Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಕರ್ತೆ ರಾಣಾ ಅಯ್ಯೂಬ್‌ ಅವರಿಗೆ...

ಪತ್ರಕರ್ತೆ ರಾಣಾ ಅಯ್ಯೂಬ್‌ ಅವರಿಗೆ ಜೀವಬೆದರಿಕೆ ಕರೆ : ಭದ್ರತೆ ನೀಡುವಂತೆ ಸರಕಾರಕ್ಕೆ ಸಿಪಿಜೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Nov 2025 11:21 PM IST
share
ಪತ್ರಕರ್ತೆ ರಾಣಾ ಅಯ್ಯೂಬ್‌ ಅವರಿಗೆ ಜೀವಬೆದರಿಕೆ ಕರೆ : ಭದ್ರತೆ ನೀಡುವಂತೆ ಸರಕಾರಕ್ಕೆ ಸಿಪಿಜೆ ಆಗ್ರಹ

ಹೊಸದಿಲ್ಲಿ,ನ.4: ಅಜ್ಞಾತ ಅಂತಾರಾಷ್ಟ್ರೀಯ ದೂರವಾಣಿ ಸಂಖ್ಯೆಯೊಂದರಿಂದ ತಮಗೆ ಜೀವಬೆದರಿಕೆ ಕರೆಗಳು ಬಂದಿರುವುದಾಗಿ ಭಾರತೀಯ ಪತ್ರಕರ್ತೆ ಹಾಗೂ ವಾಶಿಂಗ್ಟನ್ ಪೋಸ್ಟ್‌ನ ಅಂಕಣಗಾರ್ತಿ ರಾಣಾ ಅಯ್ಯೂಬ್ ಹಾಗೂ ಅವರ ಕುಟುಂಬಿಕರ ಸುರಕ್ಷತೆಯನ್ನು ಖಾತರಿಪಡಿಸುವಂತೆ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಭಾರತೀಯ ಅಧಿಕಾರಿಗಳನ್ನು ಆಗ್ರಹಿಸಿದೆ.

ದೂರವಾಣಿ ಕರೆ ಮಾಡಿದ ವ್ಯಕ್ತಿಯು, ರಾಣಾ ಅಯ್ಯೂಬ್ ಅವರ ಮನೆ ವಿಳಾಸವನ್ನು ಉಲ್ಲೇಖಿಸಿದ್ದಾನೆ ಹಾಗೂ ಆಕೆಗೆ ಮತ್ತು ಆಕೆಯ ತಂದೆಗೆ ಜೀವಬೆದರಿಕೆಯೊಡ್ಡಿದ್ದಾನೆಂದು ಆರೋಪಿಸಿದೆ.

ಈ ಬಗ್ಗೆ ಸಿಪಿಜೆಯ ಭಾರತೀಯ ಪ್ರತಿನಿಧಿ ಕುನಾಲ್ ಮಜುಂದಾರ್ ಅವರು ಹೇಳಿಕೆಯೊಂದನ್ನು ನೀಡಿ, ‘‘ಅಂತಾರಾಷ್ಟ್ರೀಯ ಅಜ್ಞಾತ ದೂರವಾಣಿ ಸಂಖ್ಯೆಯಿಂದ ರಾಣಾ ಅಯ್ಯೂಬ್ ಹಾಗೂ ಅವರ ತಂದೆಗೆ ಜೀವಬೆದರಿಕೆಯೊಡ್ಡಿರುವುದು ಅತ್ಯಂತ ಕಳವಳಕಾರಿಯಾಗಿದೆ.

ಆ ವ್ಯಕ್ತಿಯನ್ನು ಪತ್ತೆಹಚ್ಚಲು ಅಧಿಕಾರಿಗಳು ಕ್ಷಿಪ್ರವಾಗಿ ಕಾರ್ಯಾಚರಿಸಬೇಕು ಹಾಗೂ ಭಾರತದಲ್ಲಿ ಎಲ್ಲಾ ಪತ್ರಕರ್ತರ ಸುರಕ್ಷತೆಯನ್ನು ಖಾತರಿಪಡಿಸಬೇಕು ’’ಎಂದು ಸಿಪಿಜೆಯ ಭಾರತ ಪ್ರತಿನಿಧಿ ಕುನಾಲ್ ಮಜುಂದಾರ್ ತಿಳಿಸಿದ್ದಾರೆ.

ನವೆಂಬರ್ 2ರಂದು ತನ್ನ ಮೊಬೈಲ್‌ಫೋನ್‌ಗೆ ಅಜ್ಞಾತ ವ್ಯಕ್ತಿಯೊಬ್ಬ ವಾಟ್ಸ್‌ಅಪ್ ಕರೆ ಹಾಗೂ ಮೆಸೇಜ್‌ಗಳನ್ನು ಮಾಡಿದ್ದನು. ತಾನು 1984ರ ಸಿಖ್ಖ್ ವಿರೋಧಿ ಗಲಭೆಗಳ ಬಗ್ಗೆ ಅಂಕಣವೊಂದನ್ನು ಬರೆಯಬೇಕೆಂದು ಆತ ಆಗ್ರಹಿಸಿದ್ದನು. ಇಲ್ಲದೆ ಹೋದಲ್ಲಿ ತನಗೆ ಹಾಗೂ ತನ್ನ ತಂದೆಯ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದನೆಂದು ರಾಣಾ ಅಯ್ಯೂಬ್ ನವೆಂಬರ್ 3ರಂದು ನವಿಮುಂಬೈನ ಕೋಪಾರ್ ಖೈರಾನೆ ಪೊಲೀಸ್ ಠಾಣೆಗೆ ನೀಡಿದ ದೂರಿಲ್ಲಿ ತಿಳಿಸಿದ್ದಾರೆ.

ಬೆದರಿಕೆ ಕರೆ ಮಾಡಿದ ವ್ಯಕ್ತಿಯ ವಾಟ್ಯಾಪ್ ಪ್ರೊಫೈಲ್‌ನಲ್ಲಿ ಪ್ರಸಕ್ತ ಗುಜರಾತ್‌ನಲ್ಲಿ ಬಂಧನದಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿಯ ಭಾವಚಿತ್ರವಿದ್ದುದಾಗಿ ಅಯ್ಯೂಬ್ ತಿಳಿಸಿದ್ದಾರೆ.

ಕರೆ ಮಾಡಿದ ವ್ಯಕ್ತಿಗೆ ತನ್ನ ನಿವಾಸದ ವಿಳಾಸ ತಿಳಿದಿರುವುದಾಗಿಯೂ ಅಯ್ಯೂಬ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಜೀವಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಅಯ್ಯೂಬ್ ಅವರ ನಿವಾಸದಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X