Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಮುಸ್ಲಿಂ ಶಿಕ್ಷಕರ ಬಗ್ಗೆ ಸುಳ್ಳು...

"ಮುಸ್ಲಿಂ ಶಿಕ್ಷಕರ ಬಗ್ಗೆ ಸುಳ್ಳು ಹೇಳಿಕೆ ನೀಡಲು ಒತ್ತಡ": ಒಪ್ಪಿಕೊಂಡ ವಿದ್ಯಾರ್ಥಿಗಳಿಂದ ಪ್ರತಿಭಟನೆ

ʼಲವ್‌ ಜಿಹಾದ್‌ʼ ಆರೋಪದಲ್ಲಿ ರಾಜಸ್ಥಾನದಲ್ಲಿ ಮೂವರು ಮುಸ್ಲಿಂ ಶಿಕ್ಷಕರ ಅಮಾನತು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ27 Feb 2024 4:40 PM IST
share
ಮುಸ್ಲಿಂ ಶಿಕ್ಷಕರ ಬಗ್ಗೆ ಸುಳ್ಳು ಹೇಳಿಕೆ ನೀಡಲು ಒತ್ತಡ: ಒಪ್ಪಿಕೊಂಡ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೋಟಾ: ಬಲವಂತದ ಮತಾಂತರ, ಲವ್‌ ಜಿಹಾದ್‌ ಚಟುವಟಿಕೆಗಳನ್ನು ನಡೆಸುತ್ತಿದ್ಧಾರೆಂದು ಹಿಂದುತ್ವ ಗುಂಪು ʼಸರ್ವ್‌ ಹಿಂದು ಸಮಾಜ್‌ʼ ಆರೋಪಗಳ ನಂತರ ರಾಜಸ್ಥಾನದ ಕೋಟಾ ಎಂಬಲ್ಲಿನ ಖಜೂರಿ ಗ್ರಾಮದ ಶಾಲೆಯೊಂದರ ಮೂವರು ಮುಸ್ಲಿಂ ಶಿಕ್ಷಕರಾದ ಫಿರೋಝ್‌ ಖಾನ್‌, ಮಿರ್ಜಾ ಮುಜಾಹಿದ್‌ ಮತ್ತು ಶಬಾನಾ ಎಂಬವರನ್ನು ಅಮಾನತುಗೊಳಿಸಲಾಗಿತ್ತು. ಆದರೆ ಈ ಶಾಲೆಯ ಹಿಂದೂ ವಿದ್ಯಾರ್ಥಿಗಳು ಶಿಕ್ಷಕರ ಅಮಾನತನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರಲ್ಲದೆ ಶಾಲೆಯಿಂದ ಹಲವಾರು ಕಿಮೀ ದೂರವಿರವ ಸಂಗೋಡ್‌ ಪಟ್ಟಣದಲ್ಲಿರುವ ಎಸ್‌ಡಿಎಂ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಅಮಾನತುಗೊಂಡ ಮುಸ್ಲಿಂ ಶಿಕ್ಷಕರ ಮರುಸ್ಥಾಪನೆಗೆ ಕೋರಿದರು.

ಶಿಕ್ಷಕರ ವಿರುದ್ಧದ ಆರೋಪಗಳನ್ನು ನಿರಾಕರಿಸಿದ ವಿದ್ಯಾರ್ಥಿಗಳು, ಅವರ ಮೇಲೆ ಸುಳ್ಳು ಆರೋಪ ಹೊರಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಪ್ರತಿಭಟನೆ ವೇಳೆ ಭಾವುಕರಾದ ವಿದ್ಯಾರ್ಥಿಗಳಲ್ಲಿ ಕೆಲವರು ತಮಗೆ ಶಿಕ್ಷಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲು ಬಲವಂತಪಡಿಸಲಾಗಿತ್ತು ಎಂದೂ ಹೇಳಿದ್ದಾರೆ.

10ನೇ ಗ್ರೇಡ್‌ ವಿದ್ಯಾರ್ಥಿಯೊಬ್ಬ ಪ್ರತಿಕ್ರಿಯಿಸಿ ನನಗೆ ನಮಾಝ್‌ ಸಲ್ಲಿಸಲು ಬಲವಂತಪಡಿಸಲಾಗಿರಲಿಲ್ಲ ಆದರೂ ಮುಸ್ಲಿಂ ಶಿಕ್ಷಕರ ವಿರುದ್ಧ ಸುಳ್ಳು ಆರೋಪ ಹೊರಿಸಲು ಬಲವಂತಪಡಿಸಲಾಗಿತ್ತು ಎಂದು ಹೇಳಿದ್ದಾನೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋವೊಂದರಲ್ಲಿ ಈ ವಿದ್ಯಾರ್ಥಿಯ ಮಾತುಗಳು ಕೇಳಿಸುತ್ತವೆ – “ನೀನು ಹಿಂದೂ ಎಂದು ಅವರ ಸತತವಾಗಿ ನೆನಪಿಸುತ್ತಿದ್ದರು. ಅವರ ಮಾತುಗಳನ್ನು ಕೇಳಿ ನಾನು ತಪ್ಪು ಮಾಡಿದೆ. ಈ ಶಿಕ್ಷಕರು ನಮ್ಮವರು. ಅವರ ಬಗ್ಗೆ ಏಕೆ ಸುಳ್ಳು ಹೇಳಲಿ? ನಾನು ಇಂದು ಏನಾಗಿದ್ದೇನೆಯೋ ಅದಕ್ಕೆ ಅವರು ಕಾರಣರು,” ಎಂದು ಆತ ಹೇಳಿದ್ದಾನೆ.

ಬಲವಂತದ ಮತಾಂತರ, ‌ʼಲವ್‌ ಜಿಹಾದ್‌ʼ ಮತ್ತು ನಮಾಝ್ ಚಟುವಟಿಕೆಗಳನ್ನು ಅಮಾನತುಗೊಂಡ ಶಿಕ್ಷಕರು ನಡೆಸಿಲ್ಲ ಎಂದು ಅವರ ವಿರುದ್ಧದ ಆರೋಪಗಳನ್ನು ನಿರಾಕರಿಸಿ ಜಿಲ್ಲಾ ಶಿಕ್ಷಣ ಇಲಾಖೆಗೆ ಶಾಲೆಯ 15 ಹಿಂದೂ ಶಿಕ್ಷಕರು ಪತ್ರ ಬರೆದಿದ್ದಾರೆ. ಶಾಲೆಯ ಆಡಳಿತ ಸಮಿತಿ, ಸ್ಥಳೀಯ ಗ್ರಾಮ ಸರಪಂಚ ಕೂಡ ಶಿಕ್ಷಕರ ವಿರುದ್ಧದ ಆರೋಪ ನಿರಾಕರಿಸಿದ್ದಾರೆ.

ಸ್ಥಳೀಯ ಹಿಂದು ಮಹಿಳೆ ಹಾಗೂ ಮುಸ್ಲಿಂ ವ್ಯಕ್ತಿಯ ನಡುವಿನ ಪ್ರೇಮ ವಿವಾಹಕ್ಕೂ ಈ ವಿವಾದಕ್ಕೂ ನಂಟು ಇರುವಂತೆ ತೋರುತ್ತಿದೆ. ಆದರೆ ಈ ಪ್ರಕರಣದಲ್ಲಿ ಇಬ್ಬರೂ ವಯಸ್ಕರಾಗಿದ್ದು ತಮ್ಮ ಸ್ವಇಚ್ಛೆಯಂತೆ ವಿವಾಹವಾಗಿದ್ದಾರೆ ಎಂದು ಸ್ಥಳೀಯರು ಮತ್ತು ಪೊಲೀಸರು ಹೇಳಿದ್ದಾರೆ. ಶಾಲೆಯ ಪ್ರದೇಶದಲ್ಲಿ ಯಾವತ್ತೂ ಬಲವಂತದ ಮತಾಂತರ ಅಥವಾ ಲವ್‌ ಜಿಹಾದ್‌ ನಡೆದಿಲ್ಲ ಎಂದು ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

Thread
After Three Muslim teachers Firoz Khan, Mirza Mujahid, and Shabana were suspended from a school in Kota, Rajasthan following Hindutva group 'Sarv Hindu Samaj' accusing them of being involved in Forced conversion, love jihad and Islamic Jihadi activities. Hindu Students… pic.twitter.com/duTXYDNbft

— Mohammed Zubair (@zoo_bear) February 27, 2024

School students were seen protesting against the suspension of three Muslim teachers at Sangod school over the allegations of 'conversion and love jihad'. They were seen crying and saying some students were forced to make false allegations against these Muslim teachers. pic.twitter.com/BrfnDcajgs

— Mohammed Zubair (@zoo_bear) February 27, 2024

A 10th class student Naveen ( Name changed ) said he was NOT forced to offer namaz but was forced and pressured to level false allegations against these three Muslim teachers in front of the media. He broke down while speaking to the media.
He says, They were continuously… pic.twitter.com/AJMrBZsFcd

— Mohammed Zubair (@zoo_bear) February 27, 2024

School students in Khajuri village of Rajasthan’s Kota district gathered outside the SDM Office in Sangod demanding revocation of suspension of 3 Muslim teachers of their school who according to them are falsely accused of 'forced conversion and love jihad'
- Video by… pic.twitter.com/NDk9KAwj48

— Mohammed Zubair (@zoo_bear) February 27, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X