Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ...

ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ನಟರು, ನಿರ್ದೇಶಕರು

ವಾರ್ತಾಭಾರತಿವಾರ್ತಾಭಾರತಿ22 Jan 2024 2:52 PM IST
share
ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆ ಹಂಚಿಕೊಂಡ ಮಲಯಾಳಂ ನಟರು, ನಿರ್ದೇಶಕರು

ಹೊಸದಿಲ್ಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವು ಸೋಮವಾರ ಉದ್ಘಾಟನೆಗೊಂಡಿದೆ. ಈ ಸಂದರ್ಭದಲ್ಲಿ ಮಲಯಾಳಂ ಚಿತ್ರರಂಗದ ಹಲವಾರು ಸೆಲೆಬ್ರಿಟಿಗಳು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಭಾರತೀಯ ಸಂವಿಧಾನದ ಪೀಠಿಕೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳ ಈ ನಡೆಯು ಭಾರತೀಯ ಜನತಾ ಪಾರ್ಟಿಯು ತನ್ನ ಅತ್ಯಂತ ಕಠಿಣ ಹಿಂದುತ್ವ ಭರವಸೆಗಳಲ್ಲೊಂದನ್ನು ಈಡೇರಿಸಿದೆ ಎಂದು ಭಾವಿಸಲಾಗಿರುವ ದಿನದಂದು ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಜಾತ್ಯತೀತ,ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ನೆನಪಿಸಿದೆ ಎಂದು thenewsminute.com ವರದಿ ಮಾಡಿದೆ.

ತಾರೆಯರಾದ ಪಾರ್ವತಿ ತಿರುವೋತು, ರೀಮಾ ಕಳ್ಳಿಂಗಲ್, ದಿವ್ಯಪ್ರಭಾ, ರಾಜೇಶ್ ಮಾಧವನ್ ಮತ್ತು ಕನಿ ಕುಸೃತಿ, ನಿರ್ದೇಶಕರಾದ ಜಿಯೋ ಬೇಬಿ, ಆಶಿಕ್ ಅಬು, ಕಮಾಲ್ ಕೆ.ಎಂ. ಮತ್ತು ಕುಂಜಿಲ ಮಸಿಲಮಣಿ, ಗಾಯಕ ಸೂರಜ್ ಸಂತೋಷ್ ಸೇರಿದಂತೆ ಮಲಯಾಳಂ ಚಿತ್ರರಂಗದ ಹಲವಾರು ಖ್ಯಾತನಾಮರು ಸಂವಿಧಾನ ಪೀಠಿಕೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

‘ನಾವು ಭಾರತದ ಜನರು,ಭಾರತವನ್ನು ಸಾರ್ವಭೌಮ, ಸಮಾಜವಾದಿ,ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು;ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯ;ಚಿಂತನೆ, ಅಭಿವ್ಯಕ್ತಿ, ನಂಬಿಕೆ,ಧರ್ಮ ಮತ್ತು ಆರಾಧನೆಯ ಸ್ವಾತಂತ್ರ್ಯ;ಸ್ಥಾನಮಾನ ಮತ್ತು ಅವಕಾಶದ ಸಮಾನತೆ ಹಾಗೂ ಅದನ್ನು ಎಲ್ಲರಲ್ಲಿ ಉತ್ತೇಜಿಸಲು;ವ್ಯಕ್ತಿಯ ಘನತೆ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಖಾತರಿ ಪಡಿಸುವ ಭ್ರಾತೃತ್ವವನ್ನು ಅದರ ಎಲ್ಲ ಪ್ರಜೆಗಳಿಗೆ ಖಚಿತಪಡಿಸಲು ದೃಢಸಂಕಲ್ಪವನ್ನು ಮಾಡಿದ್ದೇವೆ.

1949ರ ನವಂಬರ್ 26ನೇ ದಿನವಾದ ಇಂದು ನಮ್ಮ ಸಂವಿಧಾನ ಸಭೆಯಲ್ಲಿ ನಾವು ಈ ಸಂವಿಧಾನವನ್ನು ಅಳವಡಿಸಿಕೊಂಡು,ಜಾರಿಗೊಳಿಸಿ,ನಮಗಾಗಿ ಅರ್ಪಿಸಿಕೊಳ್ಳುತ್ತಿದ್ದೇವೆ ’ಎಂದು ಸಂವಿಧಾನದ ಪೀಠಿಕೆಯು ಹೇಳುತ್ತದೆ.

ಸೋಮವಾರ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಯಜಮಾನರಾಗಿ ಉಪಸ್ಥಿತರಿದ್ದರು. ಸಂತರು ಮತ್ತು ಗಣ್ಯರು ಸೇರಿದಂತೆ 7,000ಕ್ಕೂ ಅಧಿಕ ಜನರು ಈ ಕ್ಷಣಕ್ಕೆ ಸಾಕ್ಷಿಗಳಾಗಿದ್ದರು.

View this post on Instagram

A post shared by Parvathy Thiruvothu (@par_vathy)

View this post on Instagram

A post shared by Aashiq Abu (@aashiqabu)

View this post on Instagram

A post shared by Rima Kallingal (@rimakallingal)

View this post on Instagram

A post shared by Kani Kusruti (@kantari_kanmani)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X