Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎರಡು ಪ್ರಕರಣಗಳಲ್ಲಿ ಪೊಲೀಸರು...

ಎರಡು ಪ್ರಕರಣಗಳಲ್ಲಿ ಪೊಲೀಸರು ನ್ಯಾಯಾಲಯವನ್ನು ಮೂರ್ಖನನ್ನಾಗಿಸಿದ್ದಾರೆ, ಇಬ್ಬಗೆ ನಿಲುವು ಅನುಸರಿಸಿದ್ದಾರೆ: ನ್ಯಾಯಾಧೀಶರಿಂದ ತರಾಟೆ

ದಿಲ್ಲಿ ಗಲಭೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 Aug 2023 2:59 PM IST
share
ಎರಡು ಪ್ರಕರಣಗಳಲ್ಲಿ ಪೊಲೀಸರು ನ್ಯಾಯಾಲಯವನ್ನು ಮೂರ್ಖನನ್ನಾಗಿಸಿದ್ದಾರೆ, ಇಬ್ಬಗೆ ನಿಲುವು ಅನುಸರಿಸಿದ್ದಾರೆ: ನ್ಯಾಯಾಧೀಶರಿಂದ ತರಾಟೆ

ಹೊಸದಿಲ್ಲಿ: 2020ರ ದಿಲ್ಲಿ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ನ್ಯಾಯಾಲಯವನ್ನು ಮೂರ್ಖನನ್ನಾಗಿಸಿದ್ದಕ್ಕಾಗಿ ಮತ್ತು ಇಬ್ಬಗೆ ನಿಲುವುಗಳನ್ನು ಅನುಸರಿಸುತ್ತಿರುವುದಕ್ಕಾಗಿ ಇಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಪೊಲೀಸರನ್ನು ತರಾಟೆಗೆತ್ತಿಕೊಂಡಿದ್ದಾರೆ.

ನ್ಯಾ.ಪ್ರಮಾಚಲ ಅವರು ಎರಡು ಆದೇಶಗಳನ್ನು ಹೊರಡಿಸಿದ್ದಾರೆ. ಕಳೆದ ವಾರ ದಿಲ್ಲಿ ಗಲಭೆಗಳಿಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣದಲ್ಲಿ ಆರೋಪಿಯನ್ನು ಬಿಡುಗಡೆಗೊಳಿಸಿದ್ದ ನ್ಯಾ.ಪ್ರಮಾಚಲ ಅವರು,ಪೊಲೀಸರು ಆತನ ವಿರುದ್ಧ ‘ಕೃತಕ ಹೇಳಿಕೆಗಳನ್ನು ’ ಸಲ್ಲಿಸಿದ್ದರು ಎಂದು ಬೆಟ್ಟು ಮಾಡಿದ್ದರು.

2020,ಫೆಬ್ರವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ಸಿಎಎ ಬೆಂಬಲಿಗರು ಮತ್ತು ವಿರೋಧಿಗಳ ನಡುವೆ ಘರ್ಷಣೆಗಳು ಭುಗಿಲೆದ್ದಿದ್ದವು. ಕನಿಷ್ಠ 53 ಜನರು ಕೊಲ್ಲಲ್ಪಟ್ಟಿದ್ದು,ನೂರಾರು ಜನರು ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಬಲಿಯಾದವರಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು.

ಸಾಹೀನ್ ಸೈಫಿ ಎಂಬ ವ್ಯಕ್ತಿಯ ಮನೆಗೆ ಬೆಂಕಿ ಹಚ್ಚಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿದ್ದು,ಪ್ರಕರಣವನ್ನು ಸ್ಥಾಪಿಸಲು ಅಗತ್ಯವಾಗಿರುವ ವೀಡಿಯೊವನ್ನು ವಿಧಿವಿಜ್ಞಾನ ವಿಭಾಗದಿಂದ ಇನ್ನಷ್ಟೇ ಸ್ವೀಕರಿಸಬೇಕಿದೆ ಎಂದು

ವಿಶೇಷ ಸರಕಾರಿ ಅಭಿಯೋಜಕರು ತಿಳಿಸಿದ್ದರು. ಆದರೆ ಅಂತಹ ಯಾವುದೇ ವೀಡಿಯೊ ಅಸ್ತಿತ್ವದಲ್ಲಿಲ್ಲ ಎನ್ನುವುದು ನಂತರ ಬೆಳಕಿಗೆ ಬಂದಿತ್ತು.

ಸರಕಾರಿ ಅಭಿಯೋಜಕರು ನ್ಯಾಯಾಲಯವನ್ನು ಮೂರ್ಖನನ್ನಾಗಿಸುತ್ತಿರುವುದು ದುರದೃಷ್ಟಕರ ಎಂದು ಹೇಳಿದ ನ್ಯಾ.ಪ್ರಮಾಚಲ,ಇದು ವೀಡಿಯೊವನ್ನು ಅವಲಂಬಿಸಿರುವುದರಿಂದ ಈ ಪ್ರಕರಣದ ಸಾಕ್ಷ್ಯವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಈ ಪ್ರಕರಣಕ್ಕಾಗಿ ವೀಡಿಯೊದ ಯಥಾಪ್ರತಿಯನ್ನು ಇನ್ನಷ್ಟೇ ಸಿದ್ಧಗೊಳಿಸಬೇಕಿದೆ ಮತ್ತು ಪಡೆದುಕೊಳ್ಳಬೇಕಿದೆ ಎನ್ನುವುದನ್ನು ಗಮನಿಸಿದರು.

ಪ್ರತ್ಯೇಕ ಪ್ರಕರಣದಲ್ಲಿ ನ್ಯಾಯಾಧೀಶರು ಸ್ಥಳ ಮತ್ತು ಸಮಯದ ಹೋಲಿಕೆಯಿಂದಾಗಿ ಆರು ಘಟನೆಗಳನ್ನು ಒಟ್ಟಿಗೆ ಸೇರಿಸಲಾಗಿದ್ದರೂ ಮೂರು ಪ್ರಕರಣಗಳಿಗಾಗಿ ಮಾತ್ರ ಸೈಟ್ ಪ್ಲಾನ್ ಸಿದ್ಧಗೊಳಿಸಿದ್ದಕ್ಕಾಗಿ ಪೊಲೀಸರನ್ನು ಟೀಕಿಸಿದರು.

ತನಿಖಾಧಿಕಾರಿಯು ಇಬ್ಬಗೆ ನಿಲುವುಗಳನ್ನು ಅನುಸರಿಸುತ್ತಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ ಎಂದು ಹೇಳಿದ ನ್ಯಾಯಾಲಯವು,ವಿಷಯವನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸುವಂತೆ ಡಿಸಿಪಿಗೆ ನಿರ್ದೇಶನ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X