Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿ ಕಡಿತದ ಬಳಿಕ ‘ರೈಲ್ ನೀರ್’...

ಜಿಎಸ್‌ಟಿ ಕಡಿತದ ಬಳಿಕ ‘ರೈಲ್ ನೀರ್’ ಬೆಲೆ ಇಳಿಕೆ ಮಾಡಿದ ಭಾರತೀಯ ರೈಲ್ವೆ

ವಾರ್ತಾಭಾರತಿವಾರ್ತಾಭಾರತಿ21 Sept 2025 7:51 PM IST
share
ಜಿಎಸ್‌ಟಿ ಕಡಿತದ ಬಳಿಕ ‘ರೈಲ್ ನೀರ್’ ಬೆಲೆ ಇಳಿಕೆ ಮಾಡಿದ ಭಾರತೀಯ ರೈಲ್ವೆ

ಹೊಸದಿಲ್ಲಿ, ಸೆ. 21: ರೈಲು ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಬಂದಿದೆ. ಕೇಂದ್ರ ಸರಕಾರ ಇತ್ತೀಚೆಗೆ ಜಿಎಸ್‌ಟಿ ದರ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ‘ರೈಲ್ ನೀರ್’ ಬಾಟಲಿ ನೀರಿನ ದರವನ್ನು ಕಡಿತಗೊಳಿಸಲಿದೆ.

ಭಾರತೀಯ ರೈಲ್ವೆ ತನ್ನ ಜನಪ್ರಿಯ ಪ್ಯಾಕ್ ಮಾಡಲಾದ ಕುಡಿಯುವ ನೀರಿನ ಬ್ರಾಂಡ್‌ನ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ)ಯನ್ನು ಇಳಿಕೆ ಮಾಡಲು ನಿರ್ಧರಿಸಿದೆ.

ಪ್ಯಾಕ್ ಮಾಡಲಾದ ಕುಡಿಯುವ ನೀರಿನ ಬಾಟಲಿ ‘ರೈಲ್ ನೀರ್’ನ ಗರಿಷ್ಠ ಚಿಲ್ಲರೆ ಬೆಲೆಯನ್ನು 1 ಲೀಟರ್ ಬಾಟಲಿಗೆ 15 ರೂ. ನಿಂದ 14 ರೂ.ಗೆ ಹಾಗೂ 500 ಎಂಎಲ್ ಬಾಟಲಿ ಬೆಲೆಯನ್ನು 10 ರೂ.ನಿಂದ 9ರೂ.ಗೆ ಪರಿಷ್ಕೃರಿಸಲಾಗುವುದು ಎಂದು ಐಆರ್‌ಟಿಸಿಯ ಎಲ್ಲಾ ಜನರಲ್ ಮ್ಯಾನೇಜರ್ ಹಾಗೂ ಸಿಎಂಡಿಗಳಿಗೆ 2025 ಸೆಪ್ಟಂಬರ್ 20ರ ಪತ್ರದಲ್ಲಿ ರೈಲ್ವೆ ಮಂಡಳಿ ತಿಳಿಸಿದೆ.

ಈ ಬದಲಾವಣೆ ‘ರೈಲ್ ನೀರ್’ಗೆ ಮಾತ್ರ ಸೀಮಿತವಾಗಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ‘‘ರೈಲ್ವೆ ಆವರಣ/ರೈಲುಗಳಲ್ಲಿ ಮಾರಾಟವಾಗುವ ಐಆರ್‌ಟಿಸಿ/ರೈಲ್ವೆ ಶಾರ್ಟ್ಲಿಸ್ಟ್ ಮಾಡಿದ ಇತರ ಬ್ರಾಂಡ್‌ಗಳ ಪ್ಯಾಕ್ ಮಾಡಲಾದ ಕುಡಿಯುವ ನೀರಿನ ಬಾಟಲಿಗಳ ಗರಿಷ್ಠ ಚಿಲ್ಲರೆ ಬೆಲೆಯನ್ನೂ ಕೂಡ 1 ಲೀಟರ್‌ನ ಬಾಟಲಿಗೆ 15 ರೂ.ನಿಂದ 14 ರೂ.ಗೆ ಹಾಗೂ 500 ಎಂಎಲ್ ಸಾಮರ್ಥ್ಯದ ಬಾಟಲಿಗೆ 10 ರೂ.ನಿಂದ 9 ರೂ.ಗೆ ಪರಿಷ್ಕರಿಸಲಾಗುತ್ತದೆ’’ ಎಂದು ಪತ್ರ ಹೇಳಿದೆ.

ಜಿಎಸ್‌ಟಿ ಕಡಿತದ ನೇರ ಪ್ರಯೋಜನವನ್ನು ಪ್ರಯಾಣಿಕರು ಪಡೆಯಲು ಈ ಬೆಲೆ ಕಡಿತ 2025 ಸೆಪ್ಟಂಬರ್ 22ರಿಂದ ಜಾರಿಗೆ ಬರಲಿದೆ. ತೆರಿಗೆ ವಿನಾಯತಿಯನ್ನು ವಿಳಂಬ ಮಾಡದೆ ಗ್ರಾಹಕರಿಗೆ ವರ್ಗಾಯಿಸುವ ಭಾರತೀಯ ರೈಲ್ವೆಯ ಪ್ರಯತ್ನ ಈ ನಿರ್ಧಾರದಲ್ಲಿ ಪ್ರತಿಬಿಂಬಿಸುತ್ತದೆ.

ಐಆರ್‌ಟಿಸಿ 2003ರಲ್ಲಿ ಆರಂಭಿಸಿದ ‘ರೈಲ್ ನೀರ್’ ಕೇವಲ ಬಾಟಲಿ ನೀರಿನ ಬ್ರಾಂಡ್ ಮಾತ್ರ ಅಲ್ಲ. ಅದು ಪ್ರಯಾಣಿಕರ ಸೌಲಭ್ಯವನ್ನು ಹೆಚ್ಚಿಸಲು ಹಾಗೂ ರೈಲಿನಲ್ಲಿ ಸುರಕ್ಷಿತ ಕುಡಿಯುವ ನೀರಿನ ಪೂರೈಕೆಯ ಖಾತರಿ ನೀಡಲು ರೂಪಿಸಲಾದ ಪ್ರಮುಖ ಉತ್ಪನ್ನವಾಗಿದೆ. ಮೊಟ್ಟ ಮೊದಲು ಪಶ್ಚಿಮಬಂಗಾಳದ ನಾಂಗ್ಲೋಯಿಯಲ್ಲಿ ‘ರೈಲ್ ನೀರ್’ ಘಟಕವನ್ನು ಸ್ಥಾಪಿಸಲಾಗಿತ್ತು. ಹೊಸದಿಲ್ಲಿ ಹಾಗೂ ನಿಝಾಮುದ್ದೀನ್‌ನಿಂದ ಆರಂಭವಾಗುವ ರಾಜಧಾನಿ ಹಾಗೂ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲಿಗೆ ನೀರು ಪೂರೈಕೆ ಮಾಡುವ ಉದ್ದೇಶದಿಂದ ಈ ಘಟಕ ಆರಂಭಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X