Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಗ್ರೂಪ್ ಬಗ್ಗೆ ವರದಿ ಮಾಡಿದ...

ಅದಾನಿ ಗ್ರೂಪ್ ಬಗ್ಗೆ ವರದಿ ಮಾಡಿದ ಪತ್ರಕರ್ತನ ಫೋನ್‌ಗೆ ಪೆಗಾಸಸ್ ಮೂಲಕ ಕನ್ನ

ʼಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿಗಾರಿಕೆ ಯೋಜನೆʼ ಆರೋಪ

ವಾರ್ತಾಭಾರತಿವಾರ್ತಾಭಾರತಿ8 Nov 2023 8:11 PM IST
share
ಅದಾನಿ ಗ್ರೂಪ್ ಬಗ್ಗೆ ವರದಿ ಮಾಡಿದ ಪತ್ರಕರ್ತನ ಫೋನ್‌ಗೆ ಪೆಗಾಸಸ್ ಮೂಲಕ ಕನ್ನ

ಹೊಸದಿಲ್ಲಿ: ಶೇರುಗಳ ಬೆಲೆಗಳಲ್ಲಿ ಅದಾನಿ ಗ್ರೂಪ್ ಮಾಡುತ್ತಿದೆಯೆನ್ನಲಾದ ಹಸ್ತಕ್ಷೇಪದ ಬಗ್ಗೆ ವರದಿ ಮಾಡಿರುವ ಭಾರತೀಯ ಪತ್ರಕರ್ತರೊಬ್ಬರ ಸ್ಮಾರ್ಟ್‌ಫೋನ್‌ಗೆ ಪೆಗಾಸಸ್ ಬೇಹುಗಾರಿಕಾ ತಂತ್ರಾಂಶದ ಮೂಲಕ ಆಗಸ್ಟ್‌ನಲ್ಲಿ ಕನ್ನ ಹಾಕಲಾಗಿದೆ ಎಂದು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿಗಾರಿಕೆ ಯೋಜನೆಯ ಸಹ ಸಂಸ್ಥಾಪಕ ಡ್ರೂ ಸಲಿವಾನ್ ಮಂಗಳವಾರ ‘ರಾಯ್ಟರ್ಸ್’ ಸುದ್ದಿಸಂಸ್ಥೆಗೆ ಹೇಳಿದ್ದಾರೆ.

ಈ ಪತ್ರಕರ್ತ ಆನಂದ್ ಮಂಗ್ನಾಲೆ ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿಗಾರಿಕೆ ಯೋಜನೆಗಾಗಿ ಕೆಲಸ ಮಾಡುತ್ತಿದ್ದಾರೆ.

ಕನ್ನಗಾರರು ಇಸ್ರೇಲ್‌ನ ಸೈಬರ್ ಬೇಹುಗಾರಿಕಾ ಕಂಪೆನಿ ಎನ್‌ಎಸ್‌ಒ ಸಿದ್ಧಪಡಿಸಿರುವ ಬೇಹುಗಾರಿಕಾ ತಂತ್ರಾಂಶವನ್ನು ಆನಂದ್ ಮಂಗ್ನಾಲೆಯ ಐಪೋನ್‌ನಲ್ಲಿ ಸ್ಥಾಪಿಸಲು ಪ್ರಯತ್ನಿಸಿದ್ದಾರೆ ಎಂದು ಸಲಿವಾನ್ ಆರೋಪಿಸಿದರು.

ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿಗಾರಿಕೆ ಯೋಜನೆಯ ನಡೆಸಿರುವ ಆಂತರಿಕ ವಿಧಿವಿಜ್ಞಾನ ತನಿಖೆಯಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಪತ್ರಕರ್ತ ಆನಂದ್‌ರ ಐಫೋನ್ ಮೇಲೆ ನಡೆದ ಸೈಬರ್ ದಾಳಿ ಮತ್ತು ಎನ್‌ಎಸ್‌ಒದ ಪೆಗಾಸಸ್ ಹ್ಯಾಕಿಂಗ್ ಟೂಲ್ ನಡುವೆ ನಂಟಿದೆ ಎನ್ನುವುದು ಬೆಳಕಿಗೆ ಬಂದಿದೆ.

ಕನ್ನಗಾರರು ಪೆಗಾಸಸ್ ತಂತ್ರಾಂಶ ಬಳಿ ಫೋನ್ ಕರೆಗಳನ್ನು ಮುದ್ರಿಸಿಕೊಳ್ಳಬಹುದಾಗಿದೆ, ಸಂದೇಶಗಳನ್ನು ತಡೆಹಿಡಿಯಬಹುದಾಗಿದೆ ಮತ್ತು ಸಂತ್ರಸ್ತರ ಫೋನ್‌ಗಳನ್ನು ಚಲಿಸುವ ಗೂಢಚಾರಿಕೆ ಸಾಧನವಾಗಿ ಬಳಸಿಕೊಳ್ಳಬಹುದಾಗಿದೆ. ಈ ಬೇಹುಗಾರಿಕೆ ತಂತ್ರಾಂಶವನ್ನು ಜಗತ್ತಿನ ಸರಕಾರಗಳಿಗೆ ಮಾತ್ರ ಅದರ ತಯಾರಕ ಕಂಪೆನಿಯು ಮಾರಾಟ ಮಾಡುತ್ತದೆ.

‘‘ವರದಿಗಾರರ ಮೇಲೆ ಸರಕಾರ ನಡೆಸುತ್ತಿರುವ ಈ ಮಾದರಿಯ ಬೇಹುಗಾರಿಕೆಗೆ, ರಾಜಕೀಯ ಕಾರಣವಲ್ಲದೆ ಬೇರೆ ಯಾವುದೇ ಸ್ವೀಕಾರಾರ್ಹ ವಿವರಣೆ ಇರಲು ಸಾಧ್ಯವಿಲ್ಲ’’ ಎಂದು ‘ರಾಯ್ಟರ್ಸ್’ನೊಂದಿಗೆ ಮಾತನಾಡಿದ ಸಲಿವಾನ್ ಹೇಳಿದರು.

‘‘ಸರಕಾರದ ಈ ಕೃತ್ಯ ಅಸ್ವೀಕಾರಾರ್ಹ ಮತ್ತು ಆಕ್ರೋಶಕಾರಕ’’ ಎಂದು ಅವರು ಬಣ್ಣಿಸಿದರು.

ಶೇರುಗಳ ಬೆಲೆಗಳಲ್ಲಿ ಅದಾನಿ ಗುಂಪು ನಡೆಸುತ್ತಿದೆಯೆನ್ನಲಾದ ಹಸ್ತಕ್ಷೇಪದ ಬಗ್ಗೆ ಪತ್ರಕರ್ತರಾದ ರವಿ ನಾಯರ್ ಮತರ್ತು ಆನಂದ್ ಮಂಗ್ನಾಲೆ ಬರೆದ ವರದಿಯೊಂದನ್ನು ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿಗಾರಿಕೆ ಯೋಜನೆಯು ಆಗಸ್ಟ್‌ನಲ್ಲಿ ಪ್ರಕಟಿಸಿತ್ತು. ಅದಾನಿ ಗುಂಪಿಗೆ ವಿದೇಶಗಳ ಫಂಡ್‌ಗಳ ಮೂಲಕ ನೂರಾರು ಕೋಟಿ ಡಾಲರ್‌ಗಳನ್ನು ಹರಿಸುತ್ತಿರುವ ಇಬ್ಬರು ಹೂಡಿಕೆದಾರರು ಗುಂಪಿನ ಮಾಲೀಕರೊಂದಿಗೆ ನಿಕಟ ಸಂಬಂಧಗಳನ್ನು ಹೊಂದಿದ್ದಾರೆ ಎಂಬುದಾಗಿ ವರದಿಯು ಆರೋಪಿಸಿತ್ತು.

ಭಾರತೀಯ ಶೇರು ಮಾರುಕಟ್ಟೆ ನಿಯಮಗಳ ಉಲ್ಲಂಘನೆಯಾಗಿರುವ ಸಾಧ್ಯತೆಯಿದೆ ಎಂಬುದಾಗಿಯೂ ವರದಿ ಹೇಳಿತ್ತು.

Tags

PegasusjournalistAdani Group
share
ವಾರ್ತಾಭಾರತಿ
ವಾರ್ತಾಭಾರತಿ
Next Story
X