Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಣ ಲೂಟಿ ಮಾಡುವಲ್ಲೇ ನಿರತರಾದ ಜನ;...

ಹಣ ಲೂಟಿ ಮಾಡುವಲ್ಲೇ ನಿರತರಾದ ಜನ; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಮೃತ್ಯು!

ವಾರ್ತಾಭಾರತಿವಾರ್ತಾಭಾರತಿ14 Jan 2024 10:26 AM IST
share
ಹಣ ಲೂಟಿ ಮಾಡುವಲ್ಲೇ ನಿರತರಾದ ಜನ; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಮೃತ್ಯು!

ಆಗ್ರಾ: ಅಪಘಾತದಲ್ಲಿ ಗಾಯಗೊಂಡಗೊಂಡ ವ್ಯಕ್ತಿಗೆ ವೈದ್ಯಕೀಯ ನೆರವು ನೀಡುವ ಬದಲು, ಜನರು ಆತನ ಹಣ ಲೂಟಿ ಮಾಡುವಲ್ಲೇ ನಿರತರಾದ ಕಾರಣ ಸಕಾಲಕ್ಕೆ ಚಿಕಿತ್ಸೆ ದೊರಕದೇ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ದೆಹಲಿ- ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಆಗ್ರಾದ ವ್ಯಾಪಾರಿ ಧರ್ಮೇಂದ್ರ ಕುಮಾರ್ ಗುಪ್ತಾ (46) ಎಂದು ಗುರುತಿಸಲಾಗಿದೆ. ಅಪಘಾತ ಸ್ಥಳದಲ್ಲಿ ಜಮಾಯಿಸಿದ ಜನ ಆತನ ನೆರವಿಗೆ ಬಂದು, ಸೂಕ್ತ ವೈದ್ಯಕೀಯ ನೆರವನ್ನು ಸಕಾಲಕ್ಕೆ ಒದಗಿಸಿದಲ್ಲಿ ಈ ಅಪಘಾತ ಸಂತ್ರಸ್ತನ ಜೀವ ಉಳಿಯುತ್ತಿತ್ತು.

ಆದರೆ ತೀವ್ರ ಗಾಯಗೊಂಡ ಧರ್ಮೇಂದ್ರ ಅವರು ಜೀವನ್ಮರಣ ಸ್ಥಿತಿಯಲ್ಲಿ ಒದ್ದಾಡುತ್ತಿದ್ದರೆ, ಸೇರಿದ್ದ ಜನ ಅವರ 1.5 ಲಕ್ಷ ರೂಪಾಯಿ ಲೂಟಿ ಮಾಡುವಲ್ಲಿ ನಿರತರಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

47 ಸೆಕೆಂಡ್ ಗಳ ಈ ವಿಡಿಯೊ ಪೊಲೀಸರ ಗಮನಕ್ಕೂ ಬಂದಿದ್ದು, ಈ ವಿಚಾರದಲ್ಲಿ ಎಫ್ಐಆರ್ ದಾಖಲಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಮಂಗಳವಾರ ಈ ಘಟನೆ ನಡೆದಿದ್ದು, ದೆಹಲಿ- ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಟ್ರಕ್, 20ಕ್ಕೂ ಹೆಚ್ಚು ವಾಹನಗಳಿಗೆ ಢಿಕ್ಕಿ ಹೊಡೆದು ಧರ್ಮೇಂದ್ರ ಸೇರಿದಂತೆ ಮೂವರ ಸಾವಿಗೆ ಕಾರಣವಾಗಿತ್ತು. ಹಾಲು ವ್ಯವಹಾರ ಮಾಡಿ ಬೈಕ್ ನಲ್ಲಿ ಮಥುರಾದಿಂದ ಮನೆಗೆ ವಾಪಸ್ಸಾಗುತ್ತಿದ್ದ ಧರ್ಮೇಂದ್ರ ಅವರ ಬಳಿ ಇದ್ದ ಬ್ಯಾಗ್ ನಲ್ಲಿ 1.5 ಲಕ್ಷ ರೂಪಾಯಿ ಇತ್ತು ಎಂದು ಕುಟುಂಬದವರು ಹೇಳಿದ್ದಾರೆ.

ಭಾನುವಾರ ಈ ವಿಡಿಯೊ ಜಾಲತಾಣಗಳಲ್ಲಿ ಹರಿದಾಡಲು ಆರಂಭಿಸಿದ್ದು, ಅಪಘಾತ ನಡೆದ ಸ್ಥಳದಲ್ಲಿ ಧರ್ಮೇಂದ್ರ ಸುತ್ತ ಮುತ್ತ ಸೇರಿದ್ದ ಜನ, ಈ ಹಣವನ್ನು ಪೊಲೀಸರಿಗೆ ಹಸ್ತಾಂತರಿಸುವಂತೆ, ತಮ್ಮಲ್ಲೇ ಇಟ್ಟುಕೊಳ್ಳುವಂತೆ ಅಥವಾ ಆತನಿಗೆ ನೆರವಾಗುವಂತೆ ಚರ್ಚೆ ಮಾಡುತ್ತಿದ್ದುದು ಕೇಳಿಸುತ್ತಿದೆ. ಕೆಲವರು "ಉಠಾ ಲೋ ಪೈಸಾ ಉಠಾಲೋ" (ಮೊದಲು ಹಣವನ್ನು ತೆಗೆದುಕೊಳ್ಳಿ) ಎಂದು ಹೇಳಿ ನೋಟಿನ ಕಂತೆಗಳನ್ನು ತಮ್ಮ ಚೀಲಕ್ಕೆ ತುಂಬಿಸಿಕೊಳ್ಳುವುದು ಕಾಣುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X