Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಅಧಿಕಾರಿಗಳು ಅಮಾನವೀಯವಾಗಿ...

"ಅಧಿಕಾರಿಗಳು ಅಮಾನವೀಯವಾಗಿ ವರ್ತಿಸಿದ್ದಾರೆ": ಈಡಿಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

ಕಾಂಗ್ರೆಸ್‌ ನಾಯಕನನ್ನು 15 ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಿದ್ದ ಈಡಿ

ವಾರ್ತಾಭಾರತಿವಾರ್ತಾಭಾರತಿ3 Jan 2025 3:31 PM IST
share
Photo of Supreme court of India

ಹೊಸದಿಲ್ಲಿ: ಕಾಂಗ್ರೆಸ್‌ ನಾಯಕನೋರ್ವನನ್ನು ಮಧ್ಯರಾತ್ರಿ ಕಳೆದರೂ ಸುಮಾರು 15 ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ(ಈ.ಡಿ.)ದ ದಬ್ಬಾಳಿಕೆಯ ಮತ್ತು ಅಮಾನವೀಯ ವರ್ತನೆಯನ್ನು ಸರ್ವೋಚ್ಚ ನ್ಯಾಯಾಲಯವು ತೀವ್ರ ತರಾಟೆಗೆತ್ತಿಕೊಂಡಿದ್ದು, ಅದರ ತನಿಖಾ ವಿಧಾನದ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದೆ.

ಹೇಳಿಕೆ ನೀಡುವಂತೆ ಈಡಿ ವ್ಯಕ್ತಿಯೋರ್ವರ ಮೇಲೆ ಅಕ್ಷರಶಃ ಒತ್ತಡವನ್ನು ಹೇರಿದ್ದು ಆಘಾತಕಾರಿಯಾಗಿದೆ ಎಂದು ಗುರುವಾರ ವಿಚಾರಣೆ ಸಂದರ್ಭದಲ್ಲಿ ಹೇಳಿದ ನ್ಯಾಯಮೂರ್ತಿಗಳಾದ ಎ.ಎಸ್.ಓಕಾ ಮತ್ತು ಎ.ಜಿ.ಮಸಿಹ್ ಅವರ ಪೀಠವು,ಕಾನೂನುಬಾಹಿರ ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಡಿಯಿಂದ ಹರ್ಯಾಣದ ಮಾಜಿ ಕಾಂಗ್ರೆಸ್ ಶಾಸಕ ಸುರೇಂದ್ರ ಪನ್ವಾರ್ ಅವರ ಬಂಧನವನ್ನು ರದ್ದುಗೊಳಿಸಿದ್ದನ್ನು ಎತ್ತಿ ಹಿಡಿಯಿತು.

ಈ.ಡಿ. ಜುಲೈನಲ್ಲಿ ಸುಮಾರು 15 ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ನಸುಕಿನ 1:40ಕ್ಕೆ ಪನ್ವಾರ್‌ರನ್ನು ಬಂಧಿಸಿತ್ತು,ಆದರೆ ಸೆಪ್ಟಂಬರ್‌ನಲ್ಲಿ ಪಂಜಾಬ್ ಮತ್ತು ಹರ್ಯಾಣ ಉಚ್ಚ ನ್ಯಾಯಾಲಯವು ಅವರ ಬಂಧನವನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಈ.ಡಿ.ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿತ್ತು.

ಈ.ಡಿ.ಪರ ವಕೀಲ ರೆಹೆಬ್ ಹುಸೇನ್ ಅವರು,ಉಚ್ಚ ನ್ಯಾಯಾಲಯವು ಪನ್ವಾರ್‌ರನ್ನು 14 ಗಂಟೆ 40 ನಿಮಿಷಗಳ ಕಾಲ ನಿರಂತರವಾಗಿ ಪ್ರಶ್ನಿಸಲಾಗಿತ್ತು ಎಂದು ತನ್ನ ಆದೇಶದಲ್ಲಿ ತಪ್ಪಾಗಿ ದಾಖಲಿಸಿದೆ, ವಿಚಾರಣೆ ಸಂದರ್ಭದಲ್ಲಿ ಅವರಿಗೆ ಭೋಜನ ವಿರಾಮವನ್ನು ನೀಡಲಾಗಿತ್ತು ಎಂದು ಹೇಳಿದರು. ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ಜನರನ್ನು ನಸುಕಿನ ವೇಳೆಯಲ್ಲಿ ವಿಚಾರಣೆಗೆ ಒಳಪಡಿಸದಿರಲು ಈ.ಡಿ.ಈಗಾಗಲೇ ಕ್ರಮಗಳನ್ನು ತೆಗೆದುಕೊಂಡಿದೆ ಎಂದೂ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದರು.

ಈ.ಡಿ.ವಾದವನ್ನು ತಿರಸ್ಕರಿಸಿದ ಪೀಠವು,ಅದು ವ್ಯಕ್ತಿಗೆ ವಿರಾಮವನ್ನು ನೀಡದೆ ಇಷ್ಟೊಂದು ದೀರ್ಘ ಅವಧಿಗೆ ವಿಚಾರಣೆ ನಡೆಸುವ ಮೂಲಕ ಚಿತ್ರಹಿಂಸೆ ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿತು. ಆದಾಗ್ಯೂ ಉಚ್ಚ ನ್ಯಾಯಾಲಯದ ಮತ್ತು ತನ್ನ ಅವಲೋಕನಗಳು ಜಾಮೀನು ಮಂಜೂರು ಮಾಡುವ ವಿಷಯಕ್ಕೆ ಮಾತ್ರ ಸಂಬಂಧಿಸಿವೆಯೇ ಹೊರತು ಪ್ರಕರಣದ ಅರ್ಹತೆಗಲ್ಲ ಎಂದು ಅದು ಸ್ಪಷ್ಟಪಡಿಸಿತು.

ಜು.19ರಂದು ಬೆಳಿಗ್ಗೆ 11 ಗಂಟೆಗೆ ಈ.ಡಿ. ಕಚೇರಿಯಲ್ಲಿ ಹಾಜರಾಗಿದ್ದ ಪನ್ವಾರ್‌ರನ್ನು ಜು.21ರ ನಸುಕಿನ 1:40 ಗಂಟೆಯವರಗೆ ನಿರಂತರವಾಗಿ ವಿಚಾರಣೆ ನಡೆಸಿದ್ದು ತನಿಖಾ ಸಂಸ್ಥೆಯ ಪಾಲಿಗೆ ವೀರೋಚಿತವಲ್ಲ,ಅದು ಮಾನವ ಘನತೆಗೆ ವಿರುದ್ಧವಾಗಿದೆ ಎಂದು ತನ್ನ ಆದೇಶದಲ್ಲಿ ಹೇಳಿದ್ದ ಉಚ್ಚ ನ್ಯಾಯಾಲಯವು,ಅದು ತನ್ನ ತನಿಖಾ ವಿಧಾನವನ್ನು ಬದಲಿಸಿಕೊಳ್ಳುವ ಅಗತ್ಯವಿದೆ ಎಂದು ಸೂಚಿಸಿತ್ತು.

ಉಚ್ಚ ನ್ಯಾಯಾಲಯದ ಭಾವನೆಗಳನ್ನು ಪ್ರತಿಧ್ವನಿಸಿದ ಸರ್ವೋಚ್ಚ ನ್ಯಾಯಾಲಯವು, ಈ.ಡಿ. ಅಧಿಕಾರಿಗಳು ಅಮಾನವೀಯವಾಗಿ ವರ್ತಿಸಿದ್ದಾರೆ. ಇದು ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣವಲ್ಲ, ಅಕ್ರಮ ಮರಳುಗಾರಿಕೆ ಪ್ರಕರಣವಾಗಿದೆ. ಇದು ಇಂತಹ ಪ್ರಕರಣಗಳಲ್ಲಿ ಜನರನ್ನು ನಡೆಸಿಕೊಳ್ಳುವ ರೀತಿಯಲ್ಲ. ನೀವು ಹೇಳಿಕೆ ನೀಡುವಂತೆ ವ್ಯಕ್ತಿಯ ಮೇಲೆ ಒತ್ತಡ ಹೇರುತ್ತಿದ್ದೀರಿ ಎಂದು ಹೇಳಿತು.

ಪನ್ವಾರ್ ಅವರ ಆರಂಭಿಕ ಬಂಧನ ಮತ್ತು ಬಂಧನಕ್ಕೆ ಕಾರಣಗಳು ಕಾನೂನಿನಲ್ಲಿ ಸಮರ್ಥನೀಯವಲ್ಲ ಹಾಗೂ ಅವರು ಯಾವುದೇ ಅಪರಾಧದ ಆದಾಯಕ್ಕೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆ ಅಥವಾ ಚಟುವಟಿಕೆಯಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಭಾಗಿಯಾಗಿದ್ದರು ಎನ್ನುವುದನ್ನು ಸಾಬೀತುಗೊಳಿಸಲು ಈ.ಡಿ.ಬಳಿ ಯಾವುದೇ ಸಾಕ್ಷ್ಯವಿಲ್ಲ ಎಂದು ಹೇಳಿದ್ದ ಉಚ್ಚ ನ್ಯಾಯಾಲಯದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯವು ಎತ್ತಿ ಹಿಡಿಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X