Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 50ಕ್ಕೂ ಅಧಿಕ ಕೆಮ್ಮಿನ ಸಿರಪ್ ತಯಾರಕರು...

50ಕ್ಕೂ ಅಧಿಕ ಕೆಮ್ಮಿನ ಸಿರಪ್ ತಯಾರಕರು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ವಾರ್ತಾಭಾರತಿವಾರ್ತಾಭಾರತಿ4 Dec 2023 6:54 PM IST
share
50ಕ್ಕೂ ಅಧಿಕ ಕೆಮ್ಮಿನ ಸಿರಪ್ ತಯಾರಕರು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ಹೊಸದಿಲ್ಲಿ, ಡಿ.4: ದೇಶದಲ್ಲಿ ಕೆಮ್ಮಿನ ಸಿರಪ್‌ಗಳನ್ನು ತಯಾರಿಸುತ್ತಿರುವ 50ಕ್ಕೂ ಅಧಿಕ ಕಂಪನಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲಗೊಂಡಿವೆ ಎಂದು ಸರಕಾರಿ ವರದಿಯೊಂದು ಹೇಳಿದೆ. ಭಾರತದಲ್ಲಿ ತಯಾರಾದ ಕೆಮ್ಮಿನ ಸಿರಪ್‌ಗಳಿಗೂ ವಿಶ್ವಾದ್ಯಂತ 141 ಮಕ್ಕಳ ಸಾವಿಗೂ ತಳುಕು ಹಾಕಿದ ವರದಿಗಳ ಬಳಿಕ ವಿವಿಧ ರಾಜ್ಯಗಳಲ್ಲಿ ನಡೆಸಲಾದ ಪ್ರಯೋಗಾಲಯ ಪರೀಕ್ಷೆಗಳನ್ನು ವರದಿಯು ಉಲ್ಲೇಖಿಸಿದೆ ಎಂದು The Economic Times ವರದಿ ಮಾಡಿದೆ.

ಅಕ್ಟೋಬರ್‌ವರೆಗೆ ಬಿಡುಗಡೆಗೊಳಿಸಲಾದ 2,104 ಪರೀಕ್ಷಾ ವರದಿಗಳ ಪೈಕಿ 54 ಕಂಪನಿಗಳಿಗೆ ಸಂಬಂಧಿಸಿದ 126 (ಶೇ.6) ವರದಿಗಳು ಪ್ರಮಾಣಿತ ಗುಣಮಟ್ಟಕ್ಕೆ ಅನುಗುಣವಾಗಿರಲಿಲ್ಲ ಎಂದು ಕೇಂದ್ರೀಯ ಔಷಧಿ ಗುಣಮಟ್ಟ ನಿಯಂತ್ರಣ ಸಂಸ್ಥೆ (ಸಿಡಿಎಸ್‌ಸಿಒ)ಯ ವರದಿಯು ತಿಳಿಸಿದೆ.

ವರದಿಯು ಕೆಮ್ಮಿನ ಸಿರಪ್‌ಗಳು ಕಳಪೆ ಗುಣಮಟ್ಟದ್ದಾಗಿರುವ ನಿರ್ದಿಷ್ಟ ಪ್ರಕರಣಗಳನ್ನು ಬೆಟ್ಟು ಮಾಡಿದೆ.

ಉದಾಹರಣೆಗೆ ಗುಜರಾತಿನ ಆಹಾರ ಮತ್ತು ಔಷಧಿ ಪ್ರಯೋಗಶಾಲೆಯು ಅಕ್ಟೋಬರ್‌ವರೆಗೆ 385 ಸ್ಯಾಂಪಲ್‌ಗಳನ್ನು ವಿಶ್ಲೇಷಿಸಿದ್ದು,ಈ ಪೈಕಿ 20 ಕಂಪನಿಗಳ 51 ಕೆಮ್ಮಿನ್ ಸಿರಪ್‌ಗಳು ಪ್ರಮಾಣಿತ ಗುಣಮಟ್ಟದ್ದಾಗಿರಲಿಲ್ಲ. ಇದೇ ರೀತಿ ಮುಂಬೈನ ಕೇಂದ್ರೀಯ ಔಷಧಿ ಪರೀಕ್ಷಾ ಪ್ರಯೋಗಾಲಯವು 523 ಸ್ಯಾಂಪಲ್‌ಗಳನ್ನು ವಿಶ್ಲೇಷಿಸಿದ್ದು,ಈ ಪೈಕಿ 10 ಕಂಪನಿಗಳ 18 ಸ್ಯಾಂಪಲ್‌ಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲಗೊಂಡಿವೆ. ಚಂಡಿಗಡದ ಪ್ರಾದೇಶಿಕ ಔಷಧಿ ಪರೀಕ್ಷಾ ಪ್ರಯೋಗಾಲಯವು 284 ಪರೀಕ್ಷಾ ವರದಿಗಳನ್ನು ಬಿಡುಗಡೆಗೊಳಿಸಿದ್ದು,10 ಕಂಪನಿಗಳ 23 ಸ್ಯಾಂಪಲ್‌ಗಳು ಪ್ರಮಾಣಿತ ಗುಣಮಟ್ಟದ್ದಾಗಿರಲಿಲ್ಲ. ಗಾಝಿಯಾಬಾದ್‌ನ ಇಂಡಿಯನ್ ಫಾರ್ಮಾಕೋಪಿಯಾ ಕಮಿಷನ್ 502 ವರದಿಗಳನ್ನು ಬಿಡುಗಡೆಗೊಳಿಸಿದ್ದು ಒಂಭತ್ತು ಕಂಪನಿಗಳ 29 ಸ್ಯಾಂಪಲ್‌ಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲಗೊಂಡಿವೆ.

ಗಾಂಬಿಯಾದಲ್ಲಿ ಮೂತ್ರಪಿಂಡ ವೈಫಲ್ಯದಿಂದಾಗಿ ಸಂಭವಿಸಿದ್ದ 70 ಮಕ್ಕಳ ಸಾವುಗಳಿಗೂ ಭಾರತೀಯ ಕಂಪನಿ ಮೇಡನ್ ಫಾರ್ಮಾಸ್ಯೂಟಿಕಲ್ಸ್ ಲಿ. ತಯಾರಿಸಿದ್ದ ಕೆಮ್ಮು ಮತ್ತು ಶೀತದ ಸಿರಪ್‌ಗಳಿಗೂ ನಂಟು ಕಲ್ಪಿಸಬಹುದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಹೇಳಿದ ಬಳಿಕ ಭಾರತದಲ್ಲಿ ಉತ್ಪಾದಿತ ಕೆಮ್ಮಿನ ಸಿರಪ್‌ಗಳು ನಿಗಾದಲ್ಲಿವೆ.

ಈ ವರ್ಷದ ಮೇ ತಿಂಗಳಿನಲ್ಲಿ ಭಾರತದ ಔಷಧಿಗಳ ಮಹಾನಿಯಂತ್ರಕ (ಡಿಜಿಸಿಐ)ರ ಕಚೇರಿಯು,ರಫ್ತು ಉದ್ದೇಶಕ್ಕಾಗಿ ಕೆಮ್ಮಿನ ಸಿರಪ್ ತಯಾರಕರಿಂದ ಸ್ವೀಕರಿಸಿದ ಸ್ಯಾಂಪಲ್‌ಗಳನ್ನು ಹೆಚ್ಚಿನ ಆದ್ಯತೆಯಲ್ಲಿ ವಿಶ್ಲೇಷಿಸುವಂತೆ ಮತ್ತು ಸಾಧ್ಯವಾದಷ್ಟು ಶೀಘ್ರ ಪರೀಕ್ಷಾ ವರದಿಗಳನ್ನು ಸಲ್ಲಿಸುವಂತೆ ಆಯಾ ರಾಜ್ಯ ಸರಕಾರದ ಸ್ವಾಮ್ಯದ ಎನ್‌ಎಬಿಎಲ್ ಮಾನ್ಯತೆ ಹೊಂದಿರುವ ಪ್ರಯೋಗಾಲಯಗಳಿಗೆ ನಿರ್ದೇಶಿಸುವಂತೆ ರಾಜ್ಯಗಳ ಔಷಧಿಗಳ ನಿಯಂತ್ರಕರಿಗೆ ಸೂಚನೆ ನೀಡಿತ್ತು.

ವಿದೇಶ ವ್ಯಾಪಾರ ಮಹಾ ನಿರ್ದೇಶನಾಲಯವೂ ಜೂ.1ರಿಂದ ಕೆಮ್ಮಿನ ಸಿರಪ್‌ಗಳ ರಫ್ತುದಾರರು ಅವುಗಳನ್ನು ರಫ್ತು ಮಾಡುವ ಮೊದಲು ಸರಕಾರಿ ಪ್ರಯೋಗಶಾಲೆಗಳಲ್ಲಿ ಪರೀಕ್ಷೆಗೊಳಪಡಿಸುವುದನ್ನು ಮತ್ತು ವಿಶ್ಲೇಷಣಾ ಪ್ರಮಾಣ ಪತ್ರವನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಿತ್ತು.

ಕಳೆದ ವಾರ ಗುಜರಾತಿನ ಖೇಡಾ ಜಿಲ್ಲೆಯಲ್ಲಿ ಮಿಥೈಲ್ ಅಲ್ಕೋಹಾಲ್‌ನ್ನು ಒಳಗೊಂಡಿದ್ದ ಆಯುರ್ವೇದ ಸಿರಪ್‌ನ್ನು ಸೇವಿಸಿದ ಬಳಿಕ ಐವರು ಮೃತಪಟ್ಟು,ಇಬ್ಬರು ಅಸ್ವಸ್ಥಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X