Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉನ್ನತ ನ್ಯಾಯಾಂಗದಲ್ಲಿ ಮಹಿಳೆಯರಿಗೆ...

ಉನ್ನತ ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ.33 ಕೋಟಾಕ್ಕೆ ಎಸ್‌ಸಿಬಿಎ ಮಾಜಿ ಅಧ್ಯಕ್ಷರ ಒತ್ತು

ಮಹಿಳಾ ಮೀಸಲಾತಿ ಮಸೂದೆಯ ಪಶ್ಚಾತ್ ಪರಿಣಾಮ

ವಾರ್ತಾಭಾರತಿವಾರ್ತಾಭಾರತಿ24 Sept 2023 10:52 PM IST
share
ಉನ್ನತ ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ.33  ಕೋಟಾಕ್ಕೆ ಎಸ್‌ಸಿಬಿಎ ಮಾಜಿ ಅಧ್ಯಕ್ಷರ ಒತ್ತು

ಹೊಸದಿಲ್ಲಿ, : ಸರ್ವೋಚ್ಚ ನ್ಯಾಯಾಲಯದ ವಕೀಲರ ಸಂಘ (ಎಸ್‌ಸಿಬಿಎ)ದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ವಿಕಾಸ ಸಿಂಗ್ ಅವರು ಭಾರತದ ಮುಖ್ಯ ನ್ಯಾಯಾಧೀಶ ಡಿ.ವೈ.ಚಂದ್ರಚೂಡ್ ಅವರಿಗೆ ಬರೆದಿರುವ ಪತ್ರದಲ್ಲಿ ಉನ್ನತ ನ್ಯಾಯಾಂಗಕ್ಕೆ ನ್ಯಾಯಾಧೀಶರ ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಕೋಟಾ ಒದಗಿಸುವ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.

ಪಟ್ನಾ,ಉತ್ತರಾಖಂಡ,ತ್ರಿಪುರಾ,ಮೇಘಾಲಯ ಮತ್ತು ಮಣಿಪುರ ಉಚ್ಚ ನ್ಯಾಯಾಲಯಗಳಲ್ಲಿ ಒಬ್ಬರೂ ಮಹಿಳಾ ನ್ಯಾಯಾಧೀಶರಿಲ್ಲ ಮತ್ತು ಉಳಿದ ಉಚ್ಚ ನ್ಯಾಯಾಲಯಗಳಲ್ಲಿ 670 ಪುರುಷ ನ್ಯಾಯಾಧೀಶರಿಗೆ ಪ್ರತಿಯಾಗಿ ಕೇವಲ 103 ಮಹಿಳಾ ನ್ಯಾಯಾಧೀಶರಿದ್ದಾರೆ ಎಂದು ಸಿಂಗ್ ತನ್ನ ಪತ್ರದಲ್ಲಿ ಬೆಟ್ಟು ಮಾಡಿದ್ದಾರೆ.

ದೇಶದಲ್ಲಿ ಒಟ್ಟು 25 ಉಚ್ಚ ನ್ಯಾಯಾಲಯಗಳಿವೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಒದಗಿಸಲು ಸಂಸತ್ತು ಇತ್ತೀಚಿಗೆ ಅಂಗೀಕರಿಸಿರುವ ಮಸೂದೆಯನ್ನು ಅವರು ಉಲ್ಲೇಖಿಸಿದ್ದಾರೆ.

ಶೇ.33ರಷ್ಟು ಹುದ್ದೆಗಳು ಮಹಿಳೆಯರಿಂದ ಭರ್ತಿಯಾಗುವಂತಾಗಲು ಉಚ್ಚ ನ್ಯಾಯಾಲಯಗಳು ಮತ್ತು ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಾಧೀಶರ ನೇಮಕಾತಿಗಳಿಗಾಗಿ ವಿಶ್ವಾಸಾರ್ಹ ವ್ಯವಸ್ಥೆಯೊಂದನ್ನು ತರುವಂತೆ ಅವರು ಮುಖ್ಯ ನ್ಯಾಯಾಧೀಶರನ್ನು ಆಗ್ರಹಿಸಿದ್ದಾರೆ.

ಸಂಸತ್ತು ಸಂವಿಧಾನಕ್ಕೆ ತಿದ್ದುಪಡಿಯನ್ನು ತರುವ ಮೂಲಕ ಶಾಸಕಾಂಗದಲ್ಲಿಯ ಅಸಮತೋಲನವನ್ನು ನಿವಾರಿಸಲು ಉಪಕ್ರಮವನ್ನು ಆರಂಭಿಸಿದೆ. ಇದು ತನ್ನದೇ ಆದ ನೇಮಕಾತಿ ವಿಧಾನವನ್ನು ನಿರ್ಧರಿಸುವ ನ್ಯಾಯಾಂಗಕ್ಕೆ ಮಹಿಳೆಯರಿಗೆ ಮೀಸಲಾತಿಯನ್ನು ಒದಗಿಸಲು ಸೂಕ್ತ ಸಮಯವಾಗಿದೆ ಎಂದು ಸಿಂಗ್ ತನ್ನ ಪತ್ರದಲ್ಲಿ ಹೇಳಿದ್ದಾರೆ.

ಅಂಕಿಅಂಶಗಳು ಉನ್ನತ ನ್ಯಾಯಾಂಗದಲ್ಲಿ ಮಹಿಳೆಯರ ಅಸಮರ್ಪಕ ಪ್ರಾತಿನಿಧ್ಯವನ್ನು ಸೂಚಿಸುತ್ತಿವೆ ಎಂದು ಹೇಳಿರುವ ಅವರು,ಸ್ವತಂತ್ರ ಭಾರತದ 76 ವರ್ಷಗಳ ಇತಿಹಾಸದಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ 270 ನ್ಯಾಯಾಧೀಶರಲ್ಲಿ ಕೇವಲ 11 ಮಹಿಳೆಯರಿದ್ದಾರೆ ಎನ್ನುವುದು ನಿರಾಶಾದಾಯಕವಾಗಿದೆ. ಇದು ಈವರೆಗಿನ ನೇಮಕಾತಿಗಳ ಕೇವಲ ಶೇ.4ರಷ್ಟಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X