Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಕ್ಸ್’ನಲ್ಲಿ ‘ಕರ್ನಾಟಕದ ಸುಪ್ರೀಂ...

ಎಕ್ಸ್’ನಲ್ಲಿ ‘ಕರ್ನಾಟಕದ ಸುಪ್ರೀಂ ಕೋರ್ಟ್’ಖಾತೆ!

ಸಾಮಾಜಿಕ ಮಾಧ್ಯಮದ ವಿರುದ್ಧದ ಪ್ರಕರಣದಲ್ಲಿ ಬೆಟ್ಟು ಮಾಡಿದ ಸಾಲಿಸಿಟರ್ ಜನರಲ್

ವಾರ್ತಾಭಾರತಿವಾರ್ತಾಭಾರತಿ18 July 2025 8:52 PM IST
share
ಎಕ್ಸ್’ನಲ್ಲಿ ‘ಕರ್ನಾಟಕದ ಸುಪ್ರೀಂ ಕೋರ್ಟ್’ಖಾತೆ!

ಬೆಂಗಳೂರು, ಜು. 18: ಕರ್ನಾಟಕ ಹೈಕೋರ್ಟ್ನಲ್ಲಿ ಶುಕ್ರವಾರ ಕೇಂದ್ರ ಸರಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅನಿರ್ಬಂಧಿತ ಆನ್ಲೈನ್ ಚಟುವಟಿಕೆಗಳ ಅಪಾಯಗಳ ಬಗ್ಗೆ ಎಚ್ಚರಿಸಿದರು. ‘‘ಕರ್ನಾಟಕದ ಸುಪ್ರೀಂ ಕೋರ್ಟ್’’ ಎಂಬ ಹೆಸರಿನಲ್ಲಿ ನಕಲಿ ಖಾತೆಯೊಂದನ್ನು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಸೃಷ್ಟಿಸಲಾಗಿದೆ ಹಾಗೂ ಇದು ಪರಿಶೀಲನೆಗೂ ಒಳಪಟ್ಟಿದೆ ಎಂದು ಅವರು ಹೇಳಿದರು.

ಕೇಂದ್ರ ಸರಕಾರದ ವಿರುದ್ಧ ಸಾಮಾಜಿಕ ಮಾಧ್ಯಮ ದೈತ್ಯ ‘ಎಕ್ಸ್ ಕಾರ್ಪ್’ ದಾಖಲಿಸಿದ ಪ್ರಕರಣದಲ್ಲಿ ಹಾಜರಾದ ಅವರು, ‘‘ಕರ್ನಾಟಕ ಸುಪ್ರೀಂ ಕೋರ್ಟ್’’ ಎಂಬ ಹೆಸರಿನ ನಕಲಿ ಖಾತೆಯನ್ನು ನ್ಯಾಯಾಲಯದ ಗಮನಕ್ಕೆ ತಂದರು. ಸಾರ್ವಜನಿಕರನ್ನು ತಪ್ಪುದಾರಿಗೆಳೆಯಲು ಡಿಜಿಟಲ್ ವೇದಿಕೆಗಳನ್ನು ಹೇಗೆ ಎಷ್ಟು ಸುಲಭವಾಗಿ ದುರುಪಯೋಗಪಡಿಸಬಹುದು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

‘‘ಈ ಖಾತೆಯನ್ನು ನಾವು ಸೃಷ್ಟಿಸಿದ್ದೇವೆ. ಮತ್ತು ಎಕ್ಸ್ ಕಂಪೆನಿಯು ಅದರ ಪರಿಶೀಲನೆಯನ್ನೂ ಮಾಡಿದೆ. ಈಗ ನಾನು ಅದರಲ್ಲಿ ಏನು ಬೇಕಾದರೂ ಬರೆಯಬಹುದು. ಇದನ್ನು ಕರ್ನಾಟಕದ ಸುಪ್ರೀಂ ಕೋರ್ಟ್ ಹೇಳಿದೆ ಎಂಬುದಾಗಿ ಲಕ್ಷಾಂತರ ಜನರು ನಂಬುತ್ತಾರೆ’’ ಎಂದು ಮೆಹ್ತಾ ವಾದಿಸಿದರು.

ಮಾಹಿತಿ ತಂತ್ರಜ್ಞಾನ ಕಾಯಿದೆಯ 79ನೇ ಪರಿಚ್ಛೇದದಡಿ ಸರಕಾರಿ ಅಧಿಕಾರಿಗಳು ಹೊರಡಿಸಿರುವ ‘ಟೇಕ್ಡೌನ್’ (ಖಾತೆಗಳನ್ನು ಅಳಿಸಿಹಾಕುವಂತೆ ಸೂಚಿಸುವ) ಆದೇಶಗಳನ್ನು ಪ್ರಶ್ನಿಸಿ ಎಕ್ಸ್ ಕಾರ್ಪ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ವೇಳೆ ಈ ನಾಟಕೀಯ ಬೆಳವಣಿಗೆ ಸಂಭವಿಸಿತು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಎಕ್ಸ್ ಕಾರ್ಪ್ ಪರ ವಕೀಲ ಕೆ.ಜಿ. ರಾಘವನ್, ಇಂಥ ಪುರಾವೆಗಳನ್ನು ಔಪಚಾರಿಕವಾಗಿ ನ್ಯಾಯಾಲಯದ ದಾಖಲೆಗೆ ಸಲ್ಲಿಸದೆ ನೇರವಾಗಿ ನ್ಯಾಯಾಧೀಶರಿಗೆ ಸಲ್ಲಿಸುವಂತಿಲ್ಲ ಎಂದು ಹೇಳಿದರು. ‘‘ಪರಿಶೀಲನೆ ಅಥವಾ ಹಿನ್ನೆಲೆ ಇಲ್ಲದೆ ನೀವು ಇದನ್ನು ನೇರವಾಗಿ ನ್ಯಾಯಾಧೀಶರಿಗೆ ಸಲ್ಲಿಸುವಂತಿಲ್ಲ’’ ಎಂದು ಅವರು ಹೇಳಿದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಎಮ್. ನಾಗಪ್ರಸನ್ನ, ರಾಘವನ್ ರ ಆತಂಕವನ್ನು ಒಪ್ಪಿಕೊಂಡರಾದರೂ, ಸಾಲಿಸಿಟರ್ ಜನರಲ್ ಈ ವಿಷಯವನ್ನು ಉದಾಹರಣೆಯಾಗಿಯಷ್ಟೇ ನೀಡಿದರು ಎಂದು ಹೇಳಿದರು. ‘‘ಇಂಥ ನಕಲಿ ಖಾತೆಗಳನ್ನು ಸೃಷ್ಟಿಸುವುದು ತೀರಾ ಸುಲಭ ಎನ್ನುವುದಷ್ಟೇ ಅವರ ವಾದವಾಗಿತ್ತು’’ ಎಂದು ನ್ಯಾಯಾಧೀಶರು ಹೇಳಿದರು.

ಬಳಿಕ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದ ವಕೀಲ ರಾಘವನ್, ಈ ನಕಲಿ ಖಾತೆಯನ್ನು ಎಕ್ಸ್ ತೆಗೆದುಹಾಕಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X