Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮುಕಾಶ್ಮೀರ ಚುನಾವಣೆ | ತ್ರಿಶಂಕು...

ಜಮ್ಮುಕಾಶ್ಮೀರ ಚುನಾವಣೆ | ತ್ರಿಶಂಕು ವಿಧಾನಸಭೆಯ ಸಾಧ್ಯತೆ ನಡುವೆ ಎನ್ಸಿ-ಕಾಂಗ್ರೆಸ್ ಮೈತ್ರಿಕೂಟದ ಸರಕಾರಕ್ಕೆ ಬೆಂಬಲದ ಸುಳಿವು ನೀಡಿದ ಪಿಡಿಪಿ

ವಾರ್ತಾಭಾರತಿವಾರ್ತಾಭಾರತಿ6 Oct 2024 9:16 PM IST
share

ಹೊಸದಿಲ್ಲಿ : ಜಮ್ಮುಕಾಶ್ಮೀರದಲ್ಲಿ ತ್ರಿಶಂಕು ವಿಧಾನಸಭೆ ರೂಪುಗೊಳ್ಳುವ ಬಗ್ಗೆ ಚುನಾವಣೋತ್ತರ ಸಮೀಕ್ಷೆಗಳ ಭವಿಷ್ಯದ ನಡುವೆ ಪಿಡಿಪಿಯು ಸರಕಾರ ರಚನೆಗೆ ತಾನು ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟವನ್ನು ಬೆಂಬಲಿಸಬಹುದು ಎಂದು ಸುಳಿವು ನೀಡಿದೆ.

ಜಮ್ಮುಕಾಶ್ಮೀರ ವಿಧಾನಸಭೆಯು 90 ಸದಸ್ಯಬಲವನ್ನು ಹೊಂದಿದ್ದು ಸರಕಾರ ರಚನೆಗೆ 46 ಶಾಸಕರ ಅಗತ್ಯವಿದೆ. ಈವರೆಗಿನ ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್-ಎನ್ಸಿ ಮೈತ್ರಿಕೂಟ 35ರಿಂದ 40,ಬಿಜೆಪಿ 27ರಿಂದ 32 ಮತ್ತು ಪಿಡಿಪಿ 6ರಿಂದ 12 ಸ್ಥಾನಗಳನ್ನು ಗಳಿಸಬಹುದು ಎಂದು ಅಂದಾಜಿಸಿವೆ.

ಕೇಂದ್ರ ಗೃಹಸಚಿವಾಲಯದ ಸಲಹೆಯ ಮೇರೆಗೆ ಉಪ ರಾಜ್ಯಪಾಲರು ವಿಧಾನಸಭೆಗೆ ಐವರು ಶಾಸಕರನ್ನು ನಾಮ ನಿರ್ದೇಶನ ಮಾಡಲು ಅವಕಾಶವಿದ್ದು, ಒಟ್ಟು ಶಾಸಕರ ಸಂಖ್ಯೆ 95ಕ್ಕೆ ಹೆಚ್ಚುತ್ತದೆ. ನಾಮ ನಿರ್ದೇಶಿತ ಶಾಸಕರಿಗೆ ಮತದಾನದ ಹಕ್ಕುಗಳಿರುವುದರಿಂದ ಬಹುಮತಕ್ಕೆ 48 ಶಾಸಕರ ಬೆಂಬಲ ಅಗತ್ಯವಾಗುತ್ತದೆ.

ತ್ರಿಶಂಕು ವಿಧಾನಸಭೆ ರೂಪುಗೊಳ್ಳುವ ಸಾಧ್ಯತೆಯ ಹಿನ್ನೆಲೆಯಲ್ಲಿ ಪಿಡಿಪಿಯ ಹಿರಿಯ ನಾಯಕ ಹಾಗೂ ಲಾಲ್ಚೌಕ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಝುಹೈಬ್ ಯೂಸುಫ್ ಮಿರ್ ಅವರು, ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡಲು ತನ್ನ ಪಕ್ಷವು ಕಾಂಗ್ರೆಸ್-ಎನ್ಸಿ ಮೈತ್ರಿಕೂಟವನ್ನು ಸೇರಬಹುದು ಎಂದು ಹೇಳಿದರು.

ಕಾಶ್ಮೀರದ ಅನನ್ಯತೆಯನ್ನು ರಕ್ಷಿಸಲು ಯಾವುದೇ ಕ್ರಮಕ್ಕೆ ತನ್ನ ಪಕ್ಷವು ಸಿದ್ಧವಾಗಿದೆ ಎಂದು ಮಿರ್ ಸುದ್ದಿಸಂಸ್ಥೆಗೆ ತಿಳಿಸಿದರು. ಆದರೆ ಚುನಾವಣೋತ್ತರ ಸಮೀಕ್ಷೆಗಳ ಮುನ್ನೋಟವನ್ನು ‘ಟೈಮ್ ಪಾಸ್’ ಎಂದು ಬಣ್ಣಿಸಿದರು.

‘ಜಮ್ಮುಕಾಶ್ಮೀರದಲ್ಲಿ ರಚನೆಯಾಗಲಿರುವ ಜಾತ್ಯತೀತ ಸರಕಾರದ ಅನಿವಾರ್ಯ ಮತ್ತು ಪ್ರಮುಖ ಭಾಗವಾಗುವ ವಿಶ್ವಾಸವನ್ನು ಪಿಡಿಪಿ ಹೊಂದಿದೆ. ಕಾಶ್ಮೀರದ ಅನನ್ಯತೆಯನ್ನು ರಕ್ಷಿಸಲು ಯಾವುದೇ ಕ್ರಮಕ್ಕೂ ನಾವು ಸಿದ್ಧರಿದ್ದೇವೆ ಎಂದು ಹಿಂದೆಯೂ ಹೇಳಿದ್ದೆವು. ಬಿಜೆಪಿ ವಿರುದ್ಧ ಸರಕಾರ ರಚನೆ ಮುಖ್ಯವಾಗಿದೆ ’ಎಂದ ಅವರು, ಪಿಡಿಪಿ ಜಾತ್ಯತೀತ ಸರಕಾರ ರಚನೆಯನ್ನು ಬೆಂಬಲಿಸಿದರೂ, ಈ ಕೇಂದ್ರಾಡಳಿತ ಪ್ರದೇಶದಲ್ಲಿ ಸರಕಾರವು ಹೆಚ್ಚು ದಿನ ಉಳಿಯುತ್ತದೆ ನಂಬಿಕೆ ಅದಕ್ಕಿಲ್ಲ. ಮುಖ್ಯಮಂತ್ರಿಗಳು ಭಿಕ್ಷಾ ಪಾತ್ರೆಯೊಂದಿಗೆ ಉಪ ರಾಜ್ಯಪಾಲರ ಬಳಿ ಹೋಗುವ ಸ್ಥಿತಿಯಲ್ಲಿರುವ ದಿಲ್ಲಿ ಶೈಲಿಯಲ್ಲಿಯೇ ಇಲ್ಲಿಯೂ ಸರಕಾರವನ್ನು ನಡೆಸಲು ಅವರು (ಬಿಜೆಪಿ ) ಪ್ರಯತ್ನಿಸುತ್ತಾರೆ. ದಿಲ್ಲಿ ಸರಕಾರಕ್ಕೆ ಆಗಿದ್ದೇ ಇಲ್ಲಿಯೂ ಆಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X