Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣ ಸುರಂಗ ಕುಸಿತ: ರಕ್ಷಣಾ...

ತೆಲಂಗಾಣ ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆಗೆ ಕೇರಳ ಶ್ವಾ ನದಳದ ನೆರವು

ವಾರ್ತಾಭಾರತಿವಾರ್ತಾಭಾರತಿ10 March 2025 9:37 PM IST
share
ತೆಲಂಗಾಣ ಸುರಂಗ ಕುಸಿತ: ರಕ್ಷಣಾ ಕಾರ್ಯಾಚರಣೆಗೆ ಕೇರಳ ಶ್ವಾ ನದಳದ ನೆರವು

ಹೈದರಾಬಾದ್: ಕಳೆದ 17 ದಿನಗಳಿಂದ 15 ವಿವಿಧ ಸಂಸ್ಥೆಗಳನ್ನೊಳಗೊಂಡ ರಕ್ಷಣಾ ತಂಡಗಳು ದಣಿವರಿಯದೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದರೂ, ತೆಲಂಗಾಣದ ಶ್ರೀಶೈಲಂ ಎಡ ದಂಡೆ ಕಾಲುವೆ ಸುರಂಗದಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು ಪತ್ತೆ ಹಚ್ಚುವ ರಕ್ಷಣಾ ಕಾರ್ಯಾಚರಣೆಯಲ್ಲಿ ಕೇರಳದಿಂದ ರವಾನಿಸಲಾಗಿರುವ ವಿಶೇಷ ತರಬೇತಿ ಪಡೆದ ಮನುಷ್ಯರನ್ನು ಪತ್ತೆ ಹಚ್ಚುವ ಶ್ವಾ ನಗಳು ಮಹತ್ವದ ಪಾತ್ರ ವಹಿಸಿವೆ ಎಂದು ವರದಿಯಾಗಿದೆ.

ಕೇರಳ ಪೊಲೀಸ್ ಇಲಾಖೆಯ ಕೆ-9 ದಳಕ್ಕೆ ಸೇರಿರುವ ಮಾಯಾ ಹಾಗೂ ಮರ್ಫಿ ಎಂಬ ಶ್ವಾನಗಳು ಹೂಳು ಹಾಗೂ ಮಣ್ಣಿನಡಿ ಹೂತು ಹೋಗಿದ್ದ ಮೃತದೇಹವಿರುವ ನಿಖರ ಸ್ಥಳವನ್ನು ಗುರುತಿಸಿವೆ. ನಂತರ, ರ್ಯಾಟ್ ಮೈನರ್ ಗಳು ಹಾಗೂ ಇನ್ನಿತರ ರಕ್ಷಣಾ ಸಿಬ್ಬಂದಿಗಳು ಆ ಸ್ಥಳವನ್ನು ಅಗೆದಿದ್ದು, ರವಿವಾರ ಟಿಬಿಎಂ ಆಪರೇಟರ್ ಆದ ಪಂಜಾಬ್ ನಿವಾಸಿ ಗುರುಪ್ರೀತ್ ಸಿಂಗ್ ನ ಮೃತ ದೇಹವನ್ನು ವಶಪಡಿಸಿಕೊಂಡಿದ್ದಾರೆ.

ತಮ್ಮ ಅದ್ಭುತ ಶೋಧ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿರುವ ಈ ಬೆಲ್ಜಿಯಂ ಮಲಿನೊಯಿಸ್ ಶ್ವಾನಗಳು ಉಳಿದ ಮೃತ ದೇಹಗಳನ್ನು ಪತ್ತೆ ಹಚ್ಚಿರುವ ಸ್ಥಳದ ಸಮೀಪ ನೆಲ ಅಗೆಯುವ ಕೆಲಸ ಮುಂದುವರಿದಿದೆ. ಮನುಷ್ಯರ ಮೃತ ದೇಹಗಳನ್ನು ಪತ್ತೆ ಹಚ್ಚುವ ಶ್ವಾನಗಳು ಎಂದೂ ಕರೆಯಲಾಗುವ ಮಾಯಾ ಹಾಗೂ ಮರ್ಫಿ ಶ್ವಾನಗಳು ಎರ್ನಾಕುಲಂ ಪೊಲೀಸ್ ಘಟಕಕ್ಕೆ ಸೇರಿದ್ದು, ಅವಕ್ಕೆ ತ್ರಿಶೂರ್ ಅಕಾಡೆಮಿಯಲ್ಲಿ ತರಬೇತಿ ನೀಡಲಾಗಿದೆ ಎಂದು ರಕ್ಷಣಾ ತಂಡಗಳು ತಿಳಿಸಿವೆ ಎಂದು Deccan Herald ಸುದ್ದಿ ಸಂಸ್ಥೆ ವರದಿ ಮಾಡಿದೆ.

ಕೊಳೆತು ಹೋಗಿರುವ ಮೃತ ದೇಹಗಳ ವಾಸನೆಯನ್ನು ಹಿಡಿದು, ಅವು ಹೂತು ಹೋಗಿವೆಯೊ ಅಥವಾ ಮುಳುಗಿ ಹೋಗಿವೆಯೊ ಎಂಬುದನ್ನು ಪತ್ತೆ ಹಚ್ಚುವ ವಿಶೇಷ ತರಬೇತಿಯನ್ನು ಈ ಶ್ವಾನಗಳಿಗೆ ನೀಡಲಾಗಿದೆ. ಮಾಯಾ ಹಾಗೂ ಮರ್ಫಿ ಶ್ವಾ ನಗಳು ಕಳೆದ ಐದು ವರ್ಷಗಳಿಂದ ಕೇರಳ ಪೊಲೀಸ್ ಇಲಾಖೆಗಾಗಿ ಸೇವೆ ಸಲ್ಲಿಸುತ್ತಿದ್ದು, 200ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ವಯನಾಡ್ ಭೂಕುಸಿತ ಸೇರಿದಂತೆ ಹಲವಾರು ಪ್ರಮುಖ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ.

ಸುರಂಗದಲ್ಲಿನ ಅಸ್ಥಿರ ಪರಿಸ್ಥಿತಿಯಿಂದಾಗಿ, ಈ ಶ್ವಾ ನಗಳು ಗುರುತಿಸಿರುವ ಎರಡನೆ ಸ್ಥಳವು ನೆಲ ಅಗಿತಕ್ಕೆ ಸವಾಲಾಗಿ ಪರಿಣಮಿಸಿದೆ. ಲೋಹದ ಅವಶೇಷಗಳು, ಕೆಸರು ಹಾಗೂ ಆಮ್ಲಜನಕದ ಕೊರತೆಯು ರಕ್ಷಣಾ ಕಾರ್ಯಾಚರಣೆಯನ್ನು ತೀರಾ ಕ್ಲಿಷ್ಟವಾಗಿಸಿವೆ. ನೆಲ ಅಗಿತದ ಪ್ರಕ್ರಿಯೆಯಲ್ಲಿ ನೆರವು ನೀಡಲು ಸುಧಾರಿತ ರೊಬೊಟಿಕ್ ತಂತ್ರಜ್ಞಾನವನ್ನೂ ರಕ್ಷಣಾ ತಂಡಗಳು ನಿಯೋಜಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X