Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ಒಪ್ಪಿಗೆಗೆ ವಯೋಮಿತಿ ಇಳಿಕೆ...

ಲೈಂಗಿಕ ಒಪ್ಪಿಗೆಗೆ ವಯೋಮಿತಿ ಇಳಿಕೆ ಅಸಾಧ್ಯ: ಸುಪ್ರೀಂಕೋರ್ಟ್ ಗೆ ಕೇಂದ್ರ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ25 July 2025 7:30 AM IST
share
ಲೈಂಗಿಕ ಒಪ್ಪಿಗೆಗೆ ವಯೋಮಿತಿ ಇಳಿಕೆ ಅಸಾಧ್ಯ: ಸುಪ್ರೀಂಕೋರ್ಟ್ ಗೆ ಕೇಂದ್ರ ಸ್ಪಷ್ಟನೆ

ಹೊಸದಿಲ್ಲಿ: ಅಪ್ರಾಪ್ತ ವಯಸ್ಸಿನವರನ್ನು ಲೈಂಗಿಕ ಕಿರುಕುಳದಿಂದ ರಕ್ಷಿಸುವ ಸಲುವಾಗಿ ಲೈಂಗಿಕ ಸಂಪರ್ಕಕ್ಕೆ ಒಪ್ಪಿಗೆ ನೀಡುವ ಕನಿಷ್ಠ ವಯಸ್ಸನ್ನು 18 ಎಂದು ನಿಗದಿಪಡಿಸಲಾಗಿದ್ದು, ವಯೋಮಿತಿಯನ್ನು ಇಳಿಸುವುದು ಅಸಾಧ್ಯ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಆದರೆ ಪ್ರೌಢಾವಸ್ಥೆಯ ಪ್ರಣಯ ಮತ್ತು ದೈಹಿಕ ಸಂಪರ್ಕ ಪ್ರಕರಣಗಳಲ್ಲಿ ಆಯಾ ಪ್ರಕರಣಕ್ಕೆ ಅನ್ಯವಾಗುವಂತೆ ಸುಪ್ರೀಂಕೋರ್ಟ್ ತನ್ನ ವಿವೇಚನೆಯನ್ನು ಬಳಸಬಹುದಾಗದೆ ಎಂದು ಸ್ಪಷ್ಟಪಡಿಸಿದೆ.

"ಶಾಸನಬದ್ಧವಾಗಿ ಲೈಂಗಿಕತೆಗೆ ಒಪ್ಪಿಗೆ ನೀಡುವ ವಯಸ್ಸನ್ನು 18 ಎಂದು ನಿಗದಿಪಡಿಸಲಾಗಿದ್ದು, ಇದನ್ನು ಸಮಾನವಾಗಿ ಮತ್ತು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುತ್ತದೆ. ಸುಧಾರಣೆ ಅಥವಾ ಪ್ರೌಢರಿಗೆ ಸ್ವಾಯತ್ತತೆ ನೀಡುವ ಹೆಸರಿನಲ್ಲಿ ಈ ಮಾನದಂಡದಿಂದ ವಿಮುಖವಾದಲ್ಲಿ, ಮಕ್ಕಳ ರಕ್ಷಣಾ ಕಾನೂನುಗಳ ಪ್ರಗತಿಯಲ್ಲಿ ದಶಕಗಳಷ್ಟು ಹಿನ್ನಡೆಯಾಗುತ್ತದೆ ಮತ್ತು ಪೋಕ್ಸೋ ಕಾಯ್ದೆ ಮತ್ತು ಬಿಎನ್ಎಸ್ ನ ಮೂಲ ಉದ್ದೇಶವನ್ನೇ ಕಡೆಗಣಿಸಿದಂತಾಗುತ್ತದೆ" ಎಂದು ಅಭಿಪ್ರಾಯಪಟ್ಟಿದೆ.

ಲೈಂಗಿಕ ಚಟುವಟಿಕೆಗಳಿಗೆ ಮಾಹಿತಿಯುಕ್ತ ಮತ್ತು ಅಧಿಕೃತ ಒಪ್ಪಿಗೆ ನೀಡಲು 18ಕ್ಕಿಂತ ಕೆಳ ವಯಸ್ಸಿನವರು ಅಸಮರ್ಥರು ಎನ್ನುವ ಕಾನೂನಾತ್ಮಕ ತರ್ಕವನ್ನು ಸಂವಿಧಾನಾತ್ಮಕ ಚೌಕಟ್ಟು ಬೆಂಬಲಿಸಿದೆ. ವಯೋ ಆಧರಿತ ರಕ್ಷಣೆಯನ್ನು ಸಡಿಲಗೊಳಿಸುವುದು ಪರಸ್ಪರ ಸಮ್ಮತಿಯ ಹೆಸರಿನಲ್ಲಿ ಅತ್ಯಾಚಾರದಂಥ ಪ್ರಕರಣಗಳಿಗೆ ದಾರಿಯಾಗುತ್ತದೆ ಎಂದು ಹೇಳಿದೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಈ ಸಂಬಂಧ ಸಮಗ್ರ ಲಿಖಿತ ಹೇಳಿಕೆಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದಾರೆ. ಭಾರತೀಯ ದಂಡಸಂಹಿತೆ-1860ರಲ್ಲಿ ಇದ್ದ 10 ವರ್ಷದ ಮಿತಿಯನ್ನು 1891ರಲ್ಲಿ 12ಕ್ಕೆ, 1925ರಲ್ಲಿ 14 ವರ್ಷಕ್ಕೆ, 1940ರ ಐಪಿಸಿ ತಿದ್ದುಪಡಿಯಲ್ಲಿ 16ಕ್ಕೆ ಮತ್ತು 1978ರ ಬಾಲ್ಯ ವಿವಾಹ ತಡೆ ಕಾಯ್ದೆಯಲ್ಲಿ 18 ವರ್ಷಕ್ಕೆ ಏರಿಸಲಾಗಿತ್ತು ಎನ್ನುವುದನ್ನು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X