Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮರ್ಕಝ್ ನಾಲೆಡ್ಜ್ ಸಿಟಿ : ಮಿಹ್ರಾಸ್...

ಮರ್ಕಝ್ ನಾಲೆಡ್ಜ್ ಸಿಟಿ : ಮಿಹ್ರಾಸ್ ಹಾಸ್ಪಿಟಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

►ಗುಡ್ಡಗಾಡು ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ಆಧುನಿಕ ಆರೋಗ್ಯ ಸೇವೆ ಒದಗಿಸಲು ಮಿಹ್ರಾಸ್ ಪ್ರಯತ್ನ

ವಾರ್ತಾಭಾರತಿವಾರ್ತಾಭಾರತಿ24 Sept 2024 1:03 PM IST
share
ಮರ್ಕಝ್ ನಾಲೆಡ್ಜ್ ಸಿಟಿ : ಮಿಹ್ರಾಸ್ ಹಾಸ್ಪಿಟಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

ಕೋಝಿಕೋಡ್: ಮರ್ಕಝ್ ನಾಲೆಜ್ ಸಿಟಿಯ 'ಮಿಹ್ರಾಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ'ಯ ಅಧಿಕೃತ ಉದ್ಘಾಟನೆಯನ್ನು ಸೆಪ್ಟೆಂಬರ್ 25 ಬುಧವಾರ ಸಿಎಂ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ ಎಂದು ಮರ್ಕಝ್ ನಾಲೆಜ್ ಸಿಟಿಯ ಸಿಇಒ ಡಾ. ಅಬ್ದುಲ್ ಸಲಾಂ ಮುಹಮ್ಮದ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಡ್ಡಗಾಡು ಪ್ರದೇಶದ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ಆಧುನಿಕ ಆರೋಗ್ಯ ಸೇವೆಗಳನ್ನು ಒದಗಿಸುವುದು ಮಿಹ್ರಾಸ್ ಆಸ್ಪತ್ರೆಯ ಗುರಿ ಎಂದು ಅವರು ಹೇಳಿದರು.

ಪೆಯಿನ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಷನ್, ಫಿಸಿಯೋಥೆರಪಿ ಅಂಡ್ ಸ್ಟ್ರೋಕ್ ರಿಹ್ಯಾಬಿಲಿಟೇಷನ್, ಕ್ಯೂ ಆರ್ ಎಸ್ ಪೆಲ್ವಿ ಸೆಂಟರ್, ಸ್ಪೀಚ್ ಥೆರಪಿ ಅಂಡ್ ರಿಹ್ಯಾಬಿಲಿಟೇಷನ್ ಇತ್ಯಾದಿ ವಿಭಾಗಗಳು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದಲ್ಲದೆ ದಿನದ 24 ಗಂಟೆಗಳೂ ಸೇವೆಯಲ್ಲಿರುವ ಕ್ಯಾಶ್ವಾಲಿಟಿ, ಫಾರ್ಮಸಿ, ಲ್ಯಾಬ್, ಎಕ್ಸ್-ರೇ ಮತ್ತು ಆಂಬ್ಯುಲೆನ್ಸ್ ಸೇವೆಗಳು ಇಲ್ಲಿ ಲಭ್ಯವಿವೆ ಎಂದು ತಿಳಿಸಿದರು.

ಜನರಲ್ ಮೆಡಿಸಿನ್, ಪೀಡಿಯಾಟ್ರಿಕ್ಸ್, ಜನರಲ್ ಸರ್ಜರಿ, ಗೈನಕಾಲಜಿ ಸೇರಿದಂತೆ ಹತ್ತರಷ್ಟು ವಿಶೇಷ ವಿಭಾಗಗಳ ಜೊತೆಗೆ ಡಯಾಲಿಸಿಸ್ ಸೆಂಟರ್, ಸ್ಪೀಚ್ ಥೆರಪಿ ಅಂಡ್ ಚೈಲ್ಡ್ ಡೆವಲಪ್ಮೆಂಟ್ ಸೆಂಟರ್, ಸಮೀಪದ ಗ್ರಾಮ ನಿವಾಸಿಗಳಾದ ಕ್ಯಾನ್ಸರ್-ಕಿಡ್ನಿ ರೋಗಿಗಳಿಗಾಗಿ ಪ್ಯಾಲಿಯೇಟಿವ್ ಕೇರ್, ಬಡ ರೋಗಿಗಳಿಗಾಗಿ ವಿಶೇಷ ಮೆಡಿ ಕಾರ್ಡ್ ಇತ್ಯಾದಿಗಳು ಮಿಹ್ರಾಸ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಇದಲ್ಲದೆ, ಮರ್ಕಝ್ ನಾಲೆಡ್ಜ್ ಸಿಟಿಯ ಸುತ್ತಲಿನ 40 ಗ್ರಾಮಗಳ ಮಹಿಳೆಯರು ಸೇರಿದಂತೆ ಯುವಕರಿಗೆ ಆರೋಗ್ಯ ತರಬೇತಿಯನ್ನು ಇದೀಗಾಗಲೇ ಪ್ರಾರಂಭಿಸಲಾಗಿದೆ. ಕೇರಳ ಸರ್ಕಾರದ ಕುಟುಂಬಶ್ರೀ ಯೋಜನೆಯ ಸಹಕಾರದೊಂದಿಗೆ 30 ಜನರ ಮೊದಲ ಬ್ಯಾಚ್ ಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಬೇಸಿಕ್ ಲೈಫ್ ಸಪೋರ್ಟ್, ಪ್ಯಾಲಿಯೇಟಿವ್ ಕೇರ್, ನರ್ಸಿಂಗ್ ಕೇರ್ ಸೇರಿದಂತೆ 30 ರಷ್ಟು ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಇವರ ಮೂಲಕ ಸೆರ್ವಿಕ್ಕಲ್ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಇತ್ಯಾದಿ ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಿ ಚಿಕಿತ್ಸೆ ನೀಡುವುದು ಇದರ ಗುರಿಯಾಗಿದೆ. ಇದರ ಮೂಲಕ ಬಡ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆಯ ಕ್ಷೇತ್ರದಲ್ಲಿ ಕ್ರಾಂತಿ ಸೃಷ್ಟಿಸಲು ಮಿಹ್ರಾಸ್ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು.

ಸಂಪೂರ್ಣ ಸಂಯೋಜಿತ ಆಪರೇಷನ್ ಥಿಯೇಟರ್ ಗಳು, ಡಯಾಲಿಸಿಸ್ ಯೂನಿಟ್, ಚೈಲ್ಡ್ ಲರ್ನಿಂಗ್ ಅಂಡ್ ಡೆವಲಪ್ಮೆಂಟ್ ಸೆಂಟರ್ (ಸಿಎಲ್ ಡಿಸಿ) ಇತ್ಯಾದಿ ಆಧುನಿಕ ಸೌಲಭ್ಯಗಳು ಮಿಹ್ರಾಸ್ ಆಸ್ಪತ್ರೆಯಲ್ಲಿ ಲಭ್ಯವಿವೆ. ಗುಣಮಟ್ಟದ ಆರೋಗ್ಯ ಸೇವೆಯನ್ನು ಕಡಿಮೆ ವೆಚ್ಚದಲ್ಲಿ ಎಲ್ಲರಿಗೂ ಒದಗಿಸುವ ಗುರಿಯೊಂದಿಗೆ ಮಿಹ್ರಾಸ್ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ. ಮಧ್ಯಾಹ್ನ 1.30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಲಿದ್ದು, ಸಾಮಾಜಿಕ-ರಾಜಕೀಯ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮರ್ಕಝ್ ನಾಲೆಡ್ಜ್ ಸಿಟಿಯ ಸಿ ಇ ಒ ಡಾ. ಅಬ್ದುಲ್ ಸಲಾಂ ಮುಹಮ್ಮದ್, ಮಿಹ್ರಾಸ್ ಆಸ್ಪತ್ರೆಯ ಚೇರ್ಮ್ಯಾನ್ ಡಾ. ಪಿ ವಿ ಮಜೀದ್, ನಿರ್ದೇಶಕರಾದ ಡಾ. ಸಾಜಿದ್, ಅಫ್ಸಲ್ ಕೋಳಿಕ್ಕಲ್ಲ್, ಮರ್ಕಝ್ ನಾಲೆಜ್ ಸಿಟಿ ಮೀಡಿಯಾ ಕೋಆರ್ಡಿನೇಟರ್ ಮನ್ಸೂರ್.ಎ. ಖಾದಿರ್ ಇವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X