Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಐಟಿ ದಿಲ್ಲಿಯ ಲ್ಯಾಬ್ ಗೆ ನುಗ್ಗಿದ ನೆರೆ...

ಐಐಟಿ ದಿಲ್ಲಿಯ ಲ್ಯಾಬ್ ಗೆ ನುಗ್ಗಿದ ನೆರೆ ನೀರು: ರಾಸಾಯನಿಕ ಸ್ಯಾಂಪಲ್ ಗಳು, ವಿದ್ಯಾರ್ಥಿಗಳ ಸಂಶೋಧನಾ ಕಾರ್ಯಗಳು ನೀರುಪಾಲು

ವಾರ್ತಾಭಾರತಿವಾರ್ತಾಭಾರತಿ6 July 2024 6:48 PM IST
share
ಐಐಟಿ ದಿಲ್ಲಿಯ ಲ್ಯಾಬ್ ಗೆ ನುಗ್ಗಿದ ನೆರೆ ನೀರು: ರಾಸಾಯನಿಕ ಸ್ಯಾಂಪಲ್ ಗಳು, ವಿದ್ಯಾರ್ಥಿಗಳ ಸಂಶೋಧನಾ ಕಾರ್ಯಗಳು ನೀರುಪಾಲು

ಹೊಸದಿಲ್ಲಿ: ಕಳೆದ ವಾರ ದಿಲ್ಲಿಯಲ್ಲಿ ಸುರಿದಿದ್ದ ಧಾರಾಕಾರ ಮಳೆಯಿಂದಾಗಿ ಐಐಟಿ ದಿಲ್ಲಿಯ ಕುಸುಮಾ ಸ್ಕೂಲ್ ಆಫ್ ಬಯಾಲಾಜಿಕಲ್ ಸೈನ್ಸ್(ಕೆಎಸ್ಬಿಎಸ್)ನ ಲ್ಯಾಬ್ನೊಳಗೆ ಐದಾರು ಅಡಿಗಳಷ್ಟು ನೆರೆ ನೀರು ತುಂಬಿಕೊಂಡಿದೆ. ಇದರಿಂದಾಗಿ ರಾಸಾಯನಿಕ ಸ್ಯಾಂಪಲ್ ಗಳು, ವೈಯಕ್ತಿಕ ಸೊತ್ತುಗಳು ಮತ್ತು ದುಬಾರಿ ಉಪಕರಣಗಳು ನೀರುಪಾಲಾಗಿದ್ದು, ತಮ್ಮ ವರ್ಷಗಳ ಸಂಶೋಧನಾ ಕಾರ್ಯಗಳು ವ್ಯರ್ಥಗೊಂಡಿರುವುದು ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ಭಾರೀ ನಷ್ಟವನ್ನುಂಟು ಮಾಡಿದೆ.

ಲ್ಯಾಬ್ ಅನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದ್ದು, ಅದು ಪುನಃ ಆರಂಭಗೊಳ್ಳುವವರೆಗೂ ತಮ್ಮ ಸಂಶೋಧನಾ ಕಾರ್ಯಕ್ಕೆ ವಿರಾಮ ನೀಡುವುದು ವಿದ್ಯಾರ್ಥಿಗಳಿಗೆ ಅನಿವಾರ್ಯವಾಗಿದೆ. ಅನೇಕ ಅಧ್ಯಾಪಕರೂ ನಷ್ಟವನ್ನು ಅನುಭವಿಸಿದ್ದಾರೆ.

ಜೂ.25ರಂದು ಬೆಳಿಗ್ಗೆ ಸುರಿದಿದ್ದ ಭಾರೀ ಮಳೆಯಿಂದಾಗಿ ಕೆಎಸ್ಬಿಎಸ್ ನ ನೆಲಮಾಳಿಗೆಯಲ್ಲಿರುವ ಲ್ಯಾಬ್ ನಲ್ಲಿ ನೀರು ತುಂಬಿಕೊಂಡಿತ್ತು. ‘ನನ್ನ ವಸ್ತುಗಳನ್ನು ತೆಗೆದುಕೊಳ್ಳಲು ಲ್ಯಾಬ್ ಪ್ರವೇಶಿಸಿದಾಗ ನೀರು ಮೊಣಕಾಲಿನ ಮಟ್ಟಕ್ಕೆ ಏರಿತ್ತು. ನಾನು ನನ್ನ ಲ್ಯಾಪ್ಟಾಪ್ ಕಳೆದುಕೊಂಡಿದ್ದೇನೆ. ನನ್ನ ಐದು ವರ್ಷಗಳ ಸಂಶೋಧನಾ ಕಾರ್ಯದ ದಾಖಲೆಗಳನ್ನು ಒಣಗಿಸಿ ಅವುಗಳನ್ನು ಪೂರ್ವ ಸ್ಥಿತಿಯಲ್ಲಿ ಪಡೆದುಕೊಳ್ಳಲು ನಾನು ಈಗಲೂ ಪ್ರಯತ್ನಿಸುತ್ತಿದ್ದೇನೆ ’ಎಂದು ಅಂತಿಮ ವರ್ಷದ ಪಿಎಚ್ಡಿ ವಿದ್ಯಾರ್ಥಿಯೋರ್ವರು ಅಳಲು ತೋಡಿಕೊಂಡರು.

‘ಮಳೆಯಿಂದಾಗಿ ಪ್ರತಿ ವರ್ಷವೂ ಲ್ಯಾಬ್ನಲ್ಲಿ ಸುಮಾರು ಒಂದು ಅಡಿ ನೀರು ನಿಲ್ಲುತ್ತದೆ. ಆದರೆ ಈ ವರ್ಷ ನೀರಿನ ಮಟ್ಟ ಐದಾರು ಅಡಿ ಎತ್ತರದಲ್ಲಿದೆ. ಹಲವಾರು ವಿದ್ಯಾರ್ಥಿಗಳ ಸಂಶೋಧನಾ ಕಾರ್ಯಗಳು ನೀರಿನಲ್ಲಿ ತೊಳೆದುಕೊಂಡು ಹೋಗಿವೆ,ಉಪಕರಣಗಳಿಗೆ ತೀವ್ರ ಹಾನಿಯುಂಟಾಗಿದೆ. ಭಾರತದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಐಐಟಿಯಲ್ಲಿ ಕಾರ್ಯ ನಿರ್ವಹಿಸಲು ಉತ್ತಮ ವಾತಾವರಣವನ್ನು ಮಾತ್ರ ನಾವು ಕೇಳಿಕೊಳ್ಳುತ್ತಿದ್ದೇವೆ ’ಎಂದರು.

ಲ್ಯಾಬ್ನ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ನೈರ್ಮಲ್ಯ ಕಾರ್ಮಿಕರ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದರು.

‘ನೆಲಮಾಳಿಗೆಯಲ್ಲಿ ನಿಂತಿರುವ ನೀರು ಅಪಾಯಕಾರಿ ರಾಸಾಯನಿಕಗಳಿಂದ ತುಂಬಿದೆ,ಆದರೆ ನೈರ್ಮಲ್ಯ ಕಾರ್ಮಿಕರು ಯಾವುದೇ ವಿಶೇಷ ಸುರಕ್ಷತಾ ಸಾಧನಗಳಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಪ್ರಯೋಗಗಳನ್ನು ಮಾಡುವಾಗಲೂ ನಾವು ಅಂತಹ ರಾಸಾಯನಿಕ ವಸ್ತುಗಳನ್ನು ಎಚ್ಚರಿಕೆಯಿಂದ ವಿಲೇವಾರಿ ಮಾಡುತ್ತೇವೆ ’ ಎಂದು ಇನ್ನೋರ್ವ ಪಿಎಚ್ಡಿ ವಿದ್ಯಾರ್ಥಿ ಹೇಳಿದರು.

ಲ್ಯಾಬ್ನಲ್ಲಿಯ ನೀರನ್ನು ಸಂಸ್ಕರಿಸದೆ ಹೊರಹಾಕಲಾಗುತ್ತಿದೆ,ಇವೆಲ್ಲವೂ ಅತ್ಯಂತ ಅನೈತಿಕವಾಗಿವೆ ಮತ್ತು ಪರಿಸರ ವ್ಯವಸ್ಥೆಗೆ ಹಾಗೂ ಜನರಿಗೆ ಹೆಚ್ಚಿನ ಹಾನಿಗೆ ಕಾರಣವಾಗಬಹುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X