Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋರ್ಟ್ ಶಿಕ್ಷೆಗೆ ಮುನ್ನ 6 ವರ್ಷ...

ಕೋರ್ಟ್ ಶಿಕ್ಷೆಗೆ ಮುನ್ನ 6 ವರ್ಷ ಸರ್ಕಾರಿ ಅಧಿಕಾರಿಯಾಗಿದ್ದ ಹಂತಕ!

ವಾರ್ತಾಭಾರತಿವಾರ್ತಾಭಾರತಿ10 Sept 2024 8:06 AM IST
share
ಕೋರ್ಟ್ ಶಿಕ್ಷೆಗೆ ಮುನ್ನ 6 ವರ್ಷ ಸರ್ಕಾರಿ ಅಧಿಕಾರಿಯಾಗಿದ್ದ ಹಂತಕ!

ಲಕ್ನೋ: ಉತ್ತರ ಪ್ರದೇಶ ನೀರಾವರಿ ಇಲಾಖೆಯಲ್ಲಿ ಆರು ವರ್ಷ ಅನುಭವ ಹೊಂದಿದ್ದ ಹಿರಿಯ ಸಹಾಯಕನೊಬ್ಬ 11 ವರ್ಷ ಹಿಂದೆ ಕೊಲೆ ಆರೋಪದಲ್ಲಿ ಶಿಕ್ಷೆಗೆ ಒಳಗಾಗಿದ್ದ ಆಘಾತಕಾರಿ ಅಂಶ ಇಲಾಖೆ ನಡೆಸಿದ ವಿಚಾರಣೆಯಿಂದ ಬೆಳಕಿಗೆ ಬಂದಿದೆ.

ಶಿಕ್ಷಿತ ಅಧಿಕಾರಿ ಅನೂಪ್ ದುಬೆ ಎಂಬಾತ ಇದೀಗ 35ರ ಆಸುಪಾಸಿನಲ್ಲಿದ್ದು, 2013ರಲ್ಲಿ ನೈನಾಗಢ ಎಂಬಲ್ಲಿ ದೇವೇಂದ್ರ ಸಿಂಗ್ ತೋಮರ್ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ. ಇದೇ ಪ್ರಕರಣದಲ್ಲಿ ಗೌರವ್ ಝಾ, ಕಪಿಲ್ ಶರ್ಮಾ ಮತ್ತು ಆಕಾಶ್ ಬಂಧಿತರಾಗಿದ್ದರು. ದೇವೇಂದ್ರನನ್ನು ದಾರ್ಷ್ಟ್ಯ ನಡವಳಿಕೆಗಾಗಿ ಹತ್ಯೆ ಮಾಡಲು ಈ ಗುಂಪು ಸಂಚು ರೂಪಿಸಿದ್ದು, ಪಿಕ್ ನಿಕ್ ಹೋಗುವ ನೆಪದಲ್ಲಿ ಆತನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಗುಂಡು ಹೊಡೆದು ಬಳಿಕ ದೇಹವನ್ನು ಸುಟ್ಟುಹಾಕಿತ್ತು.

ಸಂತ್ರಸ್ತ ವ್ಯಕ್ತಿಯ ತಂದೆ ಲಖನ್ ಸಿಂಗ್ ಥೋಮರ್, ನಾಪತ್ತೆಯಾಗಿರುವ ಮಗನ ಬಗ್ಗೆ ವಿಚಾರಿಸಿದಾಗ ಹತ್ಯೆಯ ವಿಷಯವನ್ನು ತಿಳಿಸಿ, ಇದನ್ನು ಬಹಿರಂಗಪಡಿಸಿರೆ ನಿನ್ನನ್ನೂ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಬೆದರಿಕೆಯ ಹೊರತಾಗಿಯೂ 2013ರ ಮೇ 17ರಂದು ಸಿಂಗ್ ಮಗನ ಸಾವಿನ ಬಗ್ಗೆ ಪ್ರಕರಣ ದಾಖಲಿಸಿದ್ದರು. ಆ ಬಳಿಕ ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ ಆರೋಪಿಯ ತಂದೆ ಹಾಗೂ ಮುಖ್ಯ ಎಂಜಿನಿಯರ್ ಮಿಥಿಲೇಶ್ ದುಬೆ, ಆರು ತಿಂಗಳ ಬಳಿಕ ಮಗನಿಗೆ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ತಂದೆ 2018ರಲ್ಲಿ ಮೃತಪಟ್ಟಾಗ ಅನುಕಂಪದ ಆಧಾರದಲ್ಲಿ ಆರೋಪಿ ದುಬೆ ನೀರಾವರಿ ಇಲಾಖೆಯಲ್ಲಿ ಉದ್ಯೋಗ ಪಡೆದ. ಈತನ ವಿರುದ್ಧ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದ್ದರೂ, ಉದ್ಯೋಗ ಪಡೆಯುವಲ್ಲಿ ಈತ ಯಶಸ್ವಿಯಾಗಿದ್ದ. ಕಡ್ಡಾಯ ಪೊಲೀಸ್ ದೃಢೀಕರಣ, ನಡತೆ ಪ್ರಮಾಣಪತ್ರ, ಹಿನ್ನೆಲೆಯ ಪರಿಶೀಲನೆ ಸಂದರ್ಭದಲ್ಲಿ ಕೂಡಾ ಈ ಪ್ರಕರಣ ಬೆಳಕಿಗೆ ಬಂದಿರಲಿಲ್ಲ.

ಈ ವರ್ಷದ ಆಗಸ್ಟ್ 13ರವರೆಗೂ ದುಬೆ ಕಾರ್ಯನಿರ್ವಹಿಸಿದ್ದು, 14ರಂದು ಪ್ರಕರಣದ ತೀರ್ಪಿನ ದಿನ ಆತ ಕರ್ತವ್ಯಕ್ಕೆ ರಜೆ ಹಾಕಿದ್ದ. ಝಾನ್ಸಿ ನ್ಯಾಯಾಲಯ ಈತ ಹಾಗೂ ಇತರ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು.

ಆತ ಕರ್ತವ್ಯಕ್ಕೆ ಮರಳಿದಾಗ ಇಲಾಖೆ ಈತನ ಹಿನ್ನೆಲೆಯ ಬಗ್ಗೆ ತನಿಖೆ ಆರಂಭಿಸಿದ್ದು, ನ್ಯಾಯಾಲಯದಲ್ಲಿ ಈತ ಶಿಕ್ಷಿತನಾಗಿರುವುದು ಬಹಿರಂಗವಾಯಿತು. ಈ ಪ್ರಕರಣ ಸರ್ಕಾರಿ ನೇಮಕಾತಿ ಪ್ರಕ್ರಿಯೆಯ ವಿಶ್ವಾಸಾರ್ಹತೆ ಮತ್ತು ದಕ್ಷತೆ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X