Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ | ರಾಷ್ಟ್ರೀಯ ಹೆದ್ದಾರಿ 48ರ...

ಮಹಾರಾಷ್ಟ್ರ | ರಾಷ್ಟ್ರೀಯ ಹೆದ್ದಾರಿ 48ರ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡ ಆ್ಯಂಬ್ಯುಲೆನ್ಸ್; ಮಹಿಳೆ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ10 Aug 2025 9:16 PM IST
share
ಮಹಾರಾಷ್ಟ್ರ | ರಾಷ್ಟ್ರೀಯ ಹೆದ್ದಾರಿ 48ರ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡ ಆ್ಯಂಬ್ಯುಲೆನ್ಸ್; ಮಹಿಳೆ ಮೃತ್ಯು

ಮುಂಬೈ: ಮುಂಬೈನ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ಭಾರಿ ಪ್ರಮಾಣದ ಸಂಚಾರ ದಟ್ಟಣೆಯುಂಟಾಗಿದ್ದರಿಂದ, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಮುಂಬೈನ ಆಸ್ಪತ್ರೆಯೊಂದಕ್ಕೆ ಸಾಗಿಸುವಾಗ ಆಕೆ ಮಾರ್ಗಮಧ್ಯದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಛಾಯಾ ಪೂರವ್ ಎಂದು ಗುರುತಿಸಲಾಗಿದ್ದು, ಆಕೆಯ ಸಾವಿನಿಂದ ಪಾಲ್ಘರ್‌ ನಲ್ಲಿನ ಆರೋಗ್ಯ ಸೌಲಭ್ಯಗಳ ಕೊರತೆ ಹಾಗೂ ಈ ಜಿಲ್ಲೆಯನ್ನು ಗರಿಷ್ಠ ಪ್ರಮಾಣದ ನಗರಗಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಭಾರಿ ಸಂಚಾರ ದಟ್ಟಣೆಯ ಭಯಾನಕತೆಗಳೆರಡೂ ಏಕಕಾಲಕ್ಕೆ ಬಯಲಾಗಿದೆ.

ಜುಲೈ 31ರಂದು ಪಾಲ್ಘರ್ ಜಿಲ್ಲೆಯ ಮಧುಕರ್ ನಗರದಲ್ಲಿರುವ ತಮ್ಮ ನಿವಾಸದ ಬಳಿ ಮರದ ಕೊಂಬೆಯೊಂದು ಉರುಳಿ ಬಿದ್ದಿದ್ದರಿಂದ ಛಾಯಾ ಪೂರವ್ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಯಲ್ಲಿ ಆಕೆಯ ಪಕ್ಕೆಲುಬು, ತೋಳುಗಳು ಹಾಗೂ ತಲೆಗೆ ಗಾಯಗಳಾಗಿದ್ದವು.

ಆದರೆ, ಪಾಲ್ಘರ್‌ನಲ್ಲಿ ಅಪಘಾತದ ಚಿಕಿತ್ಸಾ ಕೇಂದ್ರವಿಲ್ಲದೆ ಇರುವುದರಿಂದ, ಸ್ಥಳೀಯ ಆಸ್ಪತ್ರೆಯೊಂದು ಆಕೆಯನ್ನು ಮುಂಬೈನಲ್ಲಿನ ಹಿಂದುಜಾ ಆಸ್ಪತ್ರೆಗೆ ಶಿಫಾರಸು ಮಾಡಿತ್ತು. ಪಾಲ್ಘರ್ ಜಿಲ್ಲೆಯಿಂದ ಮುಂಬೈಗೆ 100 ಕಿಮೀ ದೂರವಿದ್ದು, ಪ್ರಯಾಣದ ಅವಧಿ ಸಾಮಾನ್ಯವಾಗಿ ಸುಮಾರು ಎರಡೂವರೆ ಗಂಟೆ ತಗಲುತ್ತದೆ. ಅದರಂತೆ, ಛಾಯಾ ಪೂರವ್‌ಗೆ ಅರವಳಿಕೆ ಚುಚ್ಚುಮದ್ದು ನೀಡಿದ ನಂತರ, ಮಧ್ಯಾಹ್ನ ಸುಮಾರು ಮೂರು ಗಂಟೆಗೆ ಆಕೆಯನ್ನು ಆ್ಯಂಬುಲೆನ್ಸ್‌ ನಲ್ಲಿ ಮುಂಬೈಗೆ ರವಾನಿಸಲಾಗಿತ್ತು. ಆ ಆ್ಯಂಬುಲೆನ್ಸ್‌ನಲ್ಲಿ ಛಾಯಾ ಪೂರವ್ ಅವರ ಪತಿ ಆಕೆಯ ಪಕ್ಕದಲ್ಲೇ ಕುಳಿತಿದ್ದರು. ಆದರೆ, ರಾಷ್ಟ್ರೀಯ ಹೆದ್ದಾರಿ 48ರ ಭಾರಿ ಸಂಚಾರ ದಟ್ಟಣೆಯಲ್ಲಿ ಆ್ಯಂಬುಲೆನ್ಸ್ ಸಿಲುಕಿಕೊಂಡಿತು ಎನ್ನಲಾಗಿದೆ.

ಸಂಜೆ ಸುಮಾರು ಆರು ಗಂಟೆಯ ವೇಳೆಗೆ ಆಕೆಯನ್ನು ಹೊತ್ತೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕೇವಲ ಅರ್ಧ ದಾರಿಯನ್ನು ಮಾತ್ರ ಕ್ರಮಿಸಿತ್ತು. ಇದರಿಂದಾಗಿ ಅರವಳಿಕೆ ಚುಚ್ಚು ಮದ್ದಿನ ಪ್ರಭಾವ ಕ್ಷೀಣಿಸತೊಡಗಿತ್ತು. ಇದರಿಂದಾಗಿ ಛಾಯಾ ಪೂರವ್‌ ಗೆ ನೋವು ಹೆಚ್ಚಾಗತೊಡಗಿತು. ಆಕೆಯ ಆರೋಗ್ಯ ಸ್ಥಿತಿ ವಿಷಮಿಸತೊಡಗಿದ್ದರಿಂದ, ಹಿಂದುಜಾ ಆಸ್ಪತ್ರೆಗಿಂತ ಸುಮಾರು 30 ಕಿಮೀ ದೂರವಿದ್ದ ಮೀರಾ ರಸ್ತೆಯಲ್ಲಿನ ಆರ್ಬಿಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಸಂಜೆ ಏಳು ಗಂಟೆಗೆ ಆಕೆಗೆ ಚಿಕಿತ್ಸೆ ನೀಡಲಾಯಿತಾದರೂ, ಅದು ತೀರಾ ತಡವಾಗಿತ್ತು. ಛಾಯಾ ಪೂರವ್‌ ರನ್ನು ಪರೀಕ್ಷಿಸಿದ ವೈದ್ಯರು, ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಒಂದು ವೇಳೆ ಇನ್ನು ಮೂವತ್ತು ನಿಮಿಷಗಳಷ್ಟು ಮುಂಚಿತವಾಗಿ ಆಕೆಯನ್ನು ಆಸ್ಪತ್ರೆಗೆ ಕರೆ ತಂದಿದ್ದರೆ, ಆಕೆಯನ್ನು ರಕ್ಷಿಸಬಹುದಿತ್ತು ಎಂದು ಆಕೆಯ ಪತಿ ಕೌಶಿಕ್‌ಗೆ ವೈದ್ಯರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕೌಶಿಕ್, "ಆಕೆ ಸಹಿಸಲಸಾಧ್ಯವಾದ ನೋವಿನಿಂದ ನರಳುತ್ತಿದ್ದದ್ದನ್ನು ನಾನು ಕಂಡೆ" ಎಂದು ಅಳಲು ತೋಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X