Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಟ್ಸ್‌ಆ್ಯಪ್ ಗೋಪ್ಯತೆ ನೀತಿ:...

ವಾಟ್ಸ್‌ಆ್ಯಪ್ ಗೋಪ್ಯತೆ ನೀತಿ: ಸಿಸಿಐನಿಂದ 213.14 ಕೋಟಿ ರೂ.ದಂಡದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮೆಟಾ ಸಜ್ಜು

ವಾರ್ತಾಭಾರತಿವಾರ್ತಾಭಾರತಿ19 Nov 2024 4:40 PM IST
share
Photo of Whatsapp

ಹೊಸದಿಲ್ಲಿ: ಮೆಸೇಜಿಂಗ್ ಆ್ಯಪ್‌ಗಳ ಕ್ಷೇತ್ರದಲ್ಲಿ ತನ್ನ ಪ್ರಾಬಲ್ಯವನ್ನು ದುರುಪಯೋಗ ಮಾಡಿಕೊಂಡಿದ್ದಕ್ಕಾಗಿ ತನಗೆ 213.14 ಕೋಟಿ ರೂ.ದಂಡವನ್ನು ವಿಧಿಸುವ ಭಾರತೀಯ ಸ್ಪರ್ಧಾ ಆಯೋಗ(ಸಿಸಿಐ)ದ ನಿರ್ಧಾರದ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸುವುದಾಗಿ ವಾಟ್ಸ್‌ಆ್ಯಪ್‌ನ ಮಾತೃಸಂಸ್ಥೆ ಮೆಟಾ ಮಂಗಳವಾರ ತಿಳಿಸಿದೆ. ಸಿಸಿಐ ಆದೇಶವನ್ನು ತಾನು ಒಪ್ಪುವುದಿಲ್ಲ ಎಂದು ಅದು ಹೇಳಿದೆ.

ಸಿಸಿಐ ಸೋಮವಾರ ಹೊರಡಿಸಿರುವ ಆದೇಶವು 2021ರಲ್ಲಿ ವಾಟ್ಸ್‌ಆ್ಯಪ್‌ನ ಗೋಪ್ಯತೆ ನೀತಿಯ ಅಪ್‌ಡೇಟ್‌ಗೆ ಸಂಬಂಧಿಸಿದೆ. ಈ ಹಿಂದೆ ಫೇಸ್‌ಬುಕ್ ಎಂದು ಕರೆಯಲ್ಪಡುತ್ತಿದ್ದ ಮೆಟಾ 2014ರಲ್ಲಿ ವಾಟ್ಸ್‌ಆ್ಯಪ್‌ನ್ನು ಸ್ವಾಧೀನ ಪಡಿಸಿಕೊಂಡಿತ್ತು.

ಜನವರಿ,2021ರಲ್ಲಿ ತನ್ನ ಬಳಕೆದಾರರಿಗೆ ನೋಟಿಫಿಕೇಷನ್ ಕಳುಹಿಸಿದ್ದ ವಾಟ್ಸ್‌ಆ್ಯಪ್,ತಾನು ಹೊಸ ಗೋಪ್ಯತೆ ನೀತಿಯನ್ನು ರೂಪಿಸುತ್ತಿದ್ದೇನೆ ಮತ್ತು ಫೇಸ್‌ಬುಕ್ ಜೊತೆ ಕೆಲವು ಬಳಕೆದಾರ ದತ್ತಾಂಶಗಳನ್ನು ಹಂಚಿಕೊಳ್ಳುವ ಹಕ್ಕನ್ನು ಕಾಯ್ದಿರಿಸಿದ್ದೇನೆ ಎಂದು ತಿಳಿಸಿತ್ತು.

ತನ್ನ ನೂತನ ನೀತಿಗಳನ್ನು ಬಳಕೆದಾರರು ಒಪ್ಪಿಕೊಳ್ಳುವಂತಾಗಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ತಾನು ಪ್ರಯತ್ನಿಸುತ್ತಿದ್ದೇನೆ,ಆದರೆ ಅವರು ಒಪ್ಪದಿದ್ದರೆ ಅವರ ಖಾತೆಗಳನ್ನು ನಿಧಾನವಾಗಿ ಅಳಿಸಲಾಗುವುದು ಎಂದು ಮೇ 17,2021ರಂದು ವಾಟ್ಸ್‌ಆ್ಯಪ್ ತಿಳಿಸಿತ್ತು. ಆದರೆ ಮೇ 25ರಂದು ವಾಟ್ಸ್‌ಆ್ಯಪ್, ಹೊಸ ಗೋಪ್ಯತೆ ನೀತಿಯನ್ನು ಒಪ್ಪಿಕೊಳ್ಳದ ಬಳಕೆದಾರರು ತನ್ನ ವೇದಿಕೆಯನ್ನು ಬಳಸಲು ತಾನು ನಿರ್ಬಂಧವನ್ನು ಹೇರುವುದಿಲ್ಲ ಎಂದು ಸ್ಪಷ್ಟೀಕರಣವನ್ನು ನೀಡಿತ್ತು.

ವಾಟ್ಸ್‌ಆ್ಯಪ್ ತನ್ನ ಬಳಕೆದಾರರಿಗೆ ವಿಧಿಸಿದ್ದ ಷರತ್ತು ಅನ್ಯಾಯದ್ದಾಗಿತ್ತು ಎಂದು ಸೋಮವಾರ ತನ್ನ ಆದೇಶದಲ್ಲಿ ಎತ್ತಿಹಿಡಿದಿರುವ ಸಿಸಿಐ, ಇದು ಯಾವುದೇ ಪರ್ಯಾಯ ಆಯ್ಕೆಯಿಲ್ಲದಿದ್ದ ಬಳಕೆದಾರರು ವಿಸ್ತರಿತ ದತ್ತಾಂಶ ಸಂಗ್ರಹವನ್ನು ಒಪ್ಪಿಕೊಳ್ಳಲು ಮತ್ತು ಮೆಟಾದೊಳಗೆ ದತ್ತಾಂಶಗಳನ್ನು ಹಂಚಿಕೊಳ್ಳಲು ಬಳಕೆದಾರರನ್ನು ಒತ್ತಾಯಿಸಿತ್ತು ಎಂದು ಹೇಳಿದೆ.

ಐದು ವರ್ಷಗಳವರೆಗೆ ಜಾಹೀರಾತು ಉದ್ದೇಶಗಳಿಗಾಗಿ ಇತರ ಮೆಟಾ ಕಂಪನಿಗಳೊಂದಿಗೆ ದತ್ತಾಂಶ ಹಂಚಿಕೊಳ್ಳದಂತೆ ಸಿಸಿಐ ವಾಟ್ಸ್‌ಆ್ಯಪ್‌ಗೆ ಸೂಚಿಸಿದೆ. ಜಾಹೀರಾತು ಹೊರತುಪಡಿಸಿ ಇತರ ಉದ್ದೇಶಗಳಿಗಾಗಿ ದತ್ತಾಂಶ ಹಂಚಿಕೆಗೆ ಸಂಬಂಧಿಸಿದಂತೆ, ವಾಟ್ಸ್‌ಆ್ಯಪ್ ತನ್ನ ನೀತಿಯಲ್ಲಿ ತಾನು ಇತರ ಮೆಟಾ ಸಂಸ್ಥೆಗಳೊಂದಿಗೆ ಹಂಚಿಕೊಳ್ಳುವ ದತ್ತಾಂಶದ ವಿವರವನ್ನು ಉಲ್ಲೇಖಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

2021ರ ಅಪ್‌ಡೇಟ್ ಜನರ ವೈಯಕ್ತಿಕ ಸಂದೇಶಗಳ ಗೋಪ್ಯತೆಯನ್ನು ಬದಲಿಸಿರಲಿಲ್ಲ ಮತ್ತು ಆ ಸಮಯದಲ್ಲಿ ಬಳಕೆದಾರರಿಗೆ ಆಯ್ಕೆಯೊಂದನ್ನು ನೀಡಲಾಗಿತ್ತು ಎಂದು ಮಂಗಳವಾರ ಹೇಳಿರುವ ವಾಟ್ಸ್‌ಆ್ಯಪ್, ಅಪ್‌ಡೇಟ್‌ನಿಂದಾಗಿ ಯಾರೂ ತಮ್ಮ ಖಾತೆಗಳನ್ನು ಅಳಿಸುವುದಿಲ್ಲ ಅಥವಾ ವೇದಿಕೆಗೆ ಪ್ರವೇಶವನ್ನು ಕಳೆದುಕೊಳ್ಳುವುದಿಲ್ಲ ಎನ್ನುವುದನ್ನು ತಾನು ಖಚಿತಪಡಿಸಿದ್ದೇನೆ ಎಂದು ತಿಳಿಸಿದೆ.

2021ರಲ್ಲಿ ನೀತಿ ಬದಲಾವಣೆ ಕುರಿತು ವಾಟ್ಸ್‌ಆ್ಯಪ್ ನೋಟಿಫಿಕೇಷನ್‌ಗಳನ್ನು ಕಳುಹಿಸಿದಾಗ ಆ ಕ್ರಮವು ಭಾರೀ ಹಿನ್ನಡೆಯನ್ನು ಅನುಭವಿಸಿತ್ತು. ಲಕ್ಷಾಂತರ ಬಳಕೆದಾರರು ಟೆಲಿಗ್ರಾಮ್ ಮತ್ತು ಸಿಗ್ನಲ್‌ನಂತಹ ಪ್ಲ್ಯಾಟ್‌ಫಾರ್ಮ್‌ಗಳಿಗೆ ಸ್ಥಳಾಂತರಗೊಂಡಿದ್ದರು.

Tags

WhatsApp privacy policyWhatsAppMeta
share
ವಾರ್ತಾಭಾರತಿ
ವಾರ್ತಾಭಾರತಿ
Next Story
X