Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಮೆಂಟ್‌ನಿಂದ ನಿರ್ಮಿಸಿದ ಮಂದಿರ...

ಸಿಮೆಂಟ್‌ನಿಂದ ನಿರ್ಮಿಸಿದ ಮಂದಿರ ಪುರಾತನವಾಗಿರಲು ಸಾಧ್ಯವಿಲ್ಲ: ಯಮುನಾ ದಂಡೆಯಲ್ಲಿನ ಶಿವ ಮಂದಿರದ ನೆಲಸಮಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ14 Jun 2024 5:21 PM IST
share
ಸಿಮೆಂಟ್‌ನಿಂದ ನಿರ್ಮಿಸಿದ ಮಂದಿರ ಪುರಾತನವಾಗಿರಲು ಸಾಧ್ಯವಿಲ್ಲ: ಯಮುನಾ ದಂಡೆಯಲ್ಲಿನ ಶಿವ ಮಂದಿರದ ನೆಲಸಮಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

ಹೊಸದಿಲ್ಲಿ: ದಿಲ್ಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ)ವು ನಗರದ ಗೀತಾ ಕಾಲನಿ ಮತ್ತು ಯಮುನಾ ನೆರೆ ಬಯಲು ಪ್ರದೇಶದ ಸಮೀಪದಲ್ಲಿರುವ ಪ್ರಾಚೀನ ಶಿವ ಮಂದಿರವನ್ನು ನೆಲಸಮಗೊಳಿಸುವುದರ ವಿರುದ್ಧ ಮಧ್ಯಂತರ ಪರಿಹಾರವನ್ನು ಒದಗಿಸಲು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ನಿರಾಕರಿಸಿದೆ.

ಡಿಡಿಎ ನೆಲಸಮ ಕ್ರಮದ ವಿರುದ್ಧ ಪ್ರಾಚೀನ ಶಿವ ಮಂದಿರ ಅವಾಮ್ ಅಖಾಡಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಉಚ್ಚ ನ್ಯಾಯಾಲಯವು ಮೇ 29ರಂದು ತಿರಸ್ಕರಿಸಿತ್ತು. ‘ಅರ್ಜಿದಾರರು ಮಂದಿರದ ಕಾನೂನುಬದ್ಧ ಹಕ್ಕು ತೋರಿಸಲು ಯಾವುದೇ ಪುರಾವೆಗಳನ್ನು ಸಲ್ಲಿಸುವಲ್ಲಿ ದಯನೀಯವಾಗಿ ವಿಫಲಗೊಂಡಿದ್ದಾರೆ. ಭಗವಾನ್ ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ ಎಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಬದಲಿಗೆ ನಾವು ಜನರು,ಆತನಿಂದ ರಕ್ಷಣೆ ಮತ್ತು ಆಶೀರ್ವಾದಗಳನ್ನು ಕೋರುತ್ತೇವೆ. ಯಮುನಾ ನದಿ ಪಾತ್ರ ಮತ್ತು ನೆರೆ ಬಯಲು ಪ್ರದೇಶದಲ್ಲಿಯ ಎಲ್ಲ ಅತಿಕ್ರಮಣಗಳು ಮತ್ತು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಿದರೆ ಭಗವಾನ್ ಶಿವನು ಸಂತೋಷವಾಗಿರುತ್ತಾನೆ ’ಎಂದು ನ್ಯಾ.ಧರ್ಮೇಶ ಶರ್ಮಾ ಅವರ ಏಕ ನ್ಯಾಯಾಧೀಶ ಪೀಠವು ಹೇಳಿತ್ತು.

ಮಂದಿರದಲ್ಲಿಯ ವಿಗ್ರಹಗಳು ಮತ್ತು ಇತರ ಧಾರ್ಮಿಕ ವಸ್ತುಗಳನ್ನು ತೆಗೆದು ಬೇರೆ ದೇವಸ್ಥಾನದಲ್ಲಿ ಇರಿಸಲು ಅರ್ಜಿದಾರರಿಗೆ 15 ದಿನಗಳ ಕಾಲಾವಕಾಶವನ್ನು ಉಚ್ಚ ನ್ಯಾಯಾಲಯವು ನೀಡಿತ್ತು. ಅನಧಿಕೃತ ನಿರ್ಮಾಣವನ್ನು ನೆಲಸಮಗೊಳಿಸಲು ಅದು ಡಿಡಿಎಗೆ ಸ್ವಾತಂತ್ರ್ಯವನ್ನೂ ನೀಡಿತ್ತು.

ಈ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠದ ಮೊರೆ ಹೋಗಿದ್ದರು. ಆದರೆ ಅದು ನೆಲಸಮ ಕಾರ್ಯಾಚರಣೆಯ ವಿರುದ್ಧ ತಡೆಯಾಜ್ಞೆಯನ್ನು ನೀಡಿರಲಿಲ್ಲ. ಈ ನಡುವೆ ಏಕ ನ್ಯಾಯಾಧೀಶ ಪೀಠವು ನೀಡಿದ್ದ ಗಡುವು ಜೂ.12ರಂದು ಅಂತ್ಯಗೊಂಡಿತ್ತು.

ಬಳಿಕ ಸಮಿತಿಯು ಮಧ್ಯಂತರ ಪರಿಹಾರವನ್ನು ಕೋರಿ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಶೇಷ ರಜಾ ಅರ್ಜಿಯನ್ನು ಸಲ್ಲಿಸಿತ್ತು.

ಶುಕ್ರವಾರ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಸಂಜಯ ಕುಮಾರ ಮತ್ತು ಆಗಸ್ಟಿನ್ ಜಾರ್ಜ್ ಮಸೀಹ್ ಅವರ ರಜಾಕಾಲ ಪೀಠವು, ಮಂದಿರವು ಪುರಾತನವಾಗಿದೆ ಎನ್ನುವುದನ್ನು ಬೆಂಬಲಿಸಲು ದಾಖಲೆಗಳನ್ನು ತೋರಿಸುವಂತೆ ಅರ್ಜಿದಾರರನ್ನು ಕೇಳಿತು. ‘ಪ್ರಾಚೀನ ದೇವಸ್ಥಾನಗಳು ಕಲ್ಲಿನಿಂದ ನಿರ್ಮಾಣಗೊಂಡಿರುತ್ತವೆ, ಸಿಮೆಂಟ್‌ನಿಂದಲ್ಲ ಮತ್ತು ಅವುಗಳಿಗೆ ಬಣ್ಣವನ್ನು ಬಳಿದಿರುವುದಿಲ್ಲ. ಇವೆಲ್ಲ ಇತ್ತೀಚಿನ ದೇವಾಲಯಗಳು’ ಎಂದು ನ್ಯಾಯಾಲಯವು ಬೆಟ್ಟು ಮಾಡಿತು.

ಮಂದಿರವು ಯಮುನಾ ನೆರೆ ಬಯಲು ಪ್ರದೇಶದಲ್ಲಿಲ್ಲ ಎಂದು ವಾದಿಸಿದ ಅರ್ಜಿದಾರರ ಪರ ವಕೀಲರು ಮಧ್ಯಂತರ ಪರಿಹಾರವನ್ನು ಒದಗಿಸುವಂತೆ ಕೋರಿಕೊಂಡರಾದರೂ ಸರ್ವೋಚ್ಚ ನ್ಯಾಯಾಲಯವು ಅದನ್ನು ಪುರಸ್ಕರಿಸಲಿಲ್ಲ. ಅದೇನೇ ಇದ್ದರೂ,ಮೇಲ್ಮನವಿಯು ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠದ ಮುಂದೆ ಬಾಕಿಯಿರುವುದರಿಂದ ಸಮಾನಾಂತರ ಕಲಾಪಗಳಿಗೆ ತಾನು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಕೇವಲ 24 ಗಂಟೆಗಳಿಗೆ ಮಧ್ಯಂತರ ಪರಿಹಾರವನ್ನು ಒದಗಿಸಿ, ಇಲ್ಲದಿದ್ದರೆ ಮನವಿಯು ನಿಷ್ಫಲಗೊಳ್ಳುತ್ತದೆ ಎಂದು ವಕೀಲರು ಮತ್ತೆ ಕೋರಿದರಾದರೂ,ನಿಮಗೆ ಅಂತಹ ಪರಿಹಾರವನ್ನು ನೀಡಲು ಸಾಕಷ್ಟು ದಾಖಲೆಗಳು ನಿಮ್ಮ ಬಳಿಯಲ್ಲಿಲ್ಲ ಎಂದು ನ್ಯಾಯಾಲಯವು ತಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X