Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರೀಯ ವೃತ್ತಿ ಸೇವೆ ಪೋರ್ಟಲ್ ನ...

ರಾಷ್ಟ್ರೀಯ ವೃತ್ತಿ ಸೇವೆ ಪೋರ್ಟಲ್ ನ ಎರಡನೇ ಆವೃತ್ತಿಗೆ 2024ರಲ್ಲಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ30 Dec 2023 10:19 PM IST
share

ಹೊಸದಿಲ್ಲಿ: ಸರಕಾರವು 2024ರಲ್ಲಿ ರಾಷ್ಟ್ರೀಯ ವೃತ್ತಿ ಸೇವೆ (ಎನ್ಸಿಎಸ್) ಪೋರ್ಟಲ್ ನ ಎರಡನೇ ಆವೃತ್ತಿಗೆ ಚಾಲನೆ ನೀಡಲಿದೆ ಹಾಗೂ ವ್ಯವಹಾರ ಸುಗಮತೆಯನ್ನು ಇನ್ನಷ್ಟು ಹೆಚ್ಚಿಸುವ ಮತ್ತು ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಪ್ರಯತ್ನಗಳ ಅಂಗವಾಗಿ ಕಾರ್ಮಿಕ ಸುಧಾರಣೆಗಳನ್ನು ಜಾರಿಗೊಳಿಸುವಂತೆ ರಾಜ್ಯಗಳ ಮನವೊಲಿಸಲಿದೆ.

ಶನಿವಾರ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ ಅವರು, ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಹುಡುಕಾಟವನ್ನು ಸುಲಭಗೊಳಿಸಲು ಶೀಘ್ರವೇ ಎನ್ಸಿಎಸ್ 2.0 ನೂತನ ಆವೃತ್ತಿಗೆ ಚಾಲನೆ ನೀಡಲಾಗುವುದು ಮತ್ತು ಇತ್ತೀಚಿನ ತಂತ್ರಜ್ಞಾನಗಳು ಹಾಗೂ ಕೃತಕ ಬುದ್ಧಿಮತ್ತೆ ಮತ್ತು ಮಷಿನ್ ಲರ್ನಿಂಗ್ ಬಳಸಿಕೊಂಡು ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ʼರೆಕಮಂಡೇಷನ್ ಇಂಜಿನ್ʼ ಸೌಲಭ್ಯವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಡಿಜಿಟಲ್ ವೇದಿಕೆಯ ಮೂಲಕ ವೃತ್ತಿ ಸಲಹೆ, ವೃತ್ತಿಪರ ಮಾರ್ಗದರ್ಶನ, ಕೌಶಲ್ಯಾಭಿವೃದ್ಧಿ ಕೋರ್ಸ್ಗಳು, ಅಪ್ರೆಂಟಿಸ್ಶಿಪ್ ಮತ್ತು ಇಂಟರ್ನ್ಶಿಪ್ ಗಳ ಕುರಿತು ಮಾಹಿತಿ ಸೇರಿದಂತೆ ವಿವಿಧ ಉದ್ಯೋಗ ಸಂಬಂಧಿ ಸೇವೆಗಳನ್ನು ಒದಗಿಸಲು ಎನ್ಎಸ್ಸಿ ಯೋಜನೆಯನ್ನು ಜುಲೈ, 2015ರಲ್ಲಿ ಆರಂಭಿಸಲಾಗಿತ್ತು.

ಈ ವರ್ಷದ ನ.30ಕ್ಕೆ ಇದ್ದಂತೆ ಎನ್ಸಿಎಸ್ ಪೋರ್ಟಲ್ 3.64 ಕೋ.ಗೂ ಅಧಿಕ ಉದ್ಯೋಗಾಕಾಂಕ್ಷಿಗಳು,19.15 ಲಕ್ಷ ಉದ್ಯೋಗದಾತರು ಮತ್ತು 1.92 ಕೋಟಿ ಗೂ ಅಧಿಕ ಖಾಲಿಹುದ್ದೆಗಳ ಪಟ್ಟಿಗಳನ್ನು ಹೊಂದಿತ್ತು. ಪೋರ್ಟಲ್ ನವಂಬರ್ ನಲ್ಲಿ 13.49 ಲಕ್ಷಕ್ಕೂ ಅಧಿಕ ಸಕ್ರಿಯ ಖಾಲಿ ಹುದ್ದೆಗಳನ್ನು ನೋಂದಾಯಿಸಿಕೊಂಡಿದೆ.

ಸಮಗ್ರ ಪಾನ್ ಇಂಡಿಯಾ ನೆಟ್ವರ್ಕ್ ಅನ್ನು ಅಭಿವೃದ್ಧಿಗೊಳಿಸಲು ಪೋರ್ಟಲ್ ಅನ್ನು 28 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಸೌಲಭ್ಯಗಳೊಂದಿಗೆ ಏಕೀಕರಿಸಲಾಗಿದೆ. ಮಾನ್ಸ್ಟರ್ ಡಾಟ್ ಕಾಮ್, ಫ್ರೆಷರ್ಸ್ವರ್ಲ್ಡ್ ಮತ್ತು ಹೈರ್ಮೀನಂತಹ ವಿವಿಧ ಖಾಸಗಿ ಪೋರ್ಟಲ್ ಗಳೊಂದಿಗೂ ಅದನ್ನು ಸಂಯೋಜಿಲಾಗಿದೆ.

ಎನ್ಸಿಎಸ್ ಪೋರ್ಟಲ್ ಸರಕಾರದ ಸ್ಕಿಲ್ ಇಂಡಿಯಾ ಪೋರ್ಟಲ್, ಉದ್ಯಮ ಪೋರ್ಟಲ್ (ಎಂಎಸ್ಎಂಇ),ಇ-ಶ್ರಮ,ಇಪಿಎಫ್ಒ, ಇಎಸ್ಐಸಿ ಮತ್ತು ಡಿಜಿಲಾಕರ್ ಇತ್ಯಾದಿಗಳೊಂದಿಗೂ ಸಂಪರ್ಕವನ್ನು ಹೊಂದಿದೆ.

ಕಾರ್ಮಿಕ ಸುಧಾರಣೆಗಳಿಗೆ ಸಂಬಂಧಿಸಿದಂತೆ ಸಚಿವ ಯಾದವ ಅವರು, 2024ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಡಿ ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗುವ ನಿಟ್ಟಿನಲ್ಲಿ ಭಾರತದ ಪಯಣವು ಮುಂದುವರಿಯಲಿದೆ,ಹೀಗಾಗಿ ಕೇಂದ್ರವು ಪರಿಚಯಿಸಿರುವ ಕಾರ್ಮಿಕ ಸುಧಾರಣೆಗಳನ್ನು ರಾಜ್ಯಗಳು ಜಾರಿಗೊಳಿಸುತ್ತವೆ ಎಂದು ಆಶಿಸಿದ್ದೇನೆ. ಇದರಿಂದಾಗಿ ಅಮೃತ ಕಾಲದ ಭಾರತವು ದೇಶದ ಬೆಳವಣಿಗೆಗೆ ಕೊಡುಗೆಯನ್ನು ನೀಡುವ ಮತ್ತು ಇದೇ ವೇಳೆ ಅದರಿಂದ ಲಾಭವನ್ನು ಪಡೆದುಕೊಳ್ಳುವ ಆರೋಗ್ಯಕರ ಮತ್ತು ಸಾಮಾಜಿಕವಾಗಿ ಸುಭದ್ರ ಕಾರ್ಯಪಡೆಯನ್ನು ಹೊಂದಲು ಸಾಧ್ಯವಾಗುತ್ತದೆ ಮತ್ತು ದೇಶದಲ್ಲಿ ವ್ಯವಹಾರ ಸುಗಮತೆಯನ್ನು ದೃಢಪಡಿಸುವುದನ್ನು ನಾವು ಮುಂದುವರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X