Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ವಾಸ್ತವಗಳನ್ನು ತಿರುಚುವುದನ್ನು...

"ವಾಸ್ತವಗಳನ್ನು ತಿರುಚುವುದನ್ನು ನಿಲ್ಲಿಸಿ" : ಪಿಎಂ-ಶ್ರೀ ಶಾಲೆಗಳಿಗೆ ತಮಿಳುನಾಡು ಸರಕಾರ ʼಒಪ್ಪಿಗೆ ಪತ್ರʼ ನೀಡಿದೆ ಎಂದ ಸಚಿವ ಪ್ರಧಾನ್ ಹೇಳಿಕೆಗೆ ಡಿಎಂಕೆ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ12 March 2025 5:19 PM IST
share
ವಾಸ್ತವಗಳನ್ನು ತಿರುಚುವುದನ್ನು ನಿಲ್ಲಿಸಿ : ಪಿಎಂ-ಶ್ರೀ ಶಾಲೆಗಳಿಗೆ ತಮಿಳುನಾಡು ಸರಕಾರ ʼಒಪ್ಪಿಗೆ ಪತ್ರʼ ನೀಡಿದೆ ಎಂದ ಸಚಿವ ಪ್ರಧಾನ್ ಹೇಳಿಕೆಗೆ ಡಿಎಂಕೆ ತಿರುಗೇಟು

ಹೊಸದಿಲ್ಲಿ: ಪಿಎಂ-ಶ್ರೀ ಶಾಲೆಗಳ ಸ್ಥಾಪನೆಗೆ ತಮಿಳುನಾಡು ಸರಕಾರ ಸಹಮತ ಪತ್ರ ನೀಡಿತ್ತು ಎಂಬ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರ ಹೇಳಿಕೆಗೆ ಬುಧವಾರ ತಿರುಗೇಟು ನೀಡಿದ ಡಿಎಂಕೆ ಸಂಸದೆ ಕನಿಮೋಳಿ, “ವಾಸ್ತವಗಳನ್ನು ತಿರುಚುವುದನ್ನು ಬಿಡಿ” ಎಂದು ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರಕಾರ ಹಾಗೂ ತಮಿಳುನಾಡು ಸರಕಾರದ ನಡುವೆ ತ್ರಿಭಾಷಾ ಸೂತ್ರದ ಕುರಿತು ಉದ್ಭವಿಸಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕನಿಮೋಳಿ ಅವರಿಂದ ಈ ಹೇಳಿಕೆ ಹೊರ ಬಿದ್ದಿದೆ.

ಎಕ್ಸ್ ನಲ್ಲಿ ಧರ್ಮೇಂದ್ರ ಪ್ರಧಾನ್ ಮಾಡಿದ್ದ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಡಿಎಂಕೆ ಸಂಸದೆ ಕನಿಮೋಳಿ, ಶಿಕ್ಷಣ ಸಚಿವರು ಒದಗಿಸುವ ಪತ್ರದಲ್ಲಿ ತಮಿಳುನಾಡು ತ್ರಿಭಾಷಾ ಸೂತ್ರ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪಿಕೊಂಡಿರುವುದನ್ನು ಉಲ್ಲೇಖಿಸಿಲ್ಲ ಎಂದು ತಿರುಗೇಟು ನೀಡಿದ್ದಾರೆ.

“ರಾಜ್ಯ ಸರಕಾರ ನೇತೃತ್ವದ ಸಮಿತಿಯ ಶಿಫಾರಸಿನ ಮೇರೆಗೆ ತಮಿಳುನಾಡು ಪಿಎಂ-ಶ್ರೀ ಶಾಲೆಗಳನ್ನು ಒಪ್ಪಿಕೊಂಡಿದೆ ಎಂದು ಆ ಪತ್ರದಲ್ಲಿ ಹೇಳಲಾಗಿದೆಯೆ ಹೊರತು ಕೇಂದ್ರ ಸರಕಾರದ ಶಿಫಾರಸನ್ನು ಆಧರಿಸಿ ಎಂದಲ್ಲ. ನಾವೆಲ್ಲೂ ತ್ರಿಭಾಷಾ ಸೂತ್ರ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆಮೂಲಾಗ್ರವಾಗಿ ಒಪ್ಪಿಕೊಂಡಿದ್ದೇವೆ ಎಂದು ಆ ಪತ್ರದಲ್ಲಿ ಎಲ್ಲೂ ಉಲ್ಲೇಖಿಸಲಾಗಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ತಮಿಳುನಾಡಿಗೆ ಏನೆಲ್ಲ ಸ್ವೀಕಾರಾರ್ಹವೊ, ಅದನ್ನೆಲ್ಲ ಸ್ವೀಕರಿಸುತ್ತೇವೆ. ಅದಕ್ಕಿಂತ ಹೆಚ್ಚೂ ಇಲ್ಲ, ಅದಕ್ಕಿಂತ ಕಡಿಮೆಯೂ ಇಲ್ಲ. ವಾಸ್ತವಗಳನ್ನು ತಿರುಚುವುದನ್ನು ನಿಲ್ಲಿಸಿ” ಎಂದು ಅವರು ಆಗ್ರಹಿಸಿದ್ದಾರೆ.

“ತ್ರಿಭಾಷಾ ಸೂತ್ರ ವಿವಾದವು ತಮಿಳುನಾಡು ಸರಕಾರ ಪ್ರೇರಿತ ವಿವಾದವಾಗಿದ್ದು, ಈ ವಿಷಯದಲ್ಲಿ ಸಹಾನುಭೂತಿ ಪಡೆಯಲು ಹಾಗೂ ಡಿಎಂಕೆಯ ರಾಜಕೀಯ ಭವಿಷ್ಯವನ್ನು ಪುನರುಜ್ಜೀವನಗೊಳಿಸಲು ಮುನ್ನೆಲೆಗೆ ತರಲಾಗಿದೆ” ಎಂದು ಮಂಗಳವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಎಕ್ಸ್ ನಲ್ಲಿ ಮಾಡಿದ್ದ ಪೋಸ್ಟ್ ಗೆ ಪ್ರತಿಯಾಗಿ ಕನಿಮೋಳಿಯವರಿಂದ ಈ ಹೇಳಿಕೆ ಹೊರ ಬಿದ್ದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X