Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ...

ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ವಿಧೇಯಕಗಳ ಚರ್ಚೆಗೆ ಅಲ್ಪಾವಧಿಯ ನೋಟಿಸ್; ಪ್ರತಿಪಕ್ಷ ಸಂಸದರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ20 Aug 2023 10:05 PM IST
share
ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ವಿಧೇಯಕಗಳ ಚರ್ಚೆಗೆ ಅಲ್ಪಾವಧಿಯ ನೋಟಿಸ್; ಪ್ರತಿಪಕ್ಷ ಸಂಸದರಿಂದ ಪ್ರತಿಭಟನೆ

ಹೊಸದಿಲ್ಲಿ: ಮುಂಗಾರು ಅದಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಲಾದ ಭಾರತೀಯ ನ್ಯಾಯಸಂಹಿತಾ ವಿಧೇಯಕ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ವಿಧೇಯಕ 2023 ಹಾಗೂ ಭಾರತೀಯ ಸಾಕ್ಷ್ಯ ವಿಧೇಯಕ 2023 ಬಗ್ಗೆ ಚರ್ಚಿಸಲು ತಮಗೆ ಅಲ್ಪಾವಧಿಯ ನೋಟಿಸ್ ನೀಡಿದ್ದನ್ನು ಸಂಸದೀಯ ವ್ಯವಹಾರಗಳ ಸಮಿತಿಯ ಕನಿಷ್ಠ ಮೂವರು ಸದಸ್ಯರು ಪ್ರಬಲವಾಗಿ ವಿರೋಧಿಸಿದ್ದಾರೆ.

ಈವರೆಗೆ ಜಾರಿಯಲ್ಲಿದ್ದ ಭಾರತೀಯ ದಂಡಸಂಹಿತೆ 1860, ಕ್ರಿಮಿನಲ್ ವಿಧಿವಿಧಾನ ಸಂಹಿತೆ 1890 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆ 1872 ಇವುಗಳ ಬದಲಿಗೆ ಈ ಮೂರು ವಿಧೇಯಕಗಳನ್ನು ಜಾರಿಗೊಳಿಸುವ ಉದ್ದೇಶವನ್ನು ಕೇಂದ್ರ ಸರಕಾರ ಹೊಂದಿದೆ.

ನೂತನ ಮೂರು ವಿಧೇಯಕಗಳ ಬಗ್ಗೆ ಚರ್ಚೆಗೆ ತಮಗೆ ಅಲ್ಪಾವಧಿಯ ನೋಟಿಸ್ ನೀಡಿರುವುದನ್ನು ಪ್ರತಿಭಟಿಸಿ ಟಿಎಂಸಿಯ ಡೆರೆಕ್ ಓ ಬ್ರಿಯಾನ್ ಹಾಗೂ ಕಾಕೋಲಿ ಘೋಷ್ ದಸ್ತಿದಾರ್ ಮತ್ತು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಸಮಿತಿಗೆ ಪತ್ರ ಬರೆದಿದ್ದಾರೆ. ಈ ಮೊದಲು ನಿಗದಿಯಾದಂತೆ, ಸೆರೆಮನೆ-ಪರಿಸ್ಥಿತಿ ಮೂಲಸೌಕರ್ಯ ಹಾಗೂ ಸುಧಾರಣೆಗಳ ಕುರಿತ ಕರಡುವರದಿಯನ್ನು ಅಂಗೀಕರಿಸಲು ಆಗಸ್ಟ್ 24ರಂದು ಸಭೆ ಸೇರಬೇಕಿತ್ತು.

ಆದರೆ ಆಗಸ್ಟ್ 18ರಂದು ರಾತ್ರಿ ಗೃಹ ಸಚಿವಾಲಯ ವ್ಯವಹಾರಗಳ ಸದಸ್ಯರಿಗೆ ಹೊಸ ನೋಟಿಸ್ ಜಾರಿಗೊಳಿಸಿದ ಸಚಿವಾಲಯವು, ಆಗಸ್ಟ್ 24,25 ಹಾಗೂ 26ರಂದು ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಈ ಮೂರು ವಿಧೇಯಕಗಳ ವಿವಿಧ ಅಂಶಗಳ ಬಗ್ಗೆ ಸದಸ್ಯರ ಜೊತೆ ಚರ್ಚಿಸುವುದಾಗಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿ ಪತ್ರ ಬರೆದಿರುವ ಓ ಬ್ರಿಯಾನ್ ಅವರು ಸಂಸತ್ನ ಮುಂಗಾರು ಅಧಿವೇಶನವು ಇತ್ತೀಚೆಗೆ ಕೊನೆಗೊಂಡಿರುವುದರಿಂದ, ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ಅವರವರ ಕ್ಷೇತ್ರಗಳಲ್ಲಿ ಹಲವಾರು ಬದ್ಧತೆಗಳನ್ನು ಹೊಂದಿರುತ್ತಾರೆ. ಈ ಮೂರು ವಿಧೇಯಕಗಳ ಕುರಿತು ಸಮಾಲೋಚನೆಗೆ ಅಲ್ಪಾವಧಿಯ ನೋಟಿಸ್ ನೀಡಿರುವುದು ಸರಿಯಲ್ಲ. ಆದುದರಿಂದ ಹಾಲಿ ದಿನಾಂಕಗಳನ್ನು ಪರಿಷ್ಕರಿಸಿ ಸೆಪ್ಟೆಂಬರ್ನಲ್ಲಿ ಸಮಾಲೋಚನೆಗೆ ದಿನಗಳನ್ನು ನಿಗದಿಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಈ ಮೂರು ವಿಧೇಯಕಗಳನ್ನು ಗೃಹ ಸಚಿವಾಲಯದ ಸಮಿತಿಯ ಪ್ರಸ್ತಾವನೆಗೆ ಆಗಸ್ಟ್ 18ರಂದು ಸಲ್ಲಿಸಲಾಗಿತ್ತು. ಆ ದಿನದಂದೇ ಸಮಿತಿಯ ಪ್ರಸ್ತಾವನೆಗೆ ವಿಧೇಯಕಗಳನ್ನು ಒಪ್ಪಿಸಲಾಗಿತ್ತು.ಅಲ್ಲದೆ ಈ ಕುರಿತ ಸಮಾಲೋಚನೆಗಾಗಿ ನಮಗೆ ನೋಟಿಸ್ ಕಳುಹಿಸಲಾಗಿತ್ತು. ಇದು ಅತ್ಯಂತ ಅಚ್ಚರಿಕರ. ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಯಾಗಬೇಕೆಂಬ ನಮ್ಮ ಮನವಿಗೆ ಸರಕಾರ ಕಿವಿಗೊಡುತ್ತಿಲ್ಲ. ಆದರೆ ಈ ಮೂರು ವಿಧೇಯಕಗಳ ಬಗ್ಗೆ ಸಮಾಲೋಚನೆ ನಡೆಸಲು ಅದು ಅವಸರ ಮಾಡುತ್ತಿದೆ’’ ಎಂದು ಸದಸ್ಯರೊಬ್ಬರು ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X