ಹಿಂಸಾಚಾರಪೀಡಿತ ಮಣಿಪುರಕ್ಕೆ ವಿಪಕ್ಷಗಳ ಒಕ್ಕೂಟ INDIA ನಿಯೋಗ ಭೇಟಿ ಸಾಧ್ಯತೆ: ವರದಿ
ಹೊಸದಿಲ್ಲಿ: INDIA (ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ) ಒಕ್ಕೂಟವನ್ನು ರಚಿಸಿರುವ 26 ರಾಜಕೀಯ ಪಕ್ಷಗಳ ನಾಯಕರ ನಿಯೋಗವು ಮಣಿಪುರದ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ ಎಂದು ಮೂಲಗಳು ಬುಧವಾರ India Todayಗೆ ತಿಳಿಸಿವೆ.
ಈಶಾನ್ಯ ರಾಜ್ಯದಲ್ಲಿ ಪ್ರಬಲ ಅಸ್ತಿತ್ವ ಹೊಂದಿರುವ ಪಕ್ಷಗಳು ನಿಯೋಗವನ್ನು ಮುನ್ನಡೆಸಲಿವೆ ಎಂದು ಮೂಲಗಳು ತಿಳಿಸಿವೆ.
ಭೇಟಿಯ ದಿನಾಂಕ ಹಾಗೂ ಅವಧಿಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ.
ಈಗ ನಡೆಯುತ್ತಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಣಿಪುರ ಹಿಂಸಾಚಾರ ಘಟನೆ ಭಾರೀ ಮಹತ್ವ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಮಾತನಾಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ನಾಯಕರು ಪ್ರತಿದಿನ ಸದನಗಳಲ್ಲಿ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಬುಧವಾರ ಲೋಕಸಭೆಯಲ್ಲಿ ನರೇಂದ್ರ ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ನೋಟಿಸನ್ನು ನೀಡಿದ್ದು ಇದನ್ನುಸ್ಪೀಕರ್ ಸ್ವೀಕರಿಸಿದ್ದಾರೆ. .