Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಗೋ ಬದಲಾವಣೆ ಮಾಡಿದ ರಾಷ್ಟ್ರೀಯ...

ಲೋಗೋ ಬದಲಾವಣೆ ಮಾಡಿದ ರಾಷ್ಟ್ರೀಯ ವೈದ್ಯಕೀಯ ಆಯೋಗ; ರಾಷ್ಟ್ರೀಯ ಲಾಂಛನ ಕೈಬಿಟ್ಟು ಧನ್ವಂತರಿಯ ಚಿತ್ರ ಸೇರ್ಪಡೆ

ʼಇಂಡಿಯಾʼ ಪದದ ಬದಲು ʼಭಾರತ್‌ʼ ಎಂದು ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ1 Dec 2023 11:38 AM IST
share
ಲೋಗೋ ಬದಲಾವಣೆ ಮಾಡಿದ ರಾಷ್ಟ್ರೀಯ ವೈದ್ಯಕೀಯ ಆಯೋಗ; ರಾಷ್ಟ್ರೀಯ ಲಾಂಛನ ಕೈಬಿಟ್ಟು ಧನ್ವಂತರಿಯ ಚಿತ್ರ ಸೇರ್ಪಡೆ

ಹೊಸದಿಲ್ಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ತನ್ನ ಲೋಗೋದಲ್ಲಿ ಮಾರ್ಪಾಟು ತಂದಿದ್ದು ಅದರಲ್ಲಿದ್ದ ರಾಷ್ಟ್ರೀಯ ಲಾಂಛನದ ಚಿತ್ರವನ್ನು ಕೈಬಿಟ್ಟು ವಿಷ್ಣುವಿನ ಅವತಾರವಾಗಿರುವ ಹಾಗೂ ದೇವತೆಗಳ ವೈದ್ಯನೆಂದು ಪುರಾಣಗಳಲ್ಲಿ ಉಲ್ಲೇಖವಿರುವ ಆಯುರ್ವೇದದ ಹರಿಕಾರ ಎಂದು ಕರೆಯಲ್ಪಡುವ ಧನ್ವಂತರಿಯ ಫೋಟೋ ಅನ್ನು ಸೇರಿಸಿದೆ ಎಂದು timesofindia ವರದಿ ಮಾಡಿದೆ.

ಧನ್ವಂತರಿಯ ಲೋಗೋ ಕಳೆದೊಂದು ವರ್ಷದಿಂದ ಬಳಕೆಯಲ್ಲಿತ್ತು, ಈ ಹಿಂದೆ ಅದು ಕಪ್ಪು ಬಿಳುಪು ಇದ್ದುದರಿಂದ ಪ್ರಿಂಟ್‌ಔಟ್‌ಗಳಲ್ಲಿ ಕಾಣಿಸುತ್ತಿರಲಿಲ್ಲ ಎಂದು ಎನ್‌ಎಂಸಿ ಹೇಳಿದೆ. ಈಗ ಲೋಗೋದ ಮಧ್ಯ ಭಾಗದಲ್ಲಿ ಕಲರ್‌ ಫೋಟೋ ಬಳಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಲಾಂಛನದಲ್ಲೂ ಹಾವು ಸುತ್ತಿಕೊಂಡಿರುವ ಒಂದು ಕೋಲು ಇದೆ. ಇದು ಹಿಂದಿನ ಕಾಲದಿಂದಲೂ ವೈದ್ಯಕೀಯ ವೃತ್ತಿಯ ಚಿಹ್ನೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎನ್‌ಎಂಸಿ ಲೋಗೋದಲ್ಲಿ “ಇಂಡಿಯಾ” ಪದದ ಬಳಕೆಯಿಲ್ಲ ಬದಲು ಭಾರತ್‌ ಎಂಬ ಉಲ್ಲೇಖವಿದೆ. ಲೋಗೋ ಬದಲಾವಣೆ ಕುರಿತು ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

ಭಾರತೀಯ ವೈದ್ಯಕೀಯ ಸಂಘದ ಕೇರಳ ಘಟಕ ಈ ಲೋಗೋದಲ್ಲಿನ ಬದಲಾವಣೆಯನ್ನು ಟೀಕಿಸಿದೆ. ಆಧುನಿಕ ವೈದ್ಯಕೀಯ ವೃತ್ತಿಪರರಿಗೆ ಇದು ಸ್ವೀಕಾರಾರ್ಹವಲ್ಲ. ಇದು ತಪ್ಪು ಸಂದೇಶ ರವಾನಿಸುತ್ತದೆ ಮತ್ತು ಕಮಿಷನ್‌ನ ವೈಜ್ಞಾನಿಕ ಮತ್ತು ಜಾತ್ಯತೀತ ಸ್ವರೂಪಕ್ಕೆ ಹಾನಿಯೆಸಗುತ್ತದೆ, ಬದಲಾವಣೆಯನ್ನು ರದ್ದುಪಡಿಸಬೇಕೆಂದು ಅದು ಕೋರಿದೆ.

ಐಎಂಎ ರಾಷ್ಟ್ರೀಯ ಅಧ್ಯಕ್ಷ ಡಾ ಶರದ್‌ ಕುಮಾರ್‌ ಅಗರ್ವಾಲ್‌ ಪ್ರತಿಕ್ರಿಯಿಸಿ ಈ ವಿಚಾರವನ್ನು ರವಿವಾರ ನಡೆಯುವ ಸಂಘಟನೆಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.

ಆಯುಷ್ಮಾನ್‌ ಭಾರತ್‌ ಹೆಲ್ತ್‌ ಎಂಡ್‌ ವೆಲ್‌ನೆಸ್‌ ಸೆಂಟರ್‌ಗಳು ಇನ್ನು ಆಯುಷ್ಮಾನ್‌ ಆರೋಗ್ಯ ಮಂದಿರ್‌ ಎಂದು ಕರೆಯಲ್ಪಡುವುದೆಂದು ಕರೆದ ವಾರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತಗಳಿಗೆ ಪತ್ರ ಬರೆದಿತ್ತು. ರಿಬ್ರ್ಯಾಂಡ್‌ ಮಾಡಿದ ಹೆಸರುಗಳ ಫೋಟೋ ಅಪ್‌ಲೋಡ್‌ ಮಾಡುವಂತೆಯೂ ರಾಜ್ಯಗಳಿಗೆ ಸೂಚಿಸಲಾಗಿದೆ. ಹೊಸ ಘೋಷವಾಕ್ಯ “ಆರೋಗ್ಯಂ ಪರಮಮ್‌ ಧನಮ್”‌ ಎಂಬ ಘೋಷವಾಕ್ಯಗಳನ್ನೂ ಈ ಕೇಂದ್ರಗಳು ಹೊಂದಬೇಕೆಂದು ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X