Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. Fact Check: ದೆಹಲಿಯ ರಾಜೀವ್ ಗಾಂಧಿ...

Fact Check: ದೆಹಲಿಯ ರಾಜೀವ್ ಗಾಂಧಿ ಮೆಟ್ರೋ ನಿಲ್ದಾಣದಲ್ಲಿ ಮಗುವಿನ ಅಪಹರಣ ಎಂದು ಸ್ಕ್ರಿಪ್ಟೆಡ್ ವೀಡಿಯೊ ವೈರಲ್

newsmeter.innewsmeter.in27 March 2025 5:01 PM IST
share
Fact Check: ದೆಹಲಿಯ ರಾಜೀವ್ ಗಾಂಧಿ ಮೆಟ್ರೋ ನಿಲ್ದಾಣದಲ್ಲಿ ಮಗುವಿನ ಅಪಹರಣ ಎಂದು ಸ್ಕ್ರಿಪ್ಟೆಡ್ ವೀಡಿಯೊ ವೈರಲ್

Claim:ದೆಹಲಿಯ ರಾಜೀವ್ ಗಾಂಧಿ ಮೆಟ್ರೋ ನಿಲ್ದಾಣದಲ್ಲಿ ಮಗುವಿನ ಅಪಹರಣ.

Fact:ಈ ಮಾಹಿತಿ ತಪ್ಪಾಗಿದೆ. ವೈರಲ್ ಆದ ವೀಡಿಯೊವನ್ನು ಸ್ಕ್ರಿಪ್ಟ್ ಮಾಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಒಂದು ವೈರಲ್ ಆಗುತ್ತಿದ್ದು, ಇದರಲ್ಲಿ ಮೆಟ್ರೋ ನಿಲ್ದಾಣದಲ್ಲಿ ಮಗುವನ್ನು ಅಪಹರಿಸುತ್ತಿರುವುದನ್ನು ಕಾಣಬಹುದು. ಹಳದಿ ಹೂಡಿ ಧರಿಸಿದ ವ್ಯಕ್ತಿಯೊಬ್ಬ ಮೆಟ್ರೋ ನಿಲ್ದಾಣದಲ್ಲಿ ಮಗುವನ್ನು ಹಿಡಿದುಕೊಂಡು ಫೋನ್ ಮೂಲಕ ಮಾತಾಡುತ್ತಾ ಇರುತ್ತಾನೆ. ಇದೇವೇಳೆ ಹತ್ತಿರದಲ್ಲಿ ನಿಂತಿದ್ದ ಇಬ್ಬರು ಹುಡುಗರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳುವುದನ್ನು ಕಾಣಬಹುದು. ನಂತರ, ಈ ಹುಡುಗರಲ್ಲಿ ಒಬ್ಬ ಹಳದಿ ಹೂಡಿ ಧರಿಸಿದ ವ್ಯಕ್ತಿಯ ಬಳಿಗೆ ಹೋಗಿ ಅವನ ಫೋನ್ ತೋರಿಸಿ ಕೆಲವು ಪ್ರಶ್ನೆಗಳನ್ನು ಕೇಳುತ್ತಾನೆ. ಆಗ ಆತ ಕೈ ಹಿಡಿದುಕೊಂಡಿದ್ದ ಮಗುವಿನ ಕೈಯನ್ನು ಬಿಟ್ಟು ಆ ವ್ಯಕ್ತಿಗೆ ಕೈ ಸನ್ನೆ ಮೂಲಕ ದಾರಿ ತೋರಿಸಲು ಪ್ರಾರಂಭಿಸುತ್ತಾನೆ. ಅಷ್ಟರಲ್ಲಿ, ಹಿಂದೆ ನಿಂತಿದ್ದ ಇನ್ನೊಬ್ಬ ಹುಡುಗ ಮಗುವಿನ ಬಾಯಿಯ ಮೇಲೆ ಕೈ ಇಟ್ಟು, ಅವನನ್ನು ಎತ್ತಿಕೊಂಡು ಅಲ್ಲಿಂದ ಓಡಿಹೋಗುತ್ತಾನೆ.

ಫೇಸ್​ಬುಕ್ ಬಳಕೆದಾರರು ಈ ವೀಡಿಯೊವನ್ನು ಮಾರ್ಚ್ 26, 2025 ರಂದು ಹಂಚಿಕೊಂಡು, ‘‘ದೆಹಲಿಯ ರಾಜೀವ್ ಗಾಂಧಿ ಮೆಟ್ರೋ ನಿಲ್ದಾಣದಲ್ಲಿ ಸುತ್ತಮುತ್ತಲಿನ ಚಟುವಟಿಕೆಗಳನ್ನು ನಿರ್ಲಕ್ಷಿಸುತ್ತಾ ಮೊಬೈಲ್‌ನಲ್ಲಿ ಬ್ಯುಸಿಯಾಗಿರುವ ತಂದೆ. ಆ ಒಂದೇ ಕ್ಷಣದಲ್ಲಿ ಕೈ ಬಿಟ್ಟ ಮಗು ಕ್ಷಣಾರ್ಧದಲ್ಲಿ ಹೇಗೆ ಕಿಡ್ನಾಪ್ ಆಯಿತು ನೋಡಿ. *ಇದು ಒಂದು ರೀತಿಯ ಜಿಹಾದ್. ಚಿಕ್ಕ ಮಕ್ಕಳೊಂದಿಗೆ ಬೇಸಿಗೆ ರಜೆಗಳು ದೀರ್ಘ ಪ್ರವಾಸಗಳೊಂದಿಗೆ ಬಂದಿವೆ. ಪ್ರಯಾಣ ಮಾಡುವಾಗ, ತುಂಬಾ ಜಾಗರೂಕರಾಗಿರಿ ಮತ್ತು ಜಾಗರೂಕರಾಗಿರಿ’’ ಎಂದು ಬರೆದುಕೊಂಡಿದ್ದಾರೆ. (Archive)

ಇದೇರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ನ್ಯೂಸ್ ಮೀಟರ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಇದೊಂದು ಸ್ಕ್ರಿಪ್ಟ್ ಮಾಡಿದ ವೀಡಿಯೊ ಆಗಿದ್ದು, ಜಾಗೃತಿ ಉದ್ದೇಶಕ್ಕಾಗಿ ಮಾಡಲಾಗಿದೆ.

ನಿಜಾಂಶವನ್ನು ತಿಳಿಯಲು ನಾವು ವೈರಲ್ ವೀಡಿಯೊದ ಸ್ಕ್ರೀನ್ ಶಾಟ್ ತೆಗೆದುಕೊಂಡು ಗೂಗಲ್​ನಲ್ಲಿ ರಿವರ್ಸ್ ಇಮೇಜ್ ಮೂಲಕ ಸರ್ಚ್ ನಡೆಸಿದ್ದೇವೆ. ಆಗ ಮಾರ್ಚ್ 23, 2025 ರಂದು official_rajthakur__ ಹೆಸರಿನ ಇನ್​ಸ್ಟಾಗ್ರಾಮ್ ಪೇಜ್​ನಲ್ಲಿ ಅಪ್‌ಲೋಡ್ ಮಾಡಲಾದ ಅದೇ ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ. ಅದರ ಜೊತೆಗೆ ‘‘ದೆಹಲಿ ರಾಜೀವ್ ಚೌಕ್​ನಲ್ಲಿ ಮಗುವಿನ ಕಳ್ಳತನವಾಗಿದೆ’’ ಎಂಬ ಶೀರ್ಷಿಕೆ ನೀಡಲಾಗಿದೆ. ಜೊತೆಗೆ ಕೇಳಗಡೆ ‘‘ಈ ವೀಡಿಯೊವನ್ನು ಸಂಪೂರ್ಣವಾಗಿ ಸ್ಕ್ರಿಪ್ಟ್ ಮಾಡಲಾಗಿದೆ. ಇದು ನಿಜವಲ್ಲ, ಎಲ್ಲಾ ವಿಷಯವು ಮನರಂಜನೆ ಮತ್ತು ಜಾಗೃತಿಗಾಗಿ ಮಾತ್ರ’’ ಎಂದು ಬರೆಯಲಾಗಿದೆ.

ಹಾಗೆ ಇದೇ ಇನ್​ಸ್ಟಾಗ್ರಾಮ್ ಪೇಜ್​ನಲ್ಲಿ ಮೆಟ್ರೋದ ಒಳಗಡೆ ಅದೇ ಹುಡುಗ ಅದೇ ಮಗುವನ್ನು ಅಪಹರಿಸುವ ಮತ್ತೊಂದು ವೀಡಿಯೊ ಕೂಡ ನಮಗೆ ಕಂಡುಬಂತು. ಇದನ್ನು ಕೂಡ ಮಾರ್ಚ್ 23, 2025 ರಂದು ಅಪ್ಲೋಡ್ ಮಾಡಲಾಗಿದೆ. ವೈರಲ್ ವೀಡಿಯೊದಲ್ಲಿ ಅಪಹರಿಸಲ್ಪಟ್ಟಿದ್ದ ಮಗುವನ್ನು ಇಲ್ಲಿಯೂ ಅಪಹರಿಸಲಾಗುತ್ತಿದೆ. ಈ ವೀಡಿಯೊದ ಶೀರ್ಷಿಕೆಯಲ್ಲಿ ಕೂಡ ಇದು ಸ್ಕ್ರಿಪ್ಟ್ ಮಾಡಲಾದ ವೀಡಿಯೊ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಈ ಪುಟದಲ್ಲಿ ಇಂತಹ ಇನ್ನೂ ಹಲವು ವೀಡಿಯೊಗಳಿದ್ದು, ಎಲ್ಲದರ ವಿವರಣೆಯಲ್ಲೂ ಇದು ಸ್ಕ್ರಿಪ್ಟ್ ಮಾಡಲಾಗಿದೆ ಎಂದು ಬರೆಯಲಾಗಿದೆ. ಈ ಇನ್‌ಸ್ಟಾಗ್ರಾಮ್ ಖಾತೆಯ ಬಯೋ ಪ್ರಕಾರ, ರಾಜ್ ಠಾಕೂರ್ ದೆಹಲಿಯಲ್ಲಿ ನೆಲೆಸಿರುವ ಕಂಟೆಂಟ್ ಕ್ರಿಯೇಟರ್. ಅವರ ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಕೂಡ ಇದೇ ರೀತಿಯ ಸ್ಕ್ರಿಪ್ಟ್ ಮಾಡಿದ ಹಲವು ವೀಡಿಯೊಗಳಿವೆ. ಮಾರ್ಚ್ 19 ರಂದು ರಾಜ್ ಠಾಕೂರ್ ಅವರ ಫೇಸ್‌ಬುಕ್ ಪುಟದಲ್ಲಿ ಹಾಗೂ ಯೂಟ್ಯೂಬ್ ಖಾತೆಯಲ್ಲಿ ಕೂಡ ಇದೇ ವೈರಲ್ ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಮಕ್ಕಳ ಅಪಹರಣದ ಈ ವೀಡಿಯೊ ನಿಜವಾದ ಘಟನೆಯಲ್ಲ, ಬದಲಿಗೆ ಜಾಗೃತಿ ಉದ್ದೇಶಕ್ಕಾಗಿ ರಚಿಸಲಾದ ಸ್ಕ್ರಿಪ್ಟ್ ಮಾಡಿದ ಕ್ಲಿಪ್ ಎಂದು ನಾವು ಖಚಿತವಾಗಿ ಹೇಳುತ್ತೇವೆ.

Claim Review:ದೆಹಲಿಯ ರಾಜೀವ್ ಗಾಂಧಿ ಮೆಟ್ರೋ ನಿಲ್ದಾಣದಲ್ಲಿ ಮಗುವಿನ ಅಪಹರಣ.

Claimed By:Facebook User

Claim Reviewed By:NewsMeter

Claim Source:Social Media

Claim Fact Check:False

Fact:ಈ ಮಾಹಿತಿ ತಪ್ಪಾಗಿದೆ. ವೈರಲ್ ಆದ ವೀಡಿಯೊವನ್ನು ಸ್ಕ್ರಿಪ್ಟ್ ಮಾಡಲಾಗಿದೆ.

ಈ ಲೇಖನವನ್ನು ಮೊದಲು 'newsmeter.in' ಪ್ರಕಟಿಸಿದೆ. ʼಶಕ್ತಿ ಕಲೆಕ್ಟಿವ್‌ʼನ ಭಾಗವಾಗಿ ವಾರ್ತಾ ಭಾರತಿ ಪ್ರಕಟಿಸಿದೆ.

share
newsmeter.in
newsmeter.in
Next Story
X