Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼದಿ ನ್ಯೂಸ್‌ ಮಿನಿಟ್‌ʼ ಮುಖ್ಯ ಸಂಪಾದಕಿ...

ʼದಿ ನ್ಯೂಸ್‌ ಮಿನಿಟ್‌ʼ ಮುಖ್ಯ ಸಂಪಾದಕಿ ಧನ್ಯಾ ರಾಜೇಂದ್ರನ್‌ಗೆ ಪ್ರತಿಷ್ಠಿತ ʼರೆಡ್‌ಇಂಕ್‌ʼ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ4 Dec 2023 12:41 PM IST
share
ʼದಿ ನ್ಯೂಸ್‌ ಮಿನಿಟ್‌ʼ ಮುಖ್ಯ ಸಂಪಾದಕಿ ಧನ್ಯಾ ರಾಜೇಂದ್ರನ್‌ಗೆ ಪ್ರತಿಷ್ಠಿತ ʼರೆಡ್‌ಇಂಕ್‌ʼ ಪ್ರಶಸ್ತಿ

ಹೊಸದಿಲ್ಲಿ: ದಿ ನ್ಯೂಸ್‌ ಮಿನಿಟ್‌ ಆನ್‌ಲೈನ್‌ ಸುದ್ದಿ ತಾಣದ ಸಹ-ಸ್ಥಾಪಕಿ ಮತ್ತು ಮುಖ್ಯ ಸಂಪಾದಕಿ ಧನ್ಯಾ ರಾಜೇಂದ್ರನ್‌ ಅವರಿಗೆ ಮುಂಬೈ ಪ್ರೆಸ್‌ ಕ್ಲಬ್‌ “ಜರ್ನಿಲಿಸ್ಟ್‌ ಆಫ್‌ ದಿ ಇಯರ್”‌ ಎಂದು ಘೋಷಿಸಿ ತನ್ನ 2022 ನ್ಯಾಷನಲ್‌ ರೆಡ್‌ಇಂಕ್‌ ಅವಾರ್ಡ್‌ಗೆ ಆಯ್ಕೆಮಾಡಿದೆ.

2023 ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಮತದಾರ ಡೇಟಾವನ್ನು ತಿರುಚಿದ ಪ್ರಕರಣವನ್ನು ಬಹಿರಂಗಗೊಳಿಸಿದ ತನ್ನ ತಂಡದ ನೇತೃತ್ವ ವಹಿಸಿದ್ದಕ್ಕಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ಧನ್ಯಾ ಅವರ ಜೊತೆಗೆ ಸ್ವತಂತ್ರ ಪತ್ರಕರ್ತ ಶರದ್‌ ವ್ಯಾಸ್‌ ಅವರನ್ನೂ ʼಜರ್ನಲಿಸ್ಟ್‌ ಆಫ್‌ ದಿ ಇಯರ್ʼಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.

ಧನ್ಯಾ ಮತ್ತು ಅವರ ತಂಡದ ತನಿಖಾ ವರದಿಯ ಆಧಾರದಲ್ಲಿ ಚುನಾವಣಾ ಆಯೋಗವು ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಮರುಪರಿಶೀಲನೆಗೆ ಸೂಚಿಸಿತ್ತು. ಈ ವರದಿಯ ಪರಿಣಾಮವಾಗಿ ಮತದಾರರ ಡೇಟಾ ವಂಚನೆ ಹಿಂದಿದ್ದ ಚಿಲುಮೆ ಎನ್‌ಜಿಒ ಇದರ ನಿರ್ದೇಶಕ ಕೃಷ್ಣಪ್ಪ ರವಿಕುಮಾರ್‌ ಅವರ ಬಂಧನವೂ ಆಗಿತ್ತು.

ಕಳೆದೆರಡು ದಶಕಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿರುವ ಧನ್ಯಾ 2014ರಲ್ಲಿ ʼದಿ ನ್ಯೂಸ್‌ ಮಿನಿಟ್‌ʼ ಅನ್ನು ಸಹ-ಸ್ಥಾಪಿಸಿದ್ದರು ಹಾಗೂ ಈ ಮೂಲಕ ದಕ್ಷಿಣ ಭಾರತದ ಸುದ್ದಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು.

“ಜರ್ನಲಿಸ್ಟ್‌ ಆಫ್‌ ದಿ ಇಯರ್” ಪ್ರಶಸ್ತಿ ಪಡೆದ ಶರದ್‌ ವ್ಯಾಸ್‌ ಅವರು ಭಾರತ ಸರ್ಕಾರದ ಗುಪ್ತಚರ ಬ್ಯುರೋ ಇಸ್ರೇಲಿ ಕಂಪೆನಿ ಪೆಗಾಸಸ್‌ನಿಂದ ಸ್ಪೈ ಸಾಫ್ಟ್‌ವೇರ್‌ ಹೇಗೆ ಪಡೆದುಕೊಂಡಿತ್ತು ಎಂಬ ಕುರಿತು ವರದಿ ಪ್ರಕಟಿಸಿದ್ದರು.

ಹಿರಿಯ ಪತ್ರಕರ್ತೆ, ಅಂಕಣಗಾರ್ತಿ ಮತ್ತು ಲೇಖಕಿ ನೀರಜಾ ಚೌಧುರಿ ಅವರಿಗೆ ರೆಡ್‌ ಇಂಕ್‌ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X