Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ನಿಯ ಕಿರುಕುಳ ಆರೋಪ: ಆ್ಯನಿಮೇಷನ್...

ಪತ್ನಿಯ ಕಿರುಕುಳ ಆರೋಪ: ಆ್ಯನಿಮೇಷನ್ ನಿರ್ಮಾಣ ಸಂಸ್ಥೆಯ ಹಿರಿಯ ಅಧಿಕಾರಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ7 March 2025 8:57 PM IST
share
ಪತ್ನಿಯ ಕಿರುಕುಳ ಆರೋಪ: ಆ್ಯನಿಮೇಷನ್ ನಿರ್ಮಾಣ ಸಂಸ್ಥೆಯ ಹಿರಿಯ ಅಧಿಕಾರಿ ಆತ್ಮಹತ್ಯೆ

ಮುಂಬೈ: ಆ್ಯನಿಮೇಷನ್ ಮತ್ತು ಕಂಟೆಂಟ್ ಪ್ರಾಡಕ್ಷನ್ ಕಂಪನಿಯ ಹಿರಿಯ ಅಧಿಕಾರಿಯೋರ್ವರು ಇಲ್ಲಿಯ ವಿಲೆಪಾರ್ಲೆಯಲ್ಲಿನ ಹೋಟೆಲ್‌ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತನ್ನ ಪತ್ನಿ ಮತ್ತು ಆಕೆಯ ಸೋದರತ್ತೆಯ ಕಿರುಕುಳ ತನ್ನ ಆತ್ಮಹತ್ಯೆಗೆ ಕಾರಣ ಎಂದು ಕಂಪನಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿರುವ ಟಿಪ್ಪಣಿಯಲ್ಲಿ ಅವರು ದೂರಿದ್ದಾರೆ.

ವರ್ಸೋವಾ ನಿವಾಸಿ ನಿಶಾಂತ ತ್ರಿಪಾಠಿ(41) ಮೃತವ್ಯಕ್ತಿಯಾಗಿದ್ದು,ಕೆಲವು ದಿನಗಳ ಹಿಂದೆ ಮನೆಯನ್ನು ತೊರೆದು ಹೋಟೆಲ್‌ನಲ್ಲಿ ವಾಸವಾಗಿದ್ದರು. ಪತ್ನಿ ಅಪೂರ್ವಾ ಪಾರೀಕ್ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಅವರು ಮನೆಯನ್ನು ತೊರೆದಿದ್ದರು ಎನ್ನಲಾಗಿದೆ.

ತನ್ನ ಪತ್ನಿಯನ್ನುದ್ದೇಶಿಸಿ ಬರೆದಿರುವ ಟಿಪ್ಪಣಿಯಲ್ಲಿ ತ್ರಿಪಾಠಿ,‘ನೀನು ಇದನ್ನು ಓದುವಾಗ ನಾನು ಹೋಗಿರುತ್ತೇನೆ. ನನ್ನ ಬದುಕಿನ ಕೊನೆಯ ಕ್ಷಣಗಳಲ್ಲಿ ಆಗಿರುವ ಎಲ್ಲದಕ್ಕೂ ನಾನು ನಿನ್ನನ್ನು ದ್ವೇಷಿಸಬಹುದಿತ್ತು. ಆದರೆ ನಾನು ಈ ಕ್ಷಣಕ್ಕಾಗಿ ಪ್ರೀತಿಯನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ಆಗಲೂ ನಾನು ನಿನ್ನನ್ನು ಪ್ರೀತಿಸಿದ್ದೆ, ಈಗಲೂ ಪ್ರೀತಿಸುತ್ತಿದ್ದೇನೆ ಮತ್ತು ನಾನು ಭರವಸೆ ನೀಡಿದ್ದಂತೆ ನನ್ನ ಪ್ರೀತಿ ಎಂದಿಗೂ ಮಾಸುವುದಿಲ್ಲ’ ಎಂದು ಹೇಳಿದ್ದಾರೆ.

‘ನಾನು ಎದುರಿಸಿದ್ದ ಎಲ್ಲ ಕಷ್ಟಗಳ ನಡುವೆ ನೀನು ಮತ್ತು ಪ್ರಾರ್ಥನಾ ಮೌಸಿ ನನ್ನ ಸಾವಿಗೆ ಕಾರಣ ಎನ್ನುವುದು ನನ್ನ ತಾಯಿಗೆ ಅರ್ಥವಾಗಿರುತ್ತದೆ. ಹೀಗಾಗಿ ಈಗ ಅವರನ್ನು ಭೇಟಿಯಾಗದಂತೆ ನಾನು ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಅವರು ಸಾಕಷ್ಟು ಜರ್ಜರಿತರಾಗಿದ್ದಾರೆ, ಅವರು ಶಾಂತಿಯಿಂದ ದುಃಖಿಸಲು ಬಿಡು ’ಎಂದೂ ತ್ರಿಪಾಠಿ ಬರೆದಿದ್ದಾರೆ.

ತ್ರಿಪಾಠಿ ತನ್ನ ತಾಯಿ, ಸೋದರ ಮತ್ತು ಸೋದರಿಗೂ ಸಂದೇಶವೊಂದನ್ನು ಬರೆದಿದ್ದಾರೆ. ಆತ್ಮಹತ್ಯೆ ಪತ್ರದ ಕೊನೆಯಲ್ಲಿ ಅವರು ತನ್ನ ಪತ್ನಿಯ ಮೇಲಿನ ತನ್ನ ಪ್ರೀತಿಯನ್ನು ವ್ಯಕ್ತಪಡಿಸಿ ಕವನವೊಂದನ್ನೂ ಬರೆದಿದ್ದಾರೆ.

ಫೆ.28ರಂದು ಆತ್ಮಹತ್ಯೆ ಮಾಡಿಕೊಳ್ಳುವ ಮೂರು ದಿನ ಮೊದಲು ಅವರು ವಿಲೆಪಾರ್ಲೆಯ ಸಹಾರಾ ಹೋಟೆಲ್‌ಗೆ ತೆರಳಿದ್ದರು. ನೇಣಿಗೆ ಶರಣಾಗುವ ಮುನ್ನ ಕೋಣೆಯ ಬಾಗಿಲಿಗೆ ‘ಡು ನಾಟ್ ಡಿಸ್ಟರ್ಬ್’ ಎಂಬ ಸೂಚನೆಯನ್ನು ಅಂಟಿಸಿದ್ದರು.

ತ್ರಿಪಾಠಿ ಕರೆಗಳಿಗೆ ಉತ್ತರಿಸದಿದ್ದಾಗ ಹೋಟೆಲ್ ಸಿಬ್ಬಂದಿಗಳು ಮಾಸ್ಟರ್ ಕೀ ಬಳಸಿ ಕೋಣೆಯ ಬಾಗಿಲು ತೆರೆದಾಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿತ್ತು.

ತನಿಖೆ ಸಂದರ್ಭದಲ್ಲಿ ಪೋಲಿಸರು ಅವರ ಕಂಪನಿಯ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ್ದ ಟಿಪ್ಪಣಿಯನ್ನು ಪತ್ತೆ ಹಚ್ಚಿದ್ದಾರೆ.

ತ್ರಿಪಾಠಿಯ ತಾಯಿ,ಉತ್ತರ ಪ್ರದೇಶದ ಕಾನ್ಪುರ ನಿವಾಸಿ ನೀಲಂ ದೂರಿನ ಮೇರೆಗೆ ಪತ್ನಿ ಅಪೂರ್ವಾ ಪಾರೀಕ್ ಮತ್ತು ಆಕೆಯ ಸೋದರತ್ತೆ ಪ್ರಾರ್ಥನಾ ಮಿಶ್ರಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X