Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೆನ್ನೈನಲ್ಲಿ ಅವಳಿ ಅವಘಡ ; ಓರ್ವ ಸಾವು,...

ಚೆನ್ನೈನಲ್ಲಿ ಅವಳಿ ಅವಘಡ ; ಓರ್ವ ಸಾವು, ಕನಿಷ್ಠ 25 ಮಂದಿ ಅಸ್ವಸ್ಥ

ಐಓಸಿಎಲ್ ಬಾಯ್ಲರ್ ಸ್ಫೋಟ ; ರಸಗೊಬ್ಬರ ಕಾರ್ಖಾನೆಯ ಪೈಪ್ ನಿಂದ ಅಮೋನಿಯಾ ಸೋರಿಕೆ

ವಾರ್ತಾಭಾರತಿವಾರ್ತಾಭಾರತಿ27 Dec 2023 9:08 PM IST
share
ಚೆನ್ನೈನಲ್ಲಿ ಅವಳಿ ಅವಘಡ ; ಓರ್ವ ಸಾವು, ಕನಿಷ್ಠ 25 ಮಂದಿ ಅಸ್ವಸ್ಥ

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಭಾರತೀಯ ತೈಲ ನಿಗಮ(ಐಓಸಿಎಲ್)ದ ಸ್ಥಾವರದಲ್ಲಿರುವ ಬಾಯ್ಲರ್ ಬುಧವಾರ ಸ್ಫೋಟಗೊಂಡಿದ್ದು, ಓರ್ವ ಮೃತಪಟ್ಟರುವ ಬಗ್ಗೆ ವರದಿಯಾಗಿದೆ. ಚೆನ್ನೈನ ಇನ್ನೊಂದೆಡೆ ಸಂಭವಿಸಿದ ಅವಘಡವೊಂದರಲ್ಲಿ ರಸಗೊಬ್ಬರ ಕಾರ್ಖಾನೆಯೊಂದರ ಕೊಳವೆಯಿಂದ ಅಮೋನಿಯಾ ಅನಿಲ ಸೋರಿಕೆಯಾಗಿ 25ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ.

ಚೆನ್ನೈನ ಭಾರತೀಯ ತೈಲ ನಿಗಮ (ಐಓಸಿಎಲ್) ಸ್ಥಾವರದ ಎಥೆನಾಲ್ ಸಂಗ್ರಹಾಗಾರದಲ್ಲಿ ಕಾರ್ಮಿಕರ ತಂಡವೊಂದು ವೆಲ್ಡಿಂಗ್ ಕಾರ್ಯದಲ್ಲಿ ತೊಡಗಿದ್ದಾಗ ಬಾಯ್ಲರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಓರ್ವ ವೆಲ್ಡರ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೋರ್ವನಿಗೆ ಗಂಭೀರವಾದ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟದಿಂದ ಬಾಯ್ಲರ್ಗೆ ಬೆಂಕಿ ಹತ್ತಿಕೊಂಡಿದ್ದು, ಕಾರ್ಖಾನೆಯ ಭದ್ರತಾ ಸಿಬ್ಬಂದಿ ತಕ್ಷಣವೇ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಅವರು ಹೇಳಿದ್ದಾರೆ.

ಅವಘಡಕ್ಕೆ ಸ್ಪಷ್ಟ ಕಾರಣವೇನೆಂಬುದು ತಿಳಿದುಬಂದಿಲ್ಲ ಮತ್ತು ಘಟನೆಗೆ ಸಂಬಂಧಿಸಿ ಐಓಸಿಎಲ್ ತನಿಖೆಗೆ ಆದೇಶಿಸಿದೆ.

ಚೆನ್ನೈನಲ್ಲಿ ಇಂದು ಸಂಭವಿಸಿದ ಇನ್ನೊಂದು ಘಟನೆಯಲ್ಲಿ, ನಗರದ ಎನ್ನೋರ್ನಲ್ಲಿ ಖಾಸಗಿ ರಸಗೊಬ್ಬರ ಕಾರ್ಖಾನೆಯ ಜೊತೆ ಸಂಪರ್ಕಿಸಲ್ಪಟ್ಟಿದ್ದ ಪೈಪ್ಲೈನಿಂದ ಅಮೋನಿಯಾ ಸೋರಿಕೆಯಾಗಿದ್ದರಿಂದ ಸುಮಾರು 25 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ವಸ್ಥಗೊಂಡವರಲ್ಲಿ ಉಸಿರಾಟದ ತೊಂದರೆ ಹಾಗೂ ವಾಕರಿಕೆ ಮತ್ತಿತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿತ್ತೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 11;45ರ ವೇಳೆಗೆ ಅನಿಲ ಸೋರಿಕೆ ಸಂಭವಿಸಿದ್ದು, ಉತ್ತರ ಚೆನ್ನೈನ ಪ್ರದೇಶಗಳಲ್ಲಿ ಅಮೋನಿಯಾ ಅನಿಲದ ಹೊಗೆ ಹರಡಿದ್ದರಿಂದ ಅಲ್ಲಿನ ಹಲವಾರು ಮಂದಿ ಅಸ್ವಸ್ಥಗೊಂಡರು. ಹಲವಾರು ಮಂದಿ ಗಂಟಲು ಹಾಗೂ ಎದೆಯಲ್ಲಿ ಉರಿ ಕಾಣಿಸಿಕೊಂಡಿದ್ದು, ಅನೇಕರು ಪ್ರಜ್ಞೆ ಕಳೆದುಕೊಂಡಿದ್ದರು.

ಅನಿಲ ಸೋರಿಕೆಯ ಅನುಭವಾಗುತ್ತಿದ್ದಂತೆಯೇ ಹಲವಾರು ಮಂದಿ ಭಯಭೀತರಾಗಿ ಹೊರಗೋಡಿ ಬಂದು ನೆರೆಹೊರೆಯವರನ್ನೂ ಎಚ್ಚರಿಸಿದರು. ಬಳಿಕ ಏನು ಮಾಡಬೇಕೆಂದು ತಿಳಿಯದೇ ಮುಖ್ಯ ರಸ್ತೆಗೆ ಬಂದರು.

ಮಕ್ಕಳು ಸೇರಿದಂತೆ ರಸಗೊಬ್ಬರ ಕಾರ್ಖಾನೆಗೆ ಸಮೀಪದ ಪ್ರದೇಶಗಳ 25 ನಿವಾಸಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಹೆಚ್ಚಿನವರಿಗೆ ಅಸೌಖ್ಯ, ಉಸಿರಾಟದ ತೊಂದರೆ, ವಾಕರಿಕೆ ಹಾಗೂ ಸುಸ್ತು ಉಂಟಾಗಿತ್ತೆಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X