Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದು ಲವ್ ಜಿಹಾದ್ ಪ್ರಕರಣವೇ ಆಗಿರಲಿಲ್ಲ:...

ಅದು ಲವ್ ಜಿಹಾದ್ ಪ್ರಕರಣವೇ ಆಗಿರಲಿಲ್ಲ: ಉತ್ತರ ಕಾಶಿ ಅಪಹರಣ ಪ್ರಕರಣದ ಕುರಿತು ಸ್ಫೋಟಕ ಹೇಳಿಕೆ ನೀಡಿದ ದೂರುದಾರ

ಪುರೋಲ: ಸಾಮಾನ್ಯ ಅಪರಾಧ ಪ್ರಕರಣವೊಂದಕ್ಕೆ ಲವ್ ಜಿಹಾದ್ ಪ್ರಕರಣದ ಆಯಾಮ ನೀಡಿದ್ದರಿಂದಾಗಿಯೇ ಉತ್ತರ ಕಾಶಿಯಲ್ಲಿ ಕಳೆದ ಎರಡು ವಾರದಿಂದ ಕೋಮು ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ ಎಂಬ ಅಂಶ ತಡವಾಗಿ ಬೆಳಕಿಗೆ ಬಂದಿದೆ.

ವಾರ್ತಾಭಾರತಿವಾರ್ತಾಭಾರತಿ18 Jun 2023 2:36 PM IST
share
ಅದು ಲವ್ ಜಿಹಾದ್ ಪ್ರಕರಣವೇ ಆಗಿರಲಿಲ್ಲ: ಉತ್ತರ ಕಾಶಿ ಅಪಹರಣ ಪ್ರಕರಣದ ಕುರಿತು ಸ್ಫೋಟಕ ಹೇಳಿಕೆ ನೀಡಿದ ದೂರುದಾರ
ಪುರೋಲ: ಸಾಮಾನ್ಯ ಅಪರಾಧ ಪ್ರಕರಣವೊಂದಕ್ಕೆ ಲವ್ ಜಿಹಾದ್ ಪ್ರಕರಣದ ಆಯಾಮ ನೀಡಿದ್ದರಿಂದಾಗಿಯೇ ಉತ್ತರ ಕಾಶಿಯಲ್ಲಿ ಕಳೆದ ಎರಡು ವಾರದಿಂದ ಕೋಮು ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ ಎಂಬ ಅಂಶ ತಡವಾಗಿ ಬೆಳಕಿಗೆ ಬಂದಿದೆ.

ಪುರೋಲ: ಸಾಮಾನ್ಯ ಅಪರಾಧ ಪ್ರಕರಣವೊಂದಕ್ಕೆ ಲವ್ ಜಿಹಾದ್ ಪ್ರಕರಣದ ಆಯಾಮ ನೀಡಿದ್ದರಿಂದಾಗಿಯೇ ಉತ್ತರ ಕಾಶಿಯಲ್ಲಿ ಕಳೆದ ಎರಡು ವಾರದಿಂದ ಕೋಮು ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ ಎಂಬ ಅಂಶ ತಡವಾಗಿ ಬೆಳಕಿಗೆ ಬಂದಿದೆ. ಅಪಹರಣ ಪ್ರಕರಣದ ಕುರಿತು ದೂರುದಾರರಾಗಿದ್ದ 40 ವರ್ಷದ ಶಾಲಾ ಶಿಕ್ಷಕರೊಬ್ಬರು ಇದರಿಂದ ಮನನೊಂದು ಕಳೆದ ಎರಡು ವಾರಗಳಿಂದ ಮನೆಯಿಂದ ಹೊರಗೇ ಬಂದಿಲ್ಲ. ತಮ್ಮ ಬೆಂಬಲ ಕೋರಿ ಬಂದ ಜನರನ್ನು ಭೇಟಿ ಮಾಡಲೂ ನಿರಾಕರಿಸಿದ್ದಾರೆ ಹಾಗೂ ಹೊಸ ಮೊಬೈಲ್ ಸಂಖ್ಯೆ ಖರೀದಿಸಿದ್ದಾರೆ ಎಂದು hindustantimes.com ವರದಿ ಮಾಡಿದೆ.

ಅಪಹರಣ ಪ್ರಕರಣಕ್ಕೆ ಯಾವುದೇ ಕೋಮು ಆಯಾಮ ಇಲ್ಲದೆ ಹೋದರೂ ಕೆಲವು ಬಲಪಂಥೀಯ ಹಿಂದೂ ಸಂಘಟನೆಗಳು ಉದ್ದೇಶಪೂರ್ವಕವಾಗಿಯೇ ಈ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿದ್ದಾರೆ ಎಂಬುದು ದೂರುದಾರರಾದ ಶಾಲಾ ಶಿಕ್ಷಕರ ಅಳಲು. ಈ ಕುರಿತು Hindustan Times ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಅವರು, " ಅದು ಲವ್ ಜಿಹಾದ್ ಪ್ರಕರಣ ಆಗಿರಲೇ ಇಲ್ಲ. ಅದೊಂದು ದೈನಂದಿನ ಅಪರಾಧ ಪ್ರಕರಣವಾಗಿದ್ದು, ಆ ಕೃತ್ಯವನ್ನು ಎಸಗಿದವರೀಗ ಜೈಲು ಸರಳುಗಳ ಹಿಂದೆ ಬಂಧಿಯಾಗಿದ್ದಾರೆ. ಈ ಕುರಿತು ನ್ಯಾಯಾಂಗ ತೀರ್ಮಾನ ಕೈಗೊಳ್ಳಲಿದೆ. ಆದರೆ, ಘಟನೆಯ ಬೆನ್ನಿಗೇ ಈ ಪ್ರಕರಣಕ್ಕೆ ಕೋಮು ಬಣ್ಣ ನೀಡುವ ಪ್ರಯತ್ನಗಳು ನಡೆದವು. ನಮ್ಮ ಪರವಾಗಿ ಬಲಪಂಥೀಯ ಗುಂಪಿನವರು ತಾವೇ ಸ್ವತಃ ಪೊಲೀಸ್ ದೂರನ್ನು ಸಿದ್ಧಪಡಿಸಿದ್ದು, ಆ ದೂರನ್ನು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.

ಮೇ 26ರಂದು ನಡೆದಿದ್ದ ಅಪಹರಣ ಪ್ರಕರಣದ ಸಂತ್ರಸ್ತ ಯುವತಿಯ ಗುರುತನ್ನು ಬಹಿರಂಗಪಡಿಸದಿರಲು ಆಕೆಯ ಭಾವನಾದ ಶಾಲಾ ಶಿಕ್ಷಕರ ಗುರುತನ್ನು ಮುಚ್ಚಿಡಲಾಗಿದೆ ಎಂದು ವರದಿಯಾಗಿದೆ. ಈ ಪ್ರಕರಣವನ್ನು ಲವ್ ಜಿಹಾದ್ ಪ್ರಯತ್ನ ಎಂದು ಬಲಪಂಥೀಯ ಹಿಂದೂ ಸಂಘಟನೆಗಳು ಆರೋಪಿಸಿದ್ದವು.

ನಂತರ, ಇಂತಹ ಗುಂಪುಗಳು ನಡೆಸಿದ ಪ್ರತಿಭಟನೆಯಿಂದ ಉತ್ತರ ಕಾಶಿ ಪ್ರಕ್ಷುಬ್ಧಗೊಂಡು, ಈ ಗುಂಪುಗಳ ಬೆದರಿಕೆಯ ಕಾರಣಕ್ಕೆ 40-45 ಮುಸ್ಲಿಂ ವರ್ತಕರು ಹಾಗೂ ಸ್ಥಳೀಯ ನಿವಾಸಿಗಳು ಪಟ್ಟಣ ತೊರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X