Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂ ಕೋರ್ಟ್ ನಲ್ಲಿ ಬಾಕಿ...

ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಪ್ರಕರಣಗಳು: ಇತಿಹಾಸದಲ್ಲೇ ಗರಿಷ್ಠ

ವಾರ್ತಾಭಾರತಿವಾರ್ತಾಭಾರತಿ30 Aug 2024 7:29 AM IST
share
ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಪ್ರಕರಣಗಳು: ಇತಿಹಾಸದಲ್ಲೇ ಗರಿಷ್ಠ

ಹೊಸದಿಲ್ಲಿ: ಭಾರತದ ಸುಪ್ರೀಂಕೋರ್ಟ್ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸಿರುವುದು ಕೂಡಾ ಬಾಕಿ ಪ್ರಕರಣಗಳ ಮೇಲೆ ಯಾವುದೇ ಪರಿಣಾಮ ಬೀರುವಂತೆ ಕಾಣುತ್ತಿಲ್ಲ. ಬಾಕಿ ಪ್ರಕರಣಗಳ ಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಎಂಟು ಬಾರಿ ಹೆಚ್ಚಳವಾಗಿದ್ದು, ಕೇವಲ ಎರಡು ಬಾರಿ ಇಳಿಕೆಯಾಗಿದೆ. ದೇಶದ ಅತ್ಯುನ್ನತ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ 83 ಸಾವಿರವನ್ನು ದಾಟಿದ್ದು, ಇದು ಇತಿಹಾಸದಲ್ಲೇ ಗರಿಷ್ಠ.

ಸುಪ್ರೀಂಕೋರ್ಟ್ನ ಅನುಮೋದಿತ ನ್ಯಾಯಮೂರ್ತಿಗಳ ಸಂಖ್ಯೆಯನ್ನು 2009ರಲ್ಲಿ 26ರಿಂದ 31ಕ್ಕೆ ಹೆಚ್ಚಿಸಿದರೂ, 2013ರ ವೇಳೆಗೆ ಪ್ರಕರಣಗಳ ಸಂಖ್ಯೆ 50 ಸಾವಿರದಿಂದ 66 ಸಾವಿರಕ್ಕೆ ಹೆಚ್ಚಿತು. ಬಳಿಕ ನ್ಯಾಯಮೂರ್ತಿ ಪಿ.ಸದಾಶಿವಂ ಮತ್ತು ಆರ್.ಎಂ.ಲೋಧಾ ಅವರ ಅವಧಿಯಲ್ಲಿ 2014ರಲ್ಲಿ ಪ್ರಕರಣಗಳ ಸಂಖ್ಯೆ 63 ಸಾವಿರಕ್ಕೆ ಇಳಿಯಿತು. ಮುಂದಿನ ಸಿಜೆಐ ನ್ಯಾಯಮೂರ್ತಿ ಎಚ್.ಎಲ್.ದತ್ತು ಅವರ ವಿಶೇಷ ಪರಿಶ್ರಮದಿಂದ 2015ರಲ್ಲಿ 59 ಸಾವಿರಕ್ಕೆ ಇಳಿಕೆಯಾಯಿತು.

ಮುಂದಿನ ಸಿಜೆಐ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಅವರ ಅವಧಿಯಲ್ಲಿ ಇದು 63 ಸಾವಿರಕ್ಕೆ ಹೆಚ್ಚಿತು. ನ್ಯಾಯಮೂರ್ತಿ ಜೆ.ಎಸ್.ಖೇಹರ್ ಅವರು ಕಾಗದರಹಿತ ನ್ಯಾಯಾಲಯ ವ್ಯವಸ್ಥೆಯನ್ನು ಪರಿಚಯಿಸಿದ ಹಿನ್ನೆಲೆಯಲ್ಲಿ ಪ್ರಕರಣ ನಿರ್ವಹಣೆ ವ್ಯವಸ್ಥೆಗೆ ಮಾಹಿತಿ ತಂತ್ರಜ್ಞಾನ ಬಳಕೆಯಿಂದ ಇದನ್ನು 56 ಸಾವಿರಕ್ಕೆ ಇಳಿಸಲಾಯಿತು. ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವಧಿಯಲ್ಲಿ ಮತ್ತೆ 57 ಸಾವಿರಕ್ಕೆ ಹೆಚ್ಚಳವಾಯಿತು.

ಸಂಸತ್ತಿನ ಕಾಯ್ದೆ ಮೂಲಕ 2019ರಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 31 ರಿಂದ 34ಕ್ಕೆ ಹೆಚ್ಚಿಸಲಾಯಿತು. ಆದಾಗ್ಯೂ ಪ್ರಕರಣ ಸಂಖ್ಯೆ 60 ಸಾವಿರ ದಾಟಿತು. ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮುಂದಿನ ಸಿಜೆಐ ಆದ ಅವಧಿಯಲ್ಲಿ ಕೋವಿಡ್-19 ಸಾಂಕ್ರಾಮಿಕ, ನ್ಯಾಯದಾನ ವ್ಯವಸ್ಥೆ ಕೂಡಾ ಅಕ್ಷರಶಃ ಕುಂಟಲು ಕಾರಣವಾಯಿತು. ಬಾಕಿ ಪ್ರಕರಣಗಳ ಸಂಖ್ಯೆ 65 ಸಾವಿರವನ್ನು ಮೀರಿತು.

ಸಿಜೆಐ ಎನ್.ವಿ.ರಮಣ ಅವರ ಅವಧಿಯಲ್ಲಿ ಇದು 70 ಸಾವಿರಕ್ಕೇರಿದರೆ, 2022ರ ಕೊನೆಗೆ 79 ಸಾವಿರವನ್ನು ತಲುಪಿತು. ಈ ವೇಳೆ ನ್ಯಾಯಮೂರ್ತಿ ರಮಣಾ ಮತ್ತು ಯು.ಯು.ಲಲಿತ್ ನಿವೃತ್ತರಾಗಿ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸಿಜೆಐ ಆದರು. ಇದೀಗ ಕಳೆದ ಎರಡು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ 4 ಸಾವಿರದಷ್ಟು ಹೆಚ್ಚಿ 83 ಸಾವಿರ ತಲುಪಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X