Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಐ ತಂಡ ಕಿರುಕುಳ ನೀಡುತ್ತಿದ್ದು,...

ಸಿಬಿಐ ತಂಡ ಕಿರುಕುಳ ನೀಡುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಒಡಿಶಾದ ಹಿರಿಯ ಐಎಎಸ್ ಅಧಿಕಾರಿ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ18 Feb 2025 10:18 PM IST
share
ಸಿಬಿಐ ತಂಡ ಕಿರುಕುಳ ನೀಡುತ್ತಿದ್ದು, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಒಡಿಶಾದ ಹಿರಿಯ ಐಎಎಸ್ ಅಧಿಕಾರಿ ಬೆದರಿಕೆ

ಭುವನೇಶ್ವರ: ಮಂಗಳವಾರ ತಮ್ಮ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದ ಸಿಬಿಐ ತಂಡದೊಂದಿಗೆ ಬಿಸಿಬಿಸಿ ಮಾತಿನ ಚಕಮಕಿ ನಡೆಸಿದ ಹಿರಿಯ ಐಎಎಸ್ ಅಧಿಕಾರಿ ಬಿಷ್ಣುಪಾದ ಸೇಠಿ, ನನ್ನ ಹೆಸರು ಹಾಗೂ ವರ್ಚಸ್ಸಿಗೆ ಹಾನಿಯಾಗಿರುವುದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

10 ಲಕ್ಷ ರೂ. ಲಂಚ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ತಂಡ ಬಿಷ್ಣುಪಾದ ಸೇಠಿಯ ಅಧಿಕೃತ ನಿವಾಸಕ್ಕೆ ತಲುಪಿತು.

ನಾನು ಈ ಪ್ರಕರಣದಲ್ಲಿ ಅಮಾಯಕನಾಗಿದ್ದರೂ, ಯಾರೂ ನನ್ನ ಮಾತನ್ನು ಕೇಳಿಸಿಕೊಳ್ಳದೆ ಇರುವುದರಿಂದ ನಾನು ಅಸಹಾಯಕನಾಗಿದ್ದೇನೆ. ಹೀಗಾಗಿ, ನಾನು ನನ್ನ ಜೀವವನ್ನು ಅಂತ್ಯಗೊಳಿಸಿಕೊಳ್ಳುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ಬೆದರಿಕೆ ಒಡ್ಡಿದರು.

“ನಾನು ರಾಜೀನಾಮೆ ಸಲ್ಲಿಸಲು ಸಿದ್ಧನಿದ್ದು, ಕಿರುಕುಳದ ಹಿನ್ನೆಲೆಯಲ್ಲಿ ನಾನು ಆತ್ಮಹತ್ಯೆಯನ್ನೂ ಮಾಡಿಕೊಳ್ಳಬಹುದು” ಎಂದು ತಮ್ಮ ನಿವಾಸದೆದುರು ನೆರೆದಿದ್ದ ಸುದ್ದಿಗಾರರನ್ನುದ್ದೇಶಿಸಿ ಬಿಷ್ಣುಪಾದ ಸೇಠಿ ಹೇಳಿದರು. ಈ ವೇಳೆ ಸಿಬಿಐ ಅಧಿಕಾರಿಗಳೂ ಉಪಸ್ಥಿತರಿದ್ದರು.

ಸಿಬಿಐ ತಂಡ ನನ್ನ ಮೊಬೈಲ್ ಫೋನ್ ಅನ್ನು ಕಸಿದುಕೊಂಡು ಹೋಗಿದೆ ಹಾಗೂ ಬಾಲಸೋರ್ ಜಿಲ್ಲೆಯಲ್ಲಿರುವ ನನ್ನ ಸ್ವಗ್ರಾಮದಲ್ಲೂ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅವರು ಆರೋಪಿಸಿದರು. “ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಅವರು ಸ್ಥಳೀಯ ಪೊಲೀಸರನ್ನು ಕರೆ ತಂದಿರಲಿಲ್ಲ” ಎಂದೂ ಅವರು ದೂರಿದರು.

ನಾನು ದಲಿತನಾಗಿರುವುದರಿಂದ ನನ್ನನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದು 1995ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ವಿಷ್ಣುಪಾದ ಸೇಠಿ ಆರೋಪಿಸಿದರು.

ಕೇಂದ್ರ ಸರಕಾರಿ ಸಂಸ್ಥೆಯಾದ ಬ್ರಿಡ್ಜ್ ಆ್ಯಂಡ್ ರೂಫ್ ಕಂಪನಿ (ಇಂಡಿಯಾ) ಲಿಮಿಟೆಡ್ ನೊಂದಿಗಾಗಲಿ ಅಥವಾ ಅದರ ಸಮೂಹ ಪ್ರಧಾನ ವ್ಯವಸ್ಥಾಪಕ ಚಂಚಲ್ ಮುಖರ್ಜಿಯೊಂದಿಗಾಗಲಿ ನನಗೆ ಯಾವುದೇ ಸಂಪರ್ಕವಿಲ್ಲ ಎಂದು ಸೇಠಿ ಪ್ರತಿಪಾದಿಸಿದರು. ಲಂಚ ಪ್ರಕರಣದಲ್ಲಿ ಚಂಚಲ್ ಮುಖರ್ಜಿ ಕಳೆದ ವರ್ಷ ಬಂಧನಕ್ಕೀಡಾಗಿದ್ದರು.

ಭುವನೇಶ್ವರ ಮೂಲದ ಪೆಂಟಾ ಎ ಸ್ಟುಡಿಯೊ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕ ಸಂತೋಷ್ ಮೊಹರಾನರಿಂದ ಲಂಚ ಸ್ವೀಕರಿಸಿದ ಆರೋಪದ ಮೇಲೆ ಡಿಸೆಂಬರ್ 7ರಂದು ಚಂಚಲ್ ಮುಖರ್ಜಿ ಹಾಗೂ ಮಧ್ಯಸವರ್ತಿ ದೇಬದತ್ತ ಮೊಹಾಪಾತ್ರರನ್ನು ಸಿಬಿಐ ಬಂಧಿಸಿತ್ತು. ಅವರೊಂದಿಗೆ ಮತ್ತೋರ್ವ ವ್ಯಕ್ತಿಯನ್ನೂ ಈ ಸಂಬಂಧ ಬಂಧಿಸಲಾಗಿತ್ತು.

ಈ ಮೂವರ ಬಂಧನದ ನಂತರ, ತನ್ನೆದುರು ಹಾಜರಾಗುವಂತೆ ಡಿಸೆಂಬರ್ 10ರಂದು ವಿಷ್ಣುಪಾದ ಸೇಠಿಗೆ ಸಿಬಿಐ ನೋಟಿಸ್ ಜಾರಿಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X