Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಜಾಗ್ರತಾ ವಶಕ್ಕೆ ಪ್ರಾಧಿಕಾರಗಳು...

ಮುಂಜಾಗ್ರತಾ ವಶಕ್ಕೆ ಪ್ರಾಧಿಕಾರಗಳು ಪ್ರತ್ಯೇಕ ಆಧಾರಗಳನ್ನು ತಿಳಿಸಬೇಕು: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ6 March 2025 2:05 PM IST
share
ಮುಂಜಾಗ್ರತಾ ವಶಕ್ಕೆ ಪ್ರಾಧಿಕಾರಗಳು ಪ್ರತ್ಯೇಕ ಆಧಾರಗಳನ್ನು ತಿಳಿಸಬೇಕು: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮುಂಜಾಗ್ರತಾ ವಶ ಆದೇಶಗಳು ವಶಕ್ಕೆ ಪಡೆಯುವ ಪ್ರಾಧಿಕಾರಗಳ ಸ್ವತಂತ್ರ ವಿವೇಚನಾಧಿಕಾರವನ್ನು ಪ್ರತಿಫಲಿಸಬೇಕೇ ಹೊರತು, ತಮ್ಮ ಎದುರು ಮಂಡಿಸಲಾದ ವಿಷಯಗಳ ಕಾಟಾಚಾರದ ಉಲ್ಲೇಖಗಳಾಗಬಾರದು ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

“ಪ್ರಸ್ತಾವನೆಗಳು ಹಾಗೂ ಅದಕ್ಕೆ ಪೂರಕವಾದ ದಾಖಲೆಗಳು ಸಮಾಧಾನಕರವಾಗಿವೆ” ಎಂಬ ಹೇಳಿಕೆಯೊಂದೇ ಮುಂಜಾಗ್ರತಾ ವಶ ಆದೇಶಗಳಿಗೆ ಸಾಕಾಗುವುದಿಲ್ಲ ಹಾಗೂ ಅವು ಸಾಂವಿಧಾನಿಕ ಮತ್ತು ಶಾಸನಾತ್ಮಕ ಅಗತ್ಯತೆಗಳನ್ನು ಪೂರೈಸುವುದಿಲ್ಲ” ಎಂದು ನ್ಯಾ. ಸಂಜಯ್ ಕುಮಾರ್ ಹಾಗೂ ನ್ಯಾ. ಆಗಸ್ಟಿನ್ ಜಾರ್ಜ್ ಮಾಸಿಹ್ ಅವನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ನಾಗಾಲ್ಯಾಂಡ್ ನ ಗೃಹ ಇಲಾಖೆಯ ವಿಶೇಷ ಕಾರ್ಯದರ್ಶಿಗಳು ತಮ್ಮ ವಿರುದ್ಧ ಹೊರಡಿಸಿದ್ದ ಮುಂಜಾಗ್ರತಾ ವಶ ಆದೇಶಗಳನ್ನು ಪ್ರಶ್ನಿಸಿ ಇಬ್ಬರು ಮೇಲ್ಮನವಿದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅವರ ವಿರುದ್ಧ ಜಾರಿಗೊಳಿಸಲಾಗಿದ್ದ ಮುಂಜಾಗ್ರತಾ ಆದೇಶಗಳನ್ನು ರದ್ದುಗೊಳಿಸಿತು. ವಶಕ್ಕೆ ಪಡೆಯುವ ಪ್ರಾಧಿಕಾರಗಳು ಅರ್ಜಿದಾರರನ್ನು ವಶಕ್ಕೆ ಪಡೆಯಲು ಯಾವುದೇ ಸ್ವತಂತ್ರ ಆಧಾರಗಳನ್ನು ಒದಗಿಸಿಲ್ಲ ಹಾಗೂ ಕೇವಲ ಪೊಲೀಸರು ಮಂಡಿಸಿರುವ ಪ್ರಸ್ತಾವನೆಯನ್ನು ಆಧರಿಸಿ ವಶಕ್ಕೆ ಪಡೆದಿವೆ. ಈ ಧೋರಣೆ ಕಾನೂನಾತ್ಮಕವಾಗಿ ಸಮರ್ಥನೀಯವಲ್ಲ ಎಂಬ ಸಂಗತಿಯನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿತು.

ಮಾದಕ ದ್ರವ್ಯಗಳು ಹಾಗೂ ಸಮ್ಮೋಹನ ವಸ್ತುಗಳ ಅಕ್ರಮ ಸಾಗಾಟ ನಿಷೇಧ ಕಾಯ್ದೆ, 1988ರ ಅಡಿ ಹೊರಡಿಸಲಾಗಿದ್ದ ಮುಂಜಾಗ್ರತಾ ವಶದ ಆದೇಶಗಳು ಸೂಕ್ತ ಕಾರಣಗಳ ಆಧಾರವನ್ನು ಹೊಂದಿಲ್ಲ ಹಾಗೂ ಅವುಗಳನ್ನು ಯಾಂತ್ರಿಕವಾಗಿ ಹೊರಡಿಸಲಾಗಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯನ್ನು ಆಧರಿಸಿ ಈ ತೀರ್ಪು ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X