಲ್ಲ ಬಂದರುಗಳು ಕೇಂದ್ರದ ಅಧೀನದಲ್ಲಿದ್ದವು. ಇತ್ತೀಚಿನ ಸಮಯದಲ್ಲಿ ಹಲವಾರು ಖಾಸಗಿ ಬಂದರುಗಳು ತಲೆಯೆತ್ತಿವೆ ಮತ್ತು ಸರಕಾರಿ ಬಂದರುಗಳ ಭಾಗಗಳನ್ನು ಖಾಸಗಿ ಕಂಪನಿಗಳಿಗೆ ಗುತ್ತಿಗೆ ನೀಡಲಾಗಿದೆ ಎಂದು ಹೇಳಿದ ಟಿಎಂಸಿ ಸಂಸದ ಸೌಗತ ರೇ ಅವರು, ಪ್ರಸ್ತುತ ಶಾಸನವು ಖಾಸಗಿ ಬಂದರುಗಳನ್ನು ನಿಯಂತ್ರಿಸಲು ಸಮರ್ಥವಾಗಿರುವಂತೆ ಕಂಡು ಬರುತ್ತಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X