Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಪವರ್ ಪ್ರಕರಣವನ್ನು ವಿಚಾರಣೆಗೆ...

ಅದಾನಿ ಪವರ್ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡದ ತನ್ನ ರಿಜಿಸ್ಟ್ರಿಗೆ ಸುಪ್ರೀಂ ಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ24 Jan 2024 4:45 PM IST
share
ಅದಾನಿ ಪವರ್ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡದ ತನ್ನ ರಿಜಿಸ್ಟ್ರಿಗೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ನ್ಯಾಯಾಂಗದ ಆದೇಶವಿದ್ದರೂ ಅದಾನಿ ಪವರ್‌ಗೆ ಸಂಬಂಧಿಸಿದ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡದ್ದಕ್ಕಾಗಿ ತನ್ನ ರಿಜಿಸ್ಟ್ರಿಯನ್ನು ಸರ್ವೋಚ್ಚ ನ್ಯಾಯಾಲಯವು ತರಾಟೆಗೆತ್ತಿಕೊಂಡಿದೆ.

ರಾಜಸ್ಥಾನ ಸರಕಾರದ ಸ್ವಾಮ್ಯದ ಜೈಪುರ ವಿದ್ಯುತ್ ವಿತರಣ ನಿಗಮ ಲಿ.(ಜೆವಿವಿಎನ್‌ಎಲ್) ಪರ ಹಿರಿಯ ನ್ಯಾಯವಾದಿ ದುಷ್ಯಂತ ದವೆಯವರು ಮಂಗಳವಾರ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಪಿ.ವಿ.ಸಂಜಯಕುಮಾರ್ ಅವರ ಪೀಠದ ಎದುರು ಈ ವಿಷಯವನ್ನು ಪ್ರಸ್ತಾವಿಸಿ,ಪ್ರಕರಣವನ್ನು ಪಟ್ಟಿ ಮಾಡದಂತೆ ತನಗೆ ಸೂಚನೆಯಿದೆ ಎಂದು ರಿಜಿಸ್ಟ್ರಿ ತಿಳಿಸಿದೆ ಎಂದು ಹೇಳಿದರು.

ಸರ್ವೋಚ್ಚ ನ್ಯಾಯಾಲಯವು 2020ರಲ್ಲಿ ಮುಖ್ಯ ಪ್ರಕರಣದಲ್ಲಿ ತೀರ್ಪು ನೀಡಿದ್ದರೂ ಅದಾನಿ ಗ್ರೂಪ್‌ಗೆ ಸೇರಿದ ಅದಾನಿ ಪವರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಎಂಬ ಜೆವಿವಿಎನ್‌ಎಲ್ ಆರೋಪಗಳಿಗೆ ಪ್ರಸ್ತುತ ಪ್ರಕರಣವು ಸಂಬಂಧಿಸಿದೆ.

ಅದಾನಿ ಪವರ್ ಜೆವಿವಿಎನ್‌ಎಲ್‌ನಿಂದ ವಿಳಂಬ ಪಾವತಿ ಮೇಲ್ತೆರಿಗೆಯನ್ನು ಪಡೆಯುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು 2020ರಲ್ಲಿ ತೀರ್ಪು ನೀಡಿತ್ತು. ನಂತರ ಜೆವಿವಿಎನ್‌ಎಲ್ ಸಂಪೂರ್ಣ ಬಾಕಿಯನ್ನು ಅದಾನಿ ಪವರ್‌ಗೆ ಪಾವತಿಸಿತ್ತು.

ಜೆವಿವಿಎನ್‌ಎಲ್ 2022,ಜನವರಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ರಿಜಿಸ್ಟ್ರಿಯ ಮಹಾ ಕಾರ್ಯದರ್ಶಿಗಳಿಗೆ ಬರೆದಿದ್ದ ಪತ್ರದಲ್ಲಿ ತೀರ್ಪು ಹೊರಬಿದ್ದ ಎರಡು ವರ್ಷಗಳ ಬಳಿಕ ವಿಷಯವನ್ನು ವಿಚಾರಣೆಗೆ ಪಟ್ಟಿ ಮಾಡಿದ್ದು 2020ರ ತೀರ್ಪಿನ ಪುನರ್‌ಪರಿಶೀಲನೆಗೆ ಸ್ಪಷ್ಟ ಪ್ರಯತ್ನವಾಗಿದೆ ಎಂದು ತಿಳಿಸಿತ್ತು. ತೀರ್ಪಿನ ಪುನರ್‌ಪರಿಶೀಲನೆ ಕೋರಿ ಜೆವಿವಿಎನ್‌ಎಲ್ 2021ರಲ್ಲಿ ಅರ್ಜಿ ಸಲ್ಲಿಸಿತ್ತು,ಆದರೆ ಅದಾನಿ ಪವರ್ ಇಂತಹ ಯಾವುದೇ ಅರ್ಜಿಗಳನ್ನು ಸಲ್ಲಿಸಿರಲಿಲ್ಲ ಎಂದೂ ಅದು ಹೇಳಿತ್ತು.

ಮಂಗಳವಾರ ವಿಷಯವನ್ನು ಪ್ರಸ್ತಾಪಿಸಿದ ದವೆ, ಅದಾನಿ ಪವರ್ ವಿರುದ್ಧದ ಪ್ರಕರಣವನ್ನು ಪಟ್ಟಿ ಮಾಡುವಲ್ಲಿ ರಿಜಿಸ್ಟ್ರಿಯ ವೈಫಲ್ಯವು ಅತ್ಯಂತ ಕಳವಳಕಾರಿಯಾಗಿದೆ. ಅದನ್ನು ಪಟ್ಟಿ ಮಾಡದಂತೆ ತನಗೆ ನಿರ್ದೇಶನವಿದೆ ಎಂದು ಸಹಾಯಕ ರಿಜಿಸ್ಟ್ರಾರ್ ಬಹಳ ಧೈರ್ಯದಿಂದ ಹೇಳಿದ್ದಾರೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು,ಯಾಕೆ? ಯಾರ ಆಜ್ಞೆಯ ಮೇರೆಗೆ? ಹಾಗೆ ನಿರ್ದೇಶಿಸಿದ್ದು ಯಾರು ಎಂದು ಪ್ರಶ್ನಿಸಿತು.

ಅದು ತನಗೆ ಗೊತ್ತಿಲ್ಲ ಎಂದು ಹೇಳಿದ ದವೆ,ಸರಕಾರವು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದಾಗ ಅದು ನ್ಯಾಯಾಂಗ ನಿಂದನೆಯಾಗುತ್ತದೆ. ಆದರೆ ರಿಜಿಸ್ಟ್ರಿಯು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದಾಗ ಅದನ್ನು ಗಂಭೀರವಾಗಿ ಪರಿಗಣಿಸಬೇಕಲ್ಲವೇ ಎಂದು ಕೇಳಿದರು.

ತಾನು ಈ ವಿಷಯದ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ ಪೀಠವು,ಬುಧವಾರ ಪ್ರಕರಣವನ್ನು ಎಲ್ಲಕ್ಕಿಂತ ಮೊದಲು ವಿಚಾರಣೆಗೆ ಪಟ್ಟಿ ಮಾಡುವಂತೆ ನಿರ್ದೇಶನ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X